Wednesday, December 17, 2025
Wednesday, December 17, 2025

ದೌರ್ಜನ್ಯದಿಂದ ಮೃತಪಟ್ಟ ಎಸ್.ಸಿ, ಎಸ್.ಟಿ ಕುಟುಂಬಕ್ಕೆ ಅನುಕಂಪ ನೌಕರಿಗೆ ಆದೇಶ

Date:

ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಳೆದ ಕೆಲವು ದಿನಗಳ ಹಿಂದೆ ದೌರ್ಜನ್ಯಕ್ಕೆ ಒಳಗಾಗಿ ಮೃತಪಟ್ಟಂತ ಪರಿಶಿಷ್ಟ ಜಾತಿ, ವರ್ಗದ ವ್ಯಕ್ತಿಗಳ ಕುಟುಂಬದ ಸದಸ್ಯರಿಗೆ ಅನುಕಂಪದ ಆಧಾರದಲ್ಲಿ ನೌಕರಿ ನೀಡುವುದಾಗಿ ಘೋಷಿಸಿದ್ದರು. ಅದರಂತೆ ಪ್ರಸ್ತುತ ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶವನ್ನು ನೀಡಿದೆ.

ಈ ಕುರಿತಂತೆ ರಾಜ್ಯ ಸರ್ಕಾರದ ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ರಾಜ್ಯ ನಾಗರಿಕ ಸೇವಾ ನಿಯಮಗಳು 1999ಕ್ಕೆ ಮತ್ತಷ್ಟು ತಿದ್ದುಪಡಿ ಮಾಡಲಾಗಿದೆ.

ಈ ತಿದ್ದುಪಡಿ ನಿಯಮದಂತೆ ದೌರ್ಜನ್ಯದಿಂದ ಮೃತಪಟ್ಟ ಪರಿಶಿಷ್ಟ ಜಾತಿ, ವರ್ಗಕ್ಕೆ ಸೇರಿದ ಮೃತ ಕುಟುಂಬಸ್ಥರಿಗೆ ಅನುಕಂಪದ ಆಧಾರದ ನೌಕರಿಯನ್ನು ನೀಡಲಾಗುತ್ತದೆ. ವ್ಯಕ್ತಿ ಮರಣ ಹೊಂದಿದ ದಿನಾಂಕದಿಂದ 3 ವರ್ಷದ ಒಳಗೆ 18 ವರ್ಷಗಳನ್ನು ಪೂರೈಸಿರುವಂತಹ ಮತ್ತು ತದನಂತರ 2 ವರ್ಷಗಳೊಳಗೆ ಅರ್ಜಿಯನ್ನು ಸಲ್ಲಿಸತಕ್ಕದ್ದು ಎಂದು ಮೂಲಗಳು ಮಾಹಿತಿ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shimoga ಕಾಯಿಲೆ ಬಾರದಂತೆ ತಡೆಗಟ್ಟಲು ಮನೆಮದ್ದು ಉಪಕಾರಿ – ಡಾ.ಸುರೇಂದ್ರ

Rotary Shimoga ನಮ್ಮ ಪೂರ್ವಜರು ಎಲ್ಲಾ ಅನಾರೋಗ್ಯಕ್ಕೆ ಐದುಸಾವಿರ ವರ್ಷದಹಿಂದೆಯೆ ಆಯೂರ್...

MESCOM ಡಿಸೆಂಬರ್ 18. ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿ,...

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...