Thursday, February 5, 2026
Thursday, February 5, 2026

ಟಾಟಾ ಐಪಿಎಲ್22 ರಜತ್ ಶತಕ: ಆರ್ಸಿಬಿ 2 ನೇ ಅರ್ಹತಾ ಪಂದ್ಯಕ್ಕೆ ಮುನ್ನಡೆ

Date:

ಐಪಿಎಲ್ 2022 ಟೂರ್ನಿಯ ಎಲಿಮಿನೇಟರ್ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡವನ್ನು ಮಣಿಸಿದ ಆರ್‌ಸಿಬಿ 2ನೇ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಪಡೆದಿದೆ.

ಇದರೊಂದಿಗೆ ಲಖನೌ ಸೂಪರ್ ಜೈಂಟ್ಸ್ ಟೂರ್ನಿಯಿಂದ ಹೊರಬಿದ್ದಿದೆ. ಆರ್‌ಸಿಬಿ ನೀಡಿದ ಬೃಹತ್ ಮೊತ್ತದ ಮುಂದೆ ಲಖನೌ ನಾಯಕ ಕೆಎಲ್ ರಾಹುಲ್ ನಡೆಸಿದ ಹೋರಾಟ ವ್ಯರ್ಥವಾಯಿತು.

ನಾಯಕ ಕೆಎಲ್ ರಾಹುಲ್ ಹಾಗೂ ಮನನ್ ವೋಹ್ರಾ ತಂಡಕ್ಕೆ ಚೇತರಿಕೆ ನೀಡುವ ಪ್ರಯತ್ನ ಮಾಡಿದರು. ಆದರೆ ಇವರ ಜೊತೆಯಾಟ ಗಟ್ಟಿಯಾಗಿ ನೆಲೆಯೂರಲು ಆರ್‌ಸಿಬಿ ಅವಕಾಶ ನೀಡಲಿಲ್ಲ. ವೋಹ್ರಾ 19 ರನ್ ಸಿಡಿಸಿ ಔಟಾದರು. 41 ರನ್‌ಗಳಿಗೆ ಲಖನೌ ಪ್ರಮುಖ 2 ವಿಕೆಟ್ ಕಳೆದುಕೊಂಡಿತು.
ಕೆಎಲ್ ರಾಹುಲ್ ಹಾಗೂ ದೀಪಕ್ ಹೂಡ ಸ್ಫೋಟಕ ಬ್ಯಾಟಿಂಗ್ ಲಖನೌ ತಂಡದಲ್ಲಿ ಗೆಲುವಿನ ಆಸೆ ಚಿಗುರಿಸಿತ್ತು. ಆದರೆ ಹೂಡ 26 ಎಸೆತದಲ್ಲಿ 45 ರನ್ ಸಿಡಿಸಿ ಔಟಾದರು ಇತ್ತ ಹೋರಾಟ ಮುಂದುವರಿಸಿದ ಕೆಎಲ್ ರಾಹುಲ್ 79 ರನ್ ಸಿಡಿಸಿ ಔಟಾದರು.

ರಜತ್ ಪಾಟಿದಾರ್ ಸ್ಫೋಟಕ ಶತಕದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 207 ರನ್ ಸಿಡಿಸಿತ್ತು. 208 ರನ್ ಟಾರ್ಗೆಟ್ ಪಡೆದ ಲಖನೌ ಸೂಪರ್ ಜೈಂಟ್ಸ್ ತಂಡಕ್ಕೆ ಬ್ಯಾಟಿಂಗ್‌ನಲ್ಲೂ ಸಂಕಷ್ಟ ಎದುರಾಯಿತು. ಆರಂಭದಲ್ಲೇ ಕ್ವಿಂಟನ್ ಡಿಕಾಕ್ ವಿಕೆಟ್ ಕಳೆದುಕೊಂಡಿತು. ಡಿಕಾಕ್ 6 ರನ್ ಸಿಡಿಸಿ ಔಟಾದರು.

14 ರನ್ ಗೆಲುವು ದಾಖಲಿಸಿದ ಆರ್‌ಸಿಬಿ 2ನೇ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಪಡೆದಿದೆ.
ಮೇ.27 ರಂದು ನಡೆಯಲಿರುವ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಆರ್‌ಸಿಬಿ, ರಾಜಸ್ಥಾನ ರಾಯಲ್ಸ್ ವಿರುದ್ಧ ಹೋರಾಟ ನಡೆಸಲಿದೆ. ಇತ್ತ ಎಲಿಮಿನೇಟರ್ ಪಂದ್ಯ ಸೋತ ಲಖನೌ ಸೂಪರ್ ಜೈಂಟ್ಸ್ ಟೂರ್ನಿಯಿಂದ ನಿರ್ಗಮಿಸಿದೆ.

ಆರ್‌ಸಿಬಿ ಇನ್ನಿಂಗ್ಸ್
ಎಲಿಮಿನೇಟರ್ ಪಂದ್ಯದಲ್ಲಿ ಆರ್‌ಸಿಬಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದೆ. ಪ್ರಮುಖವಾಗಿ ರಜತ್ ಪಾಟಿದಾರ್ ಭರ್ಜರಿ ಶತಕ ತಂಡದ ಬೃಹತ್ ಮೊತ್ತಕ್ಕೆ ನೆರವಾಯಿತು. ರಜತ್ ಪಾಟಿದಾರ್ 49 ಎಸೆತದಲ್ಲಿ ಶತಕ ಪೂರೈಸಿದರು. ಒಟ್ಟು 54 ಎಸೆತ ಎದುರಿಸಿದ ರಜತ್ ಪಾಟಿದಾರ್ ಅಜೇಯ 112 ರನ್ ಸಿಡಿಸಿದರು. 12 ಬೌಂಡರಿ ಹಾಗೂ 7 ಸಿಕ್ಸರ್ ಸಿಡಿಸಿದರು.

ಕೊಹ್ಲಿ 25 ರನ್, ನಾಯಕ ಫಾಫ್ ಡುಪ್ಲೆಸಿಸ್ ಶೂನ್ಯ, ಗ್ಲೆನ್ ಮ್ಯಾಕ್ಸ್‌ವೆಲ್ 9 ರನ್ ಹಾಗೂ ಮಹಿಪಾಲ್ ಲೊಮ್ರೊರ್ 14 ರನ್ ಸಿಡಿಸಿದರು. ಇದರೊಂದಿಗೆ ಆರ್‌ಸಿಬಿ 4 ವಿಕೆಟ್ ನಷ್ಟಕ್ಕೆ 207 ರನ್ ಸಿಡಿಸಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...