Wednesday, March 25, 2026
Wednesday, March 25, 2026

ತ್ಯಾವರೆಕೊಪ್ಪ ಹುಲಿ ಸಿಂಹಧಾಮದ ಸಂಗಡ ಈಗ ಪಾತರಗಿತ್ತಿ ಪಾರ್ಕ್

Date:

ಶಿವಮೊಗ್ಗದಲ್ಲಿ ಮೊಟ್ಟಮೊದಲ ‘ಚಿಟ್ಟೆ ಪಾರ್ಕ್’ ಸಿದ್ಧವಾಗುತ್ತಿದೆ. ಇಲ್ಲಿ ಬಗೆಬಗೆಯ ಚಿಟ್ಟೆಗಳನ್ನು ಕಣ್ತುಂಬಿಕೊಳ್ಳುವ ಅವಕಾಶ ಲಭಿಸಲಿದೆ. ಅಂದುಕೊಂಡಂತೆ ಆದರೆ ಕೆಲವೆ ಸಮಯದಲ್ಲಿ ಬಣ್ಣ ಬಣ್ಣದ ಪಾತರಗಿತ್ತಿಗಳು ನೋಡುವ ಅದೃಷ್ಟ ಒಲಿಯಲಿದೆ.

ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದಲ್ಲಿ ಚಿಟ್ಟೆ ಪಾರ್ಕ್ ರೆಡಿಯಾಗುತ್ತಿದೆ. ಪ್ರವಾಸಿಗರನ್ನು ಸೆಳೆಯಲು ಮತ್ತು ಅವರ ಮನಸಿಗೆ ಮುದ ನೀಡುವ ಸಲುವಾಗಿ ಈ ಚಿಟ್ಟೆ ಪಾರ್ಕ್ ನಿರ್ಮಾಣ ಮಾಡಲಾಗುತ್ತಿದೆ.

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ಬೃಹತ್ ಚಿಟ್ಟೆ ಪಾರ್ಕ್ ಸ್ಥಾಪಿಸಲಾಗಿದೆ. ಅಲ್ಲಿರುವುದು ಒಳಾಂಗಣ ಪಾರ್ಕ್. ಕಟ್ಟಡವೊಂದರಲ್ಲಿ ಚಿಟ್ಟೆಗಳನ್ನು ಸ್ವಚ್ಛಂದವಾಗಿ ವಿಹರಿಸಲು ವ್ಯವಸ್ಥೆ ಮಾಡಲಾಗಿದೆ. ಆದರೆ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದಲ್ಲಿ ಹೊರಾಂಗಣ ಚಿಟ್ಟೆ ಪಾರ್ಕ್ ಆರಂಭಿಸಲಾಗುತ್ತಿದೆ. ಇದಕ್ಕಾಗಿ ಸ್ಥಳವನ್ನು ನಿಗದಿಪಡಿಸಿ, ಅಭಿವೃದ್ಧಿಪಡಿಸಲಾಗುತ್ತಿದೆ. ಸಫಾರಿಯ ಕ್ಯಾಂಟೀನ್ ಪಕ್ಕದಲ್ಲಿ ಖಾಲಿ ಜಾಗವಿತ್ತು.

ಇದನ್ನು ಚಿಟ್ಟೆ ಪಾರ್ಕ್’ಗೆ ಮೀಸಲಿಡಲಾಗಿದೆ. ಈಗಾಗಲೇ ಆ ಜಾಗವನ್ನ ಅಭಿವೃದ್ಧಿಪಡಿಸಲಾಗುತ್ತಿದೆ. ಕೆಲವೆ ತಿಂಗಳಲ್ಲಿ ಇಲ್ಲಿ ಕಣ್ಣಿಗೆ ಮುದ ನೀಡುವ ಬಣ್ಣ ಬಣ್ಣದ ಚಿಟ್ಟೆಗಳು ರೆಕ್ಕೆ ಬಡಿಯುತ್ತ ಹಾರುವುದನ್ನು ಕಾಣಬಹುದಾಗಿದೆ.

ಚಿಟ್ಟೆ ಪಾರ್ಕ್ ಆರಂಭಿಸುವ ಮೊದಲು ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದ ಸಿಬ್ಬಂದಿ ಸರ್ವೆ ನಡೆಸಿದ್ದರು. ಸಫಾರಿ ಭಾಗದಲ್ಲಿ ಎಷ್ಟು ಬಗೆಯ ಚಿಟ್ಟೆಗಳಿವೆ, ಯಾವೆಲ್ಲ ಜಾತಿಯ ಚಿಟ್ಟೆಗಳಿವೆ ಎಂದು ಪರಿಶೀಲಿಸಿದ್ದರು.

ಈ ಸಂದರ್ಭ ಸುಮಾರು 25 ವಿವಿಧ ಜಾತಿಯ ಚಿಟ್ಟೆಗಳು ಕಂಡು ಬಂದಿವೆ. ಅವುಗಳನ್ನು ಚಿಟ್ಟೆ ಪಾರ್ಕ್‌ನತ್ತ ಸೆಳೆಯುವ ಪ್ರಯತ್ನ ಆರಂಭಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...