Thursday, February 5, 2026
Thursday, February 5, 2026

ಜಾನುವಾರುಗಳ ನಿಗೂಢ ಕಾಯಿಲೆಗಳ ಬಗ್ಗೆ ವೈದ್ಯರಿಗೆ ಕಾರ್ಯಾಗಾರ

Date:

ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗದಲ್ಲಿ ಜಾನುವಾರು ನಿಗೂಢ ಕಾಯಿಲೆಗಳ ಸಂಶೋಧನಾ ಕೇಂದ್ರದಿಂದ ಪಶುವೈದ್ಯರಿಗೆ ಎರಡು ದಿನಗಳ ಕಾರ್ಯಾಗಾರ ನಡೆಯಲಿದೆ.

ಜಾನುವಾರುಗಳ ನಿಗೂಢ ಕಾಯಿಲೆಗಳ ಸಂಶೋಧನಾ ಕೇಂದ್ರ, ಪಶುವೈದ್ಯಕೀಯ ಮಹಾವಿದ್ಯಾಲಯದ ಆವರಣ, ಶಿವಮೊಗ್ಗ ಇಲ್ಲಿ 2 ದಿನಗಳ “ಜಾನುವಾರುಗಳ ರೋಗ ಪತ್ತೆ ಮತ್ತು ಚಿಕಿತ್ಸೆಯಲ್ಲಿ ಇತ್ತೀಚಿನ ಆವಿಷ್ಕಾರಗಳು” ಎಂಬ ಶಿರ್ಷಿಕೆಯ ತಾಂತ್ರಿಕ ಕಾರ್ಯಾಗಾರವನ್ನು ದಿನಾಂಕ 26-27 ಮೇ 2022 ರಂದು ಏರ್ಪಡಿಸಿದ್ದು, ಇದರಲ್ಲಿ ಜಾನುವಾರುಗಳಿಗೆ ಬರುವ ವಿವಿಧ ಕಾಯಿಲೆಗಳ ರೋಗ ಪತ್ತೆ ವಿಧಾನದ ಪ್ರಾಯೋಗಿಕ ಪ್ರಾತ್ಯಕ್ಷಿಕೆಗಳ ಸಮೇತ ತರಬೇತಿಯನ್ನು ವಿಷಯ ತಜ್ಞರಿಂದ ಒದಗಿಸಲಾಯಿತು. ಈ ಕಾರ್ಯಾಗಾರದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ 35 ಪಶುವೈದ್ಯರು ಭಾಗವಹಿಸಿದ್ದು ಕ್ಷೇತ್ರ ಮಟ್ಟದ ಪಶುವೈದ್ಯರ ಜ್ಞಾನ ಹೆಚ್ಚಿಸುವುದರಲ್ಲಿ ಇದು ಸಹಕಾರಿಯಾಗಲಿದೆ ಎಂದು ಪ್ರಧಾನ ಸಂಶೋಧಕರು ಮತ್ತು ಮುಖ್ಯಸ್ಥರಾಗಿರುವ ಡಾ: ಎನ್.ಬಿ.ಶ್ರೀಧರ ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಾ: ಮಹೇಶ್ವರಪ್ಪ,ನಿವೃತ್ತ ಉಪನಿರ್ದೇಶಕರು, ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಕರ್ನಾತಕ ಸರ್ಕಾರ ಇವರು ಭಾಗವಹಿಸಿ, ಕ್ಷೇತ್ರ ಮಟ್ಟದಲ್ಲಿರುವ ಪಶುವೈದ್ಯರು ರೈತರ ಒಳಿತಿಗಾಗಿ ಶ್ರಮಿಸಬೇಕೆಂದರು. ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗದ ಪ್ರಭಾರಿ ಡೀನ್‌ರವರಾದ ಡಾ: ಜಯರಾಮು, ಜಿ ಎಂ ಇವರು ಮಾತನಾಡುತ್ತಾ ಪಶುಚಿಕಿತ್ಸೆಯಲ್ಲಿ ಔಷಧಗಳನ್ನು ಎಚ್ಚರಿಕೆಯೆಂದು ಬಳಸಬೇಕೆಂದು, ಮತ್ತು ಶಿಬಿರದ ಪ್ರಯೋಜನವನ್ನು ಎಲ್ಲರು ಪಡೆಯಬೇಕೆಂದು ಕರೆಯಿತ್ತರು.
ಡಾ: ನಿರಂಜನ ಕಾರ್ಯಕ್ರಮ ನಿರೂಪಿಸಿದರೆ, ಡಾ: ಸುನಿಲಚಂದ್ರ ವಂದನಾರ್ಪಣೆ ಮಾಡಿದರು. ಡಾ: ಕವಿತಾ ರಾಣಿ, ಡಾ: ಆನಂದ, ಡಾ: ಮಂಜುನಾಥ್, ಡಾ: ಮಂಜು, ಡಾ: ಮಾಲತೇಶ್, ಡಾ:ರವೀಂದ್ರ, ಡಾ:ಅರುಣ್, ಡಾ:ಅನಂತಕೃಷ್ಣ ಇವರು ವಿಷಯ ತಜ್ಞರು ಮತ್ತು ಸಂಪೂನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು.

ಡಾ:ಎನ್.ಬಿ.ಶ್ರೀಧರ
ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು
ಪಶುವೈದ್ಯಕೀಯ ಔಷಧಶಾಸ್ತ್ರ ಮತ್ತು ವಿಷಶಾಸ್ತ್ರ ವಿಭಾಗ
ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...