Wednesday, March 25, 2026
Wednesday, March 25, 2026

ಪರಿವಾರವಾದಿಗಳ ಪಕ್ಷದಿಂದ ಸ್ವಾರ್ಥ ಸಾಧನೆ- ಮೋದೀಜಿ

Date:

ಕುಟುಂಬ ರಾಜಕಾರಣದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ಮುಂದುವರೆಸಿದ್ದಾರೆ.

ಪರಿವಾರವಾದಿ’ ಪಕ್ಷಗಳು ಕೇವಲ ರಾಜಕೀಯ ಸಮಸ್ಯೆಯಲ್ಲ, ಬದಲಾಗಿ ನಮ್ಮ ದೇಶದ ಪ್ರಜಾಪ್ರಭುತ್ವ ಮತ್ತು ಯುವಜನತೆಯ ದೊಡ್ಡ ಶತ್ರುವಾಗಿವೆ ಎಂದರು.

ಹೈದರಾಬಾದ್​ನಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು,
21ನೇ ಶತಮಾನದ ಭಾರತವು ‘ಆತ್ಮನಿರ್ಭರ ಭಾರತ್’ ಮತ್ತು ‘ಮೇಕ್ ಇನ್ ಇಂಡಿಯಾ’ ಕನಸಿನೊಂದಿಗೆ ಮುನ್ನಡೆಯುತ್ತಿದೆ. ನಮ್ಮ ಸ್ಟಾರ್ಟ್‌ಅಪ್‌ಗಳು ಪ್ರಪಂಚದ ಮೇಲೆ ಪ್ರಭಾವ ಬೀರುತ್ತಿವೆ. ಇಂದು ನಾವು ವಿಶ್ವದ ಮೂರನೇ ಅತಿದೊಡ್ಡ ಸ್ಟಾರ್ಟ್‌ಅಪ್ ವ್ಯವಸ್ಥೆ ಹೊಂದಿದ್ದೇವೆ ಎಂದು ತಿಳಿಸಿದರು.

ಒಂದು ಕುಟುಂಬಕ್ಕೆ ಸಮರ್ಪಿತವಾಗಿರುವ ರಾಜಕೀಯ ಪಕ್ಷಗಳ ಮುಖವೇ ಭ್ರಷ್ಟಾಚಾರ ಎಂಬುದನ್ನು ನಮ್ಮ ದೇಶ ನೋಡಿದೆ. ‘ಪರಿವಾರವಾದಿ’ ಪಕ್ಷಗಳು ತಮ್ಮ ಅಭಿವೃದ್ಧಿಯ ಬಗ್ಗೆ ಮಾತ್ರ ಯೋಚಿಸುತ್ತವೆ. ಇಂತಹ ಪಕ್ಷಗಳು ಬಡವರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.
ಅಲ್ಲದೇ, ತಮ್ಮ ಕುಟುಂಬ ಮಾತ್ರವೇ ಹೇಗೆ ಅಧಿಕಾರದಲ್ಲಿ ಇರಬೇಕು ಮತ್ತು ಎಷ್ಟು ಸಾಧ್ಯವೋ ಅಷ್ಟು ಲೂಟಿ ಮಾಡಬಹುದು ಎಂಬುದರ ಮೇಲೆಯೇ ಅವರ ರಾಜಕೀಯ ಕೇಂದ್ರೀಕೃತ. ಅವರಿಗೆ ಜನರ ಅಭಿವೃದ್ಧಿಯಲ್ಲಿ ಆಸಕ್ತಿ ಇಲ್ಲ ಎಂದು ತೆಲಂಗಾಣದ ಸಿಎಂ ಕೆಸಿಆರ್​ ಕುಟುಂಬದ ವಿರುದ್ಧ ಪರೋಕ್ಷವಾಗಿ ಮೋದಿ ವಾಗ್ದಾಳಿ ನಡೆಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...