Sunday, May 17, 2026
Sunday, May 17, 2026

ಪರಿವಾರವಾದಿಗಳ ಪಕ್ಷದಿಂದ ಸ್ವಾರ್ಥ ಸಾಧನೆ- ಮೋದೀಜಿ

Date:

ಕುಟುಂಬ ರಾಜಕಾರಣದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ಮುಂದುವರೆಸಿದ್ದಾರೆ.

ಪರಿವಾರವಾದಿ’ ಪಕ್ಷಗಳು ಕೇವಲ ರಾಜಕೀಯ ಸಮಸ್ಯೆಯಲ್ಲ, ಬದಲಾಗಿ ನಮ್ಮ ದೇಶದ ಪ್ರಜಾಪ್ರಭುತ್ವ ಮತ್ತು ಯುವಜನತೆಯ ದೊಡ್ಡ ಶತ್ರುವಾಗಿವೆ ಎಂದರು.

ಹೈದರಾಬಾದ್​ನಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು,
21ನೇ ಶತಮಾನದ ಭಾರತವು ‘ಆತ್ಮನಿರ್ಭರ ಭಾರತ್’ ಮತ್ತು ‘ಮೇಕ್ ಇನ್ ಇಂಡಿಯಾ’ ಕನಸಿನೊಂದಿಗೆ ಮುನ್ನಡೆಯುತ್ತಿದೆ. ನಮ್ಮ ಸ್ಟಾರ್ಟ್‌ಅಪ್‌ಗಳು ಪ್ರಪಂಚದ ಮೇಲೆ ಪ್ರಭಾವ ಬೀರುತ್ತಿವೆ. ಇಂದು ನಾವು ವಿಶ್ವದ ಮೂರನೇ ಅತಿದೊಡ್ಡ ಸ್ಟಾರ್ಟ್‌ಅಪ್ ವ್ಯವಸ್ಥೆ ಹೊಂದಿದ್ದೇವೆ ಎಂದು ತಿಳಿಸಿದರು.

ಒಂದು ಕುಟುಂಬಕ್ಕೆ ಸಮರ್ಪಿತವಾಗಿರುವ ರಾಜಕೀಯ ಪಕ್ಷಗಳ ಮುಖವೇ ಭ್ರಷ್ಟಾಚಾರ ಎಂಬುದನ್ನು ನಮ್ಮ ದೇಶ ನೋಡಿದೆ. ‘ಪರಿವಾರವಾದಿ’ ಪಕ್ಷಗಳು ತಮ್ಮ ಅಭಿವೃದ್ಧಿಯ ಬಗ್ಗೆ ಮಾತ್ರ ಯೋಚಿಸುತ್ತವೆ. ಇಂತಹ ಪಕ್ಷಗಳು ಬಡವರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.
ಅಲ್ಲದೇ, ತಮ್ಮ ಕುಟುಂಬ ಮಾತ್ರವೇ ಹೇಗೆ ಅಧಿಕಾರದಲ್ಲಿ ಇರಬೇಕು ಮತ್ತು ಎಷ್ಟು ಸಾಧ್ಯವೋ ಅಷ್ಟು ಲೂಟಿ ಮಾಡಬಹುದು ಎಂಬುದರ ಮೇಲೆಯೇ ಅವರ ರಾಜಕೀಯ ಕೇಂದ್ರೀಕೃತ. ಅವರಿಗೆ ಜನರ ಅಭಿವೃದ್ಧಿಯಲ್ಲಿ ಆಸಕ್ತಿ ಇಲ್ಲ ಎಂದು ತೆಲಂಗಾಣದ ಸಿಎಂ ಕೆಸಿಆರ್​ ಕುಟುಂಬದ ವಿರುದ್ಧ ಪರೋಕ್ಷವಾಗಿ ಮೋದಿ ವಾಗ್ದಾಳಿ ನಡೆಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...