Sunday, May 17, 2026
Sunday, May 17, 2026

ಎಂಟು ವರ್ಷಗಳ ಆಡಳಿತ:ಮೋದಿ ಅವರ ಟೀಂ ಇಂಡಿಯಾ ಹೆಜ್ಜೆಗುರುತುಗಳು

Date:

ಕಳೆದ 8 ವರ್ಷಗಳಲ್ಲಿ ಎಂದೂ ಕಾಣದ ಪರಿವರ್ತನೆ ಭಾರತದಲ್ಲಿ ಗೋಚರಿಸುತ್ತಿದೆ.
ಈ ಕಾರಣದಿಂದಾದ ಆರ್ಥಿಕ ಬೆಳವಣಿಗೆಯ ಫಲವನ್ನು ಕೂಡ ಜನರು ಪಡೆಯುತ್ತಿದ್ದಾರೆ. ಈ ಪರಿವರ್ತನೆಯ ಸ್ವರೂಪ ಎಷ್ಟು ವೇಗವಾಗಿದೆ ಎಂದರೆ, 2014 ರಿಂದೀಚೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರ ವಹಿಸಿಕೊಂಡ ನಂತರದ ಅವಧಿಯಲ್ಲಿನ ಆರ್ಥಿಕ ಬೆಳವಣಿಗೆಗಳ ವಿವರ ದಾಖಲಿಸುವುದು ಅಷ್ಟು ಸುಲಭವಲ್ಲ.

ದೇಶದ ಗ್ರಾಮೀಣ ಭಾಗದ ಜನತೆ ಬ್ಯಾಂಕ್ ವ್ಯವಹಾರ ಜಾಲದಲ್ಲಿ ದಾಖಲಾಗಿ, ಸರ್ಕಾರದ ನೇರ ಹಣ ವರ್ಗಾವಣೆಗಳಂತಹ ಪರಿಣಾಮಕಾರಿ ಫಲಾನುಭವಕ್ಕೆ ಸಾಕ್ಷಿಯಾದರು.

ದೇಶದ ಗ್ರಾಮೀಣ ಭಾಗದ ಹೆಣ್ಣುಮಕ್ಕಳಿಗೆ ಕುಟುಂಬದ ಅಡುಗೆ ಕಾರ್ಯಕ್ಕೆ ಕಾಡುಕಟ್ಟಿಗೆ, ಪಶುಗಳ ಸಗಣಿ ಕುಳ್ಳುಗಳೇ ಪರಂಪರಾಗತ ಅನಿವಾರ್ಯ ಇಂಧನ ಸಾಧನಗಳಾಗಿದ್ದವು. ಇದು ಮಹಿಳೆಯರ ಆರೋಗ್ಯಕ್ಕೆ ಮಾರಕವಾಗಿತ್ತು. ದೇಶದ ಗೃಹಿಣಿಯರ, ವಿಶೇಷವಾಗಿ ಗ್ರಾಮೀಣ ಬಡ ಹೆಣ್ಣುಮಕ್ಕಳ ಕಾಳಜಿಯೇ ಪ್ರಧಾನಿ ಉಜ್ವಲ ಯೋಜನೆಯ ಕಲ್ಪನೆಯಾಗಿ ಮೂಡಿಬಂತು. ಇದುವರೆಗೆ ದೇಶದಲ್ಲಿ 8 ಕೋಟಿ ಹೊಸ ಅಡುಗೆ ಅನಿಲದ ಸಂಪರ್ಕ ಕಲ್ಪಿಸಲಾಗಿದೆ.

ಪ್ರಧಾನಮಂತ್ರಿ ಆಯುಷ್ಮಾನ್ ಭಾರತ ಯೋಜನೆಯ ಅನುಷ್ಠಾನದಿಂದ ದೇಶದ ಆರೋಗ್ಯ ಕ್ಷೇತ್ರ ವ್ಯಾಪಕವಾಗಿ ಜನತೆಯ ಮನೆ ಬಾಗಿಲಿಗೆ ಬಂದಿದೆ. ಕೇಂದ್ರ ಹಾಗೂ ರಾಜ್ಯಗಳ ಜಂಟಿ ಅನುದಾನಗಳ ಆಧಾರಿತ ಈ ಯೋಜನೆ ದೇಶದ 10 ಕೋಟಿ ಬಡ ಕುಟುಂಬಗಳಿಗೆ ಉಚಿತ ವೈದ್ಯಕೀಯ ಸೌಲಭ್ಯ ನೀಡುವ ಗುರಿ ಇಟ್ಟುಕೊಂಡಿದೆ.

ನರೇಂದ್ರ ಮೋದಿ ನೇತೃತ್ವದ ಟೀಂ ಇಂಡಿಯಾಕ್ಕೆ ದೊರಕಿದ ಇಂತಹ ಗೆಲುವು ಅಭೂತಪೂರ್ವ! ಇದು ಮೋದಿ ನಾಯಕತ್ವದ ಮೂಲಧ್ಯೇಯಗಳಾದ ಸೇವೆ, ಸುಗಮ ಆಡಳಿತ ಹಾಗೂ ಬಡವರ ಕಲ್ಯಾಣದ ಸ್ಪಷ್ಟ ಪ್ರತಿಫಲನವಾಗಿದೆ.

ಈ ಸರ್ಕಾರ ಅಧಿಕಾರ ವಹಿಸಿಕೊಂಡ ತಕ್ಷಣವೇ ಪರಿಚಯಿಸಿದ ಪ್ರಧಾನಮಂತ್ರಿ ಜನಧನ್ ಯೋಜನೆ ಪರಿಣಾಮವಾಗಿ ಬ್ಯಾಂಕಿಂಗ್ ಕ್ಷೇತ್ರವು ದೇಶದ 45 ಕೋಟಿ ಜನರಿಗೆ (ಮೇ, 22-2022ರವರೆಗೆ )ತೆರೆದುಕೊಂಡಿದೆ. ಅಲ್ಲದೆ, 1,67,145 ಕೋಟಿ ರೂ. ಠೇವಣಿ ಬ್ಯಾಂಕುಗಳಲ್ಲಿ ಲಭ್ಯವಿದೆ.

ಇದರಿಂದಾಗಿ, 2016ರಲ್ಲಿದ್ದ ಅಡುಗೆ ಅನಿಲ ಬಳಕೆಯು ಶೇ. 62ರಿಂದ ಶೇ. 99.8ಕ್ಕೆ ಏರಿದೆ. 2022-23 ರ ಆಯವ್ಯಯದಲ್ಲಿ ಇನ್ನೂ 1 ಕೋಟಿ ಹೊಸ ಅಡುಗೆ ಅನಿಲದ ಸಂಪರ್ಕದ ಘೊಷಣೆ ಮಾಡಲಾಗಿದೆ. ಒಟ್ಟಾರೆ ಅಡುಗೆ ಮನೆಗಳನ್ನು ಹೊಗೆಮುಕ್ತವಾಗಿಸಿ ಗ್ರಾಮೀಣ ಮಹಿಳೆಯರನ್ನು ವಿಷಕಾರಿ ಹೊಗೆಯಿಂದ ಮುಕ್ತಗೊಳಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...