Thursday, December 18, 2025
Thursday, December 18, 2025

ಸರ್ಕಾರಿ ಸಿಬ್ಬಂದಿಗೆ ಷಾಕ್ ನೀಡುತ್ತಿರುವ ಪಂಜಾಬ್ ಸಿಎಂ ಮಾನ್

Date:

ಜೈಲುಗಳಲ್ಲಿ ವಿಐಪಿ ಸಂಸ್ಕೃತಿಗೆ ಅಂತ್ಯ ಹಾಡಲು ಪಂಜಾಬ್ ಸರ್ಕಾರ ಮುಂದಾಗಿದೆ.

ಕೈದಿಗಳ ಬಳಿ ಮೊಬೈಲ್​ ಸೇರಿ ಯಾವುದೇ ವಸ್ತುಗಳು ಕಂಡ ಬಂದರೆ ಜೈಲಿನ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುತ್ತಿದೆ. ಇದರಲ್ಲಿ ಈಗ ಫರೀದ್‌ಕೋಟ್ ಜೈಲಿನ ಅಧೀಕ್ಷಕನ ತಲೆ ತಂಡವಾಗಿದೆ.

ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ಆಮ್​ ಆದ್ಮಿ ಸರ್ಕಾರವು ಮಾರ್ಚ್ 16ರಿಂದ ಮೇ 10ರವರೆಗೆ ಜೈಲುಗಳಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಂಡಿದೆ. ಈ ಕಾರ್ಯಾಚರಣೆಯಲ್ಲಿ 710 ಮೊಬೈಲ್​ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ನಡುವೆ ಫರೀದ್‌ಕೋಟ್ ಜೈಲಿನಲ್ಲಿ ಕಂಬಿ ಎಣಿಸುತ್ತಿರುವ ಕೈದಿಯೊಬ್ಬನ ವಿಡಿಯೋ ವೈರಲ್​ ಆಗಿತ್ತು. ಹೀಗಾಗಿ ಜೈಲಿನ ಅಧೀಕ್ಷಕ ಜೋಗಿಂದರ್ ಪಾಲ್ ಅವರನ್ನು ಅಮಾನತುಗೊಳಿಸಲಾಗಿದೆ.

ಈ ಬಗ್ಗೆ ಸ್ವತಃ ಕಾರಾಗೃಹ ಸಚಿವ ಹರ್ಜೋತ್ ಬೈನ್ಸ್ ಟ್ವೀಟ್​ ಮಾಡಿದ್ದು, ‘ಈಗಾಗಲೇ ಆಪ್​ ಸರ್ಕಾರ ಜೈಲುಗಳಲ್ಲಿ ಮೊಬೈಲ್ ಫೋನ್ ಬಳಕೆ ನಿಲ್ಲಿಸಲು ಕಟ್ಟುನಿಟ್ಟಿನ ಆದೇಶ ನೀಡಿದೆ ಎಂದು ತಿಳಿಸಿದ್ದಾರೆ.

ಜೈಲಿನಲ್ಲಿ ಕೈದಿಯ ವಿಡಿಯೋ ವೈರಲ್ ಆದ ಪ್ರಕರಣ ಸಂಬಂಧ ಜೈಲ್ ಸೂಪರಿಂಟೆಂಡೆಂಟ್​ನ್ನು ಅಮಾನತುಗೊಳಿಸಲಾಗಿದೆ.

ಎರಡು ದಿನಗಳ ಹಿಂದೆಯಷ್ಟೇ ಪಂಜಾಬ್​​ ಸಿಎಂ ಭಗವಂತ್ ಮಾನ್ ಅವರು ಕಮಿಷನ್​ ವಿಚಾರ ಸದ್ದು ಮಾಡ್ತಿದ್ದಂತೆ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ಅವರನ್ನು ಸಂಪುಟದಿಂದ ದಿಢೀರ್ ಕಿತ್ತಾಕಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...