Sunday, May 17, 2026
Sunday, May 17, 2026

ಸರ್ಕಾರಿ ಸಿಬ್ಬಂದಿಗೆ ಷಾಕ್ ನೀಡುತ್ತಿರುವ ಪಂಜಾಬ್ ಸಿಎಂ ಮಾನ್

Date:

ಜೈಲುಗಳಲ್ಲಿ ವಿಐಪಿ ಸಂಸ್ಕೃತಿಗೆ ಅಂತ್ಯ ಹಾಡಲು ಪಂಜಾಬ್ ಸರ್ಕಾರ ಮುಂದಾಗಿದೆ.

ಕೈದಿಗಳ ಬಳಿ ಮೊಬೈಲ್​ ಸೇರಿ ಯಾವುದೇ ವಸ್ತುಗಳು ಕಂಡ ಬಂದರೆ ಜೈಲಿನ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುತ್ತಿದೆ. ಇದರಲ್ಲಿ ಈಗ ಫರೀದ್‌ಕೋಟ್ ಜೈಲಿನ ಅಧೀಕ್ಷಕನ ತಲೆ ತಂಡವಾಗಿದೆ.

ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ಆಮ್​ ಆದ್ಮಿ ಸರ್ಕಾರವು ಮಾರ್ಚ್ 16ರಿಂದ ಮೇ 10ರವರೆಗೆ ಜೈಲುಗಳಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಂಡಿದೆ. ಈ ಕಾರ್ಯಾಚರಣೆಯಲ್ಲಿ 710 ಮೊಬೈಲ್​ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ನಡುವೆ ಫರೀದ್‌ಕೋಟ್ ಜೈಲಿನಲ್ಲಿ ಕಂಬಿ ಎಣಿಸುತ್ತಿರುವ ಕೈದಿಯೊಬ್ಬನ ವಿಡಿಯೋ ವೈರಲ್​ ಆಗಿತ್ತು. ಹೀಗಾಗಿ ಜೈಲಿನ ಅಧೀಕ್ಷಕ ಜೋಗಿಂದರ್ ಪಾಲ್ ಅವರನ್ನು ಅಮಾನತುಗೊಳಿಸಲಾಗಿದೆ.

ಈ ಬಗ್ಗೆ ಸ್ವತಃ ಕಾರಾಗೃಹ ಸಚಿವ ಹರ್ಜೋತ್ ಬೈನ್ಸ್ ಟ್ವೀಟ್​ ಮಾಡಿದ್ದು, ‘ಈಗಾಗಲೇ ಆಪ್​ ಸರ್ಕಾರ ಜೈಲುಗಳಲ್ಲಿ ಮೊಬೈಲ್ ಫೋನ್ ಬಳಕೆ ನಿಲ್ಲಿಸಲು ಕಟ್ಟುನಿಟ್ಟಿನ ಆದೇಶ ನೀಡಿದೆ ಎಂದು ತಿಳಿಸಿದ್ದಾರೆ.

ಜೈಲಿನಲ್ಲಿ ಕೈದಿಯ ವಿಡಿಯೋ ವೈರಲ್ ಆದ ಪ್ರಕರಣ ಸಂಬಂಧ ಜೈಲ್ ಸೂಪರಿಂಟೆಂಡೆಂಟ್​ನ್ನು ಅಮಾನತುಗೊಳಿಸಲಾಗಿದೆ.

ಎರಡು ದಿನಗಳ ಹಿಂದೆಯಷ್ಟೇ ಪಂಜಾಬ್​​ ಸಿಎಂ ಭಗವಂತ್ ಮಾನ್ ಅವರು ಕಮಿಷನ್​ ವಿಚಾರ ಸದ್ದು ಮಾಡ್ತಿದ್ದಂತೆ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ಅವರನ್ನು ಸಂಪುಟದಿಂದ ದಿಢೀರ್ ಕಿತ್ತಾಕಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...