Thursday, March 26, 2026
Thursday, March 26, 2026

ಭಾರತದ ಇಮೇಜಿಗೆ ವಿದೇಶಗಳು ಮೆಚ್ಚುಗೆ ಸೂಸಿವೆ-ರಾಜ್ ನಾಥ್ ಸಿಂಗ್

Date:

ಇತ್ತೀಚೆಗೆ ಭಾರತದ ಚಿತ್ರಣ ಬದಲಾಗಿದ್ದು ಅಮೆರಿಕ ಸೇರಿದಂತೆ ಹಲವು ರಾಷ್ಟ್ರಗಳು ಇಂದು ಭಾರತದೊಂದಿಗೆ ಕೈಜೋಡಿಸಲು ಮುಂದಾಗಿವೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್‌ ತಿಳಿಸಿದ್ದಾರೆ.

ಕಾರವಾರದ ಐಎನ್‌ಎಸ್‌ ಕದಂಬ ನೌಕಾನೆಲೆಗೆ ಆಗಮಿಸಿ ಮಾತನಾಡಿದ ಅವರು,
ಈ ಹಿಂದೆ ಭಾರತವನ್ನು ಗಂಭೀರವಾಗಿ ಪರಿಗಣಿಸದೆ ಇದ್ದವರೂ ಈಗ ಭಾರತದತ್ತ ಒಲವು ತೋರುತ್ತಿದ್ದಾರೆ. ಕಾಲ ಬದಲಾಗಿದೆ. ಭಾರತದ ಸಲಹೆ, ಸೂಚನೆಗಳಿಗೆ ಎಲ್ಲೆಡೆ ಗೌರವ ಸಿಗುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ದೇಶದ ಗೌರವ, ಪ್ರತಿಷ್ಠೆ ಹೆಚ್ಚಾಗಿದೆ ಎಂದರು.

ತಾವು ಈಚೆಗೆ ಅಮೆರಿಕಕ್ಕೆ ಭೇಟಿ ನೀಡಿದಾಗ ಅಲ್ಲಿನ ನೌಕಾಪಡೆ ಮುಖ್ಯಸ್ಥರ ಜತೆ ಮಾತುಕತೆ ನಡೆಸಿದ್ದು, ಭಾರತದ ಜತೆ ಕೈಜೋಡಿಸಲು ಅವರು ಬಯಸಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್‌ ಆರ್‌. ಹರಿಕುಮಾರ ಮತ್ತು ವೈಸ್‌ ಅಡ್ಮಿರಲ್‌ ಅಜೇಂದ್ರ ಬಹದ್ದೂರ ಸಿಂಗ್‌, ರಿಯರ್‌ ಅಡ್ಮಿರಲ್‌ ಅತುಲ್‌ ಆನಂದ್‌, ಶಾಸಕಿ ರೂಪಾಲಿ ನಾಯ್ಕ ಮತ್ತಿತರರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...