Friday, February 6, 2026
Friday, February 6, 2026

ವೈಶ್ಯಾವೃತ್ತಿ ಕಾನೂನು ಬದ್ಧ ದಾಳಿ ನಡೆಸಿ ಅವರನ್ನು ಬಂಧಿಸಬಾರದು- ಸುಪ್ರೀಂ

Date:

ವೇಶ್ಯಾವಾಟಿಕೆಯೂ ಕಾನೂನುಬದ್ಧವಾದ ಒಂದು ವೃತ್ತಿ.
ಹೀಗಾಗಿ, ವೇಶ್ಯಾಗೃಹದ ಮೇಲೆ ದಾಳಿ ನಡೆಸಿ ವೇಶ್ಯೆಯರನ್ನು ಪೊಲೀಸರು ಬಂಧಿಸಬಾರದು. ಅವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಬಾರದು ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.

ಸುಪ್ರೀಂ ಕೋರ್ಟ್​ ನ್ಯಾಯಮೂರ್ತಿ ಎಲ್. ನಾಗೇಶ್ವರ ರಾವ್ ನೇತೃತ್ವದ ತ್ರಿಸದಸ್ಯ ಪೀಠವು ಲೈಂಗಿಕ ಕಾರ್ಯಕರ್ತರ ಹಕ್ಕುಗಳನ್ನು ಕಾಪಾಡಲು 6 ನಿರ್ದೇಶನಗಳನ್ನು ನೀಡಿದೆ. ಲೈಂಗಿಕ ಕಾರ್ಯಕರ್ತರು ಕಾನೂನಿನ ಸಮಾನ ರಕ್ಷಣೆಗೆ ಅರ್ಹರಾಗಿರುತ್ತಾರೆ. ಕ್ರಿಮಿನಲ್ ಕಾನೂನು ಎಲ್ಲಾ ಪ್ರಕರಣಗಳಲ್ಲಿ ವಯಸ್ಸು ಮತ್ತು ಒಪ್ಪಿಗೆಯ ಆಧಾರದ ಮೇಲೆ ಸಮಾನವಾಗಿ ಅನ್ವಯಿಸಬೇಕು. ಲೈಂಗಿಕ ಕಾರ್ಯಕರ್ತೆಯು ತನ್ನ ಒಪ್ಪಿಗೆಯೊಂದಿಗೆ ಭಾಗವಹಿಸುತ್ತಿದ್ದಾರೆ ಎಂಬುದು ಸ್ಪಷ್ಟವಾದಾಗ ಪೊಲೀಸರು ಮಧ್ಯಪ್ರವೇಶಿಸಬಾರದು. ಅವರ ವಿರುದ್ಧ ಯಾವುದೇ ಕ್ರಿಮಿನಲ್ ಕ್ರಮ ತೆಗೆದುಕೊಳ್ಳಬಾರದು. ಈ ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಸಂವಿಧಾನದ 2 ನೇ ಪರಿಚ್ಛೇದದ ಅಡಿಯಲ್ಲಿ ಗೌರವಯುತವಾದ ಜೀವನವನ್ನು ಹೊಂದುವ ಹಕ್ಕಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.

ವೇಶ್ಯಾವಾಟಿಕೆಯು ಒಂದು ವೃತ್ತಿಯಾಗಿದೆ. ಇದು ಕಾನೂನುಬಾಹಿರವಲ್ಲ. ಲೈಂಗಿಕ ಕಾರ್ಯಕರ್ತೆಯರು ಕಾನೂನಿನಡಿಯಲ್ಲಿ ಘನತೆ ಮತ್ತು ಸಮಾನ ರಕ್ಷಣೆಗೆ ಅರ್ಹರು ಎಂದು ಸುಪ್ರೀಂ ಕೋರ್ಟ್​ ಹೇಳಿದೆ.

ಸ್ವಯಂಪ್ರೇರಿತ ವೇಶ್ಯಾವಾಟಿಕೆ ಕಾನೂನುಬಾಹಿರವಲ್ಲ ಮತ್ತು ವೇಶ್ಯಾಗೃಹವನ್ನು ನಡೆಸುವುದು ಕಾನೂನುಬಾಹಿರವಾಗಿರುವುದರಿಂದ ವೇಶ್ಯಾಗೃಹಗಳ ಮೇಲಿನ ದಾಳಿಯಲ್ಲಿ ಲೈಂಗಿಕ ಕಾರ್ಯಕರ್ತರನ್ನು ಬಂಧಿಸಬಾರದು, ದಂಡ ವಿಧಿಸಬಾರದು, ಕಿರುಕುಳ ನೀಡಬಾರದು ಎಂದು ಪೀಠವು ಆದೇಶಿಸಿದೆ.
ಲೈಂಗಿಕ ಕಾರ್ಯಕರ್ತೆಯರ ಮಗುವನ್ನು ಕೇವಲ ಲೈಂಗಿಕ ವ್ಯಾಪಾರದಲ್ಲಿ ತೊಡಗಿದ್ದಾರೆ ಎಂಬ ಕಾರಣಕ್ಕೆ ತಾಯಿಯಿಂದ ಬೇರ್ಪಡಿಸಬಾರದು ಎಂದು ನ್ಯಾಯಾಲಯ ಹೇಳಿದೆ.

ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಂಡವರು ವಯಸ್ಕರಾಗಿದ್ದರೆ, ತಾವೇ ಇಷ್ಟಪಟ್ಟು ಈ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರೆ ಅವರ ವಿರುದ್ಧ ಪೊಲೀಸರು ಕ್ರಿಮಿನಲ್ ಕ್ರಮ ಕೈಗೊಳ್ಳುವಂತಿಲ್ಲ.

ಅಪ್ರಾಪ್ತ ವಯಸ್ಕರು ವೇಶ್ಯಾಗೃಹದಲ್ಲಿ ಅಥವಾ ಲೈಂಗಿಕ ಕಾರ್ಯಕರ್ತರೊಂದಿಗೆ ವಾಸಿಸುತ್ತಿರುವುದು ಕಂಡುಬಂದರೆ, ಮಗುವನ್ನು ಕಳ್ಳಸಾಗಣೆ ಮಾಡಲಾಗಿದೆ ಎಂದು ಭಾವಿಸಬಾರದು. ಲೈಂಗಿಕ ಕಾರ್ಯಕರ್ತೆಯರನ್ನು ಈ ಮನೆಗಳಲ್ಲಿ ಇರಿಸಬಹುದು ಮತ್ತು ಲೈಂಗಿಕ ಕಾರ್ಯಕರ್ತೆಯ ಒಪ್ಪಿಗೆಯನ್ನು ಮ್ಯಾಜಿಸ್ಟ್ರೇಟ್ ನಿರ್ಧರಿಸಿದರೆ, ಅವರನ್ನು ಹೊರಗೆ ಬಿಡಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...