ಭಾರತದ ಸರ್ಕಾರದ ಕಚೇರಿಗಳಲ್ಲಿ ಹಾಗೂ ಮದ್ರಾಸ್ ಹೈಕೋರ್ಟ್ನಲ್ಲಿ ತಮಿಳು ಭಾಷೆಯನ್ನು ಅಧಿಕೃತ ಭಾಷೆಯಾಗಿ ಮಾಡುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆ ಪ್ರಸ್ತಾಪಿಸಿದ್ದಾರೆ.
ಚೆನ್ನೈನಲ್ಲಿ ಪ್ರಧಾನಿ ಮೋದಿ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸ್ಟಾಲಿನ್ ಹಲವು ಬೇಡಿಕೆಗಳನ್ನು ಮುಂದಿಟ್ಟರು.
ಶ್ರೀಲಂಕಾದಿಂದ ಕಚ್ಚಾತೀವು ದ್ವೀಪವನ್ನು ಮರಳಿ ಪಡೆಯಬೇಕು ಹಾಗೂ ನೀಟ್ ಪರೀಕ್ಷೆಯಿಂದ ವಿನಾಯಿತಿ ನೀಡುವಂತೆ ಆಗ್ರಹಿಸಿದ್ದಾರೆ.
ಹಿಂದಿಯ ರೀತಿಯಲ್ಲಿ ತಮಿಳನ್ನೂ ಅಧಿಕೃತ ಭಾಷೆಯಾಗಿ ಮಾಡಿ ಹಾಗೂ ಮದ್ರಾಸ್ ಹೈಕೋರ್ಟ್ನಲ್ಲೂ ತಮಿಳು ಅಧಿಕೃತ ಭಾಷೆಯಾಗಲಿ ಎಂದು ಮುಖ್ಯಮಂತ್ರಿ ಸ್ಟಾಲಿನ್ ಒತ್ತಾಯಿಸಿದ್ದಾರೆ. ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ತಮಿಳು ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ನೀಡಲಾಗಿದೆ.
ಇದರೊಂದಿಗೆ ಕೇಂದ್ರದಿಂದ ಬಾಕಿ ಇರುವ ₹14,006 ಕೋಟಿ ಜಿಎಸ್ಟಿ ಮೊತ್ತವನ್ನು ಬಿಡುಗಡೆ ಮಾಡುವಂತೆ ಕೋರಿದ್ದಾರೆ.