Thursday, March 26, 2026
Thursday, March 26, 2026

ಉಡುಪಿಗೆ ಬರುವವರ ಮೇಲೆ ಪೋಲಿಸ್ ವಿಶೇಷ ನಿಗಾ

Date:

ಕರಾವಳಿ ಅತಿಸೂಕ್ಷ್ಮ ಪ್ರದೇಶವಾಗಿದೆ. ಉಡುಪಿಯಲ್ಲಿ ಇತ್ತೀಚೆಗೆ ಹೊರಗಿನಿಂದ ಬಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣ ಹೆಚ್ಚಿದ್ದು ಈ ಬಗ್ಗೆ ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗಿದೆ. ಜತೆಗೆ ಜಿಲ್ಲೆಯ ಎಲ್ಲ ಚೆಕ್‌ಪೋಸ್ಟ್‌ಗಳನ್ನು ಇನ್ನಷ್ಟು ಬಿಗಿಗೊಳಿಸಿ, ಹೊರಗಿನಿಂದ ಬರುವ ಸಂಶಯಾಸ್ಪದ ವ್ಯಕ್ತಿಗಳ ಮೇಲೆ ವಿಶೇಷ ನಿಗಾ ವಹಿಸಲಾಗುವುದು ಎಂದು ಎಡಿಜಿಪಿ ಆಲೋಕ್‌ ಕುಮಾರ್‌ ಹೇಳಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ವಿವಿಧ ಅಧಿಕಾರಿಗಳ ಜತೆ ಸಭೆ ನಡೆಸಿ ಅನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಉಡುಪಿಯಲ್ಲಿ ಹೊರಗಿನವರು ಬಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಇದನ್ನು ತಡೆಯುವ ನಿಟ್ಟಿನಲ್ಲಿ ಕಾನೂನಿನ ಇತಿಮಿತಿಯಲ್ಲಿ ಏನೇನೂ ಮಾಡಲು ಸಾಧ್ಯವೋ ಆ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣದಲ್ಲಿ ಕೆಲವು ತಾಂತ್ರಿಕ ವಿಷಯ ಇರುವುದರಿಂದ ತನಿಖೆ ಇನ್ನಷ್ಟು ಸಮಯ ಹಿಡಿಯಲಿದೆ. ಎಲ್ಲ ಆಯಾಮಗಳಲ್ಲೂ ತನಿಖೆ ನಡೆಯುತ್ತಿದ್ದು ಸಮಿತಿ ಇನ್ನೂ ವರದಿ ನೀಡಿಲ್ಲ ಎಂದು ಹೇಳಿದರು.

ಕರಾವಳಿಯ ಸಮಸ್ಯೆಯನ್ನು ಅರಿಯುವ ನಿಟ್ಟಿನಲ್ಲಿ ಅಧಿಕಾರಿಗಳ ಸಭೆ ನಡೆಸಲಾಗಿದೆ. ಮೊದಲಿನಿಂದಲೂ ಈ ಪ್ರದೇಶದಲ್ಲಿ ಅಂಡರ್‌ವರ್ಲ್ಡ್ ಅನಂತರ ಬೇರೆ ಬೇರೆ ಪ್ರಕರಣ, ಈಗ ಹಿಜಾಬ್‌ ಹೀಗೆ ಸೂಕ್ಷ್ಮ ಪ್ರದೇಶವಾಗಿಯೇ ಉಳಿದಿದೆ. ಯಾವುದೇ ಪ್ರಕರಣ ಬಂದರೂ ಪೊಲೀಸ್‌ ಇಲಾಖೆ ಸಮರ್ಥವಾಗಿ ಎದುರಿಸಲಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...