ಕನ್ನಡಿಗರಿಗೆ ತೊಂದರೆಯಾದರೆ ಕರ್ನಾಟಕ ಸರ್ಕಾರ ಸಹಿಸಿಕೊಳ್ಳುವುದಿಲ್ಲ ಎಂದು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
ಬೆಂಗಳೂರಿನ ಆರ್ ಟಿ ನಗರದಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಎಂಇಎಸ್ ಪುಂಡಾಟಿಕೆಯನ್ನು ಖಂಡಿಸುತ್ತೇವೆ ಎಂದು ತಿಳಿಸಿದ್ದಾರೆ.
ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ. ನಾವು ಸ್ಪಷ್ಟವಾಗಿ ಸಂದೇಶ ಕಳುಹಿಸಿದ್ದೇವೆ. ಕಾನೂನು ಕೈಗೆ ತೆಗೆದುಕೊಳ್ಳುವುದನ್ನು ಸಹಿಸಿಕೊಳ್ಳಲಾಗುವುದಿಲ್ಲ ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರದಂತೆ ರಾಜ್ಯ ಸರ್ಕಾರ ಪೆಟ್ರೋಲ್ ದರ ಕಡಿಮೆ ಮಾಡುವ ಬಗ್ಗೆ ಇದುವರೆಗೆ ಯಾವುದೇ ಚರ್ಚೆ ನಡೆದಿಲ್ಲ. ಚರ್ಚೆ ನಡೆಸಿ ನಂತರ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.