Thursday, March 26, 2026
Thursday, March 26, 2026

ಲಡಾಖ್ ನಲ್ಲಿ ನದಿಗೆ ಉರುಳಿದ ಸೇನಾವಾಹನ : ಏಳು ಮಂದಿ ಮರಣ

Date:

ಲಡಾಖ್‌ನ ತುರ್ತುಕ್ ಸೆಕ್ಟರ್‌ನಲ್ಲಿರುವ ಶ್ಯೋಕ್ ನದಿಗೆ 26 ಯೋಧರನ್ನು ಹೊತ್ತೊಯ್ಯುತ್ತಿದ್ದ ವಾಹನವೊಂದು ಬಿದ್ದಿದೆ.

ಇದರ ಪರಿಣಾಮ ಭಾರತೀಯ ಸೇನೆಯ ಕನಿಷ್ಠ ಏಳು ಯೋಧರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಯೋಧರ ಸಾವಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದುಃಖ ವ್ಯಕ್ತಪಡಿಸಿದ್ದು, ಗಾಯಗೊಂಡವರು ಶೀಘ್ರವೇ ಚೇತರಿಕೆಯಾಗಲಿ ಎಂದು ಹಾರೈಸಿದ್ದಾರೆ.
‘ನಮ್ಮ ಧೀರ ಯೋಧರ ಜೀವವನ್ನು ಕಸಿದುಕೊಂಡ ಲಡಾಖ್​​ನ ರಸ್ತೆ ಅಪಘಾತದ ಬಗ್ಗೆ ಕೇಳಿ ಅತೀವ ನೋವಾಗಿದೆ. ಸಾವಿಗೀಡಾದ ಯೋಧರ ಕುಟುಂಬಗಳಿಗೆ ಸಂತಾಪಗಳು. ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲಿ ಎಂದು ರಾಷ್ಟ್ರಪತಿಭವನದ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ.

ನಮ್ಮ ಧೀರ ಯೋಧರ ಸಾವಿಗೆ ಕಾರಣವಾದ ಲಡಾಖ್ ಬಸ್ ಅಪಘಾತದ ಬಗ್ಗೆ ದುಃಖಿತನಾಗಿದ್ದೇನೆ. ಮೃತರ ಕುಟುಂಬದೊಂದಿಗೆ ನನ್ನ ಪ್ರಾರ್ಥನೆಗಳಿವೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ.ಇದಕ್ಕೆ ಅಗತ್ಯವಿರುವ ಎಲ್ಲ ಸಹಾಯವನ್ನು ಮಾಡಲಾಗುವುದು ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಅಪಘಾತದಲ್ಲಿ ಹತ್ತೊಂಬತ್ತು ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರೆಲ್ಲರನ್ನೂ ಪಂಚಕುಲದಲ್ಲಿರುವ ಸೇನೆಯ ವೆಸ್ಟರ್ನ್ ಕಮಾಂಡ್ ಆಸ್ಪತ್ರೆಗೆ ಏರ್‌ಲಿಫ್ಟ್ ಮಾಡಲಾಗಿದೆ.

ನುಬ್ರಾದಿಂದ ತುರ್ತುಕ್‌ಗೆ ಸೇನಾ ಪಡೆಗಳನ್ನು ಹೊತ್ತೊಯ್ಯುತ್ತಿದ್ದ ವಾಹನವು ಲಾರ್ಗ್ಯಾಬ್, ಪಚ್ಚತಾಂಗ್ ಬಳಿ ನದಿಗೆ ಬಿದ್ದಿದೆ.

ಲಡಾಖ್​​ನಲ್ಲಿ ಸೇನಾವಾಹನ ಅಪಘಾತದ ಬಗ್ಗೆ ಕೇಳಿ ಅತೀವ ದುಃಖವಾಗಿದೆ. ಮೃತರ ಕುಟುಂಬಗಳಿಗೆ ಸಂತಾಪಗಳು. ಗಾಯಗೊಂಡ ಯೋಧರು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ನಾನು ಆಶಿಸುತ್ತೇನೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ವಾಹನವು ಸ್ಕಿಡ್ ಆಗಿ ಸುಮಾರು ,50ರಿಂದ 60 ಅಡಿ ಆಳದ ಶ್ಯೋಕ್ ನದಿಗೆ ಉರುಳಿ ಬಿದ್ದಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Water Tax ಶಿವಮೊಗ್ಗದ ವಿವಿಧೆಡೆ ನೀರಿನ ಕಂದಾಯ ಪಾವತಿ ಕೌಂಟರ್ ವ್ಯವಸ್ಥೆ.

Water Tax ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ...

Adichunchanagiri Mutt ಏಪ್ರಿಲ್1. ಸರಳ ಸಾಮೂಹಿಕ ವಿವಾಹ & ಹಿರಿಯ ಆದರ್ಶ ದಂಪತಿಗಳಿಗೆ ಸನ್ಮಾನ

Adichunchanagiri Mutt ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ...