Wednesday, December 17, 2025
Wednesday, December 17, 2025

ರಾಜ್ಯದಲ್ಲೂ ಉದಯಪುರ ಚಿಂತನೆಯ ಮಾದರಿಶಿಬಿರ-ಡಿಕೆಶಿ

Date:

ರಾಜಸ್ಥಾನದ ಉದಯ ಪುರದಲ್ಲಿ ಆಯೋಜಿಸಿದ್ದ ಮಾದರಿಯಲ್ಲಿ ರಾಜ್ಯದಲ್ಲೂ ಚಿಂತನಾ ಶಿಬಿರ ನಡೆಸಲು ಕರ್ನಾಟಕ ಕಾಂಗ್ರೆಸ್ ಸಮಿತಿ ನಿರ್ಧರಿಸಿದೆ.

ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸುಮಾರು 400 ಜನ ಕಾರ್ಯಕರ್ತ- ಮುಖಂಡರ ಜತೆ ಸೇರಿ ಚರ್ಚಿಸಿ ಈ ಕಾರ್ಯಕ್ರಮ ರೂಪಿಸಲಾಗುತ್ತಿದ್ದು, ಇದಕ್ಕಾಗಿ ಐವರು ಹಿರಿಯ ನಾಯಕರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ ಎಂದರು.

ಜೂನ್ 1,2,3 ರಂದು ಶಿಬಿರ ನಡೆಯಲಿದ್ದು, ಆ ಸಭೆಯಲ್ಲಿ ಕೆಲವು ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಗುತ್ತದೆ. ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಅಧ್ಯಕ್ಷತೆಯಲ್ಲಿ ಬೆಲೆ ಏರಿಕೆ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು. ಪಕ್ಷ ಸಂಘಟನೆ ಕುರಿತು ವಿಧಾನ ಪರಿಷತ್ತಿನ
ಪ್ರತಿ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಸಮಿತಿ ರಚಿಸಲಾಗಿದೆ.

ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ನೇತೃತ್ವದಲ್ಲಿ ರೈತ ಸಮಿತಿ, ರಾಜಕೀಯ ಬೆಳವಣಿಗೆಗಳು ಚುನಾವಣೆ ಚರ್ಚೆಗೆ ಡಾ.ಜಿ ಪರಮೇಶ್ವರ್ ನೇತೃತ್ವದ ಸಮಿತಿ, ಯುವಕರ ಬಗ್ಗೆ ಕೃಷ್ಣಭೈರೇಗೌಡ ನೇತೃತ್ವದ ಸಮಿತಿ ರಚನೆಯಾಗಿದೆ ಎಂದು ತಿಳಿಸಿದರು.

ಶಿಬಿರದಲ್ಲಿ 500 ಕೂ ಹೆಚ್ಚು ಜನ ಭಾಗವಹಿಸಲಿದೆ. 500 ಜನರನ್ನು 6 ಭಾಗ ಮಾಡಿ ಚರ್ಚೆಗೆ ಬಿಡುತ್ತೇವೆ. ಶಾಸಕರು, ಸಂಸದರು, ಮಾಜಿ ಸಚಿವರು, ಮಾಜಿ ಶಾಸಕರು, ಮುಂಚೂಣಿ ಘಟಕಳ ಸದಸ್ಯರು ಪಾಲ್ಗೊಳಲಿದ್ದಾರೆ.

ಮುಂದೆಯೂ ಪಕ್ಷ ಹೇಗೆ ಕೆಲಸ ಮಾಡಬೇಕೆಂಬ ಬಗ್ಗೆ ಶಿಬಿರದಲ್ಲಿ ಚರ್ಚೆ ನಡೆಯಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 18. ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿ,...

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...