Sunday, July 26, 2026
Sunday, July 26, 2026

ರಾಜ್ಯದಲ್ಲೂ ಉದಯಪುರ ಚಿಂತನೆಯ ಮಾದರಿಶಿಬಿರ-ಡಿಕೆಶಿ

Date:

ರಾಜಸ್ಥಾನದ ಉದಯ ಪುರದಲ್ಲಿ ಆಯೋಜಿಸಿದ್ದ ಮಾದರಿಯಲ್ಲಿ ರಾಜ್ಯದಲ್ಲೂ ಚಿಂತನಾ ಶಿಬಿರ ನಡೆಸಲು ಕರ್ನಾಟಕ ಕಾಂಗ್ರೆಸ್ ಸಮಿತಿ ನಿರ್ಧರಿಸಿದೆ.

ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸುಮಾರು 400 ಜನ ಕಾರ್ಯಕರ್ತ- ಮುಖಂಡರ ಜತೆ ಸೇರಿ ಚರ್ಚಿಸಿ ಈ ಕಾರ್ಯಕ್ರಮ ರೂಪಿಸಲಾಗುತ್ತಿದ್ದು, ಇದಕ್ಕಾಗಿ ಐವರು ಹಿರಿಯ ನಾಯಕರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ ಎಂದರು.

ಜೂನ್ 1,2,3 ರಂದು ಶಿಬಿರ ನಡೆಯಲಿದ್ದು, ಆ ಸಭೆಯಲ್ಲಿ ಕೆಲವು ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಗುತ್ತದೆ. ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಅಧ್ಯಕ್ಷತೆಯಲ್ಲಿ ಬೆಲೆ ಏರಿಕೆ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು. ಪಕ್ಷ ಸಂಘಟನೆ ಕುರಿತು ವಿಧಾನ ಪರಿಷತ್ತಿನ
ಪ್ರತಿ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಸಮಿತಿ ರಚಿಸಲಾಗಿದೆ.

ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ನೇತೃತ್ವದಲ್ಲಿ ರೈತ ಸಮಿತಿ, ರಾಜಕೀಯ ಬೆಳವಣಿಗೆಗಳು ಚುನಾವಣೆ ಚರ್ಚೆಗೆ ಡಾ.ಜಿ ಪರಮೇಶ್ವರ್ ನೇತೃತ್ವದ ಸಮಿತಿ, ಯುವಕರ ಬಗ್ಗೆ ಕೃಷ್ಣಭೈರೇಗೌಡ ನೇತೃತ್ವದ ಸಮಿತಿ ರಚನೆಯಾಗಿದೆ ಎಂದು ತಿಳಿಸಿದರು.

ಶಿಬಿರದಲ್ಲಿ 500 ಕೂ ಹೆಚ್ಚು ಜನ ಭಾಗವಹಿಸಲಿದೆ. 500 ಜನರನ್ನು 6 ಭಾಗ ಮಾಡಿ ಚರ್ಚೆಗೆ ಬಿಡುತ್ತೇವೆ. ಶಾಸಕರು, ಸಂಸದರು, ಮಾಜಿ ಸಚಿವರು, ಮಾಜಿ ಶಾಸಕರು, ಮುಂಚೂಣಿ ಘಟಕಳ ಸದಸ್ಯರು ಪಾಲ್ಗೊಳಲಿದ್ದಾರೆ.

ಮುಂದೆಯೂ ಪಕ್ಷ ಹೇಗೆ ಕೆಲಸ ಮಾಡಬೇಕೆಂಬ ಬಗ್ಗೆ ಶಿಬಿರದಲ್ಲಿ ಚರ್ಚೆ ನಡೆಯಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಮಹಿಳೆಯರ ಆರ್ಥಿಕ ಸ್ವಾವಲಂಬನೆಯು ದೇಶದ ಅಭಿವೃದ್ಧಿಗೆ ಪೂರಕ- ಡಾ.ಹೆಚ್.ಬಿ.ಮಂಜುನಾಥ್,ದಾವಣಗೆರೆ.

Shivamogga News ದಾವಣಗೆರೆ.ಜು. 24. ಆರ್ಥಿಕ ಶಿಸ್ತು ಮಹಿಳೆಯರಲ್ಲಿ ತುಸು ಹೆಚ್ಚು,...

Gruhalakshmi Yojana ಗೃಹಲಕ್ಷ್ಮಿ ಯೋಜನೆ ನವೀಕರಣ: ಮನೆಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಣೆ. ಜನರು ಸಹಕರಿಸಿ- ಹೆಚ್.ಎಂ.ಮಧು.

Gruhalakshmi Yojana ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಅನುಷ್ಟಾನಗೊಳ್ಳುತ್ತಿದ್ದು, ಗೃಹಲಕ್ಷಿö್ಮ ಯೋಜನೆಯಡಿ...

Canara Bank ಹೊಳಲೂರಿನ ಸಿಬಿಆರ್ ಎಸ್ಇಟಿಐ ನಲ್ಲಿ ಬ್ಯಾಂಕ್ ಸಾಲ ಸೌಲಭ್ಯ ಮತ್ತು ಉದ್ಯಮಶೀಲತಾ ಕಾರ್ಯಕ್ರಮ.

Canara Bank ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ...

World Environment Day ಜನ್ಮದಿನಾಚರಣೆಗೆ ಕೇಕ್ ಕತ್ತರಿಸಬೇಡಿ.ಒಂದು ಗಿಡ ನೆಡಿ- ಡಾ. ನಾಗರಾಜ್. ‌ಪರಿಸರ

World Environment Day ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪರಿಸರ ವಿಜ್ಞಾನ ವಿಭಾಗದ ವತಿಯಿಂದ...