Sunday, March 29, 2026
Sunday, March 29, 2026

ಗರೀಬ್ ಕಲ್ಯಾಣ್ ಯೋಜನೆ ಮೋದಿ ಅವರಿಂದ ವರ್ಚುವಲ್ ಸಂವಾದ

Date:

ಆಯಷ್ಮಾನ್ ಭಾರತ ಯೋಜನೆಯಿಂದ ತಮ್ಮ ತಾಯಿ ಸೇರಿದಂತೆ ಊರಿನ ಹಲವರಿಗೆ ವೈದ್ಯಕೀಯ ಸೌಲಭ್ಯ ಸಿಕ್ಕಿದೆ ಎಂದು ಕಲಬುರಗಿ ಜಿಲ್ಲೆಯ ಮಹಿಳೆಯ ಮಾತಿಗೆ ಪ್ರಧಾನಿ ಮೋದಿಜಿ ಅವರು ಸಂತೋಷವಾಗಿದ್ದಾರೆ. ನಾನು ಕರ್ನಾಟಕದಲ್ಲಿದ್ದರೆ‌ ನಿಮ್ಮ ಮನೆಗೆ ಬರುತ್ತಿದ್ದೆ ಎಂದು ವರ್ಚುಯಲ್‌ ವೇದಿಕೆಯಲ್ಲಿ ಮೋದಿ ಅವರು ತಿಳಿಸಿದ್ದಾರೆ.

ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ವೇದಿಕೆ ಮೂಲಕ ಶಿಮ್ಲಾದಲ್ಲಿ ಆಯೋಜಿಸಿದ್ದ ಗರೀಬ್ ಕಲ್ಯಾಣ್ ಸಮ್ಮೇಳನದ ಅಂಗವಾಗಿ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಕಿಣ್ಣಿ ಸಡಕ್ ಗ್ರಾಮದ ಸಂತೋಷಿ ಅವರೊಂದಿಗೆ ಸಂವಾದ ನಡೆಸಿದರು. ಆಯುಷ್ಮಾನ್ ಭಾರತ್ ಯೋಜನೆಯ ಫಲಾನುಭವಿ ಸಂತೋಷಿ ಅನಾರೋಗ್ಯ ಪೀಡಿತರಾದ ತಮ್ಮ ತಾಯಿಗೆ ಆಯುಷ್ಮಾನ್ ಭಾರತ್ ಯೋಜನೆಯಡಿ ಉಚಿತ ಚಿಕಿತ್ಸೆ ಮತ್ತು ಜನ ಔಷಧಿ ಕೇಂದ್ರದಲ್ಲಿ ಕೈಗೆಟಕುವ ದರದಲ್ಲಿ ಔಷಧ ದೊರೆತ ಬಗ್ಗೆ ಹರ್ಷವನ್ನು ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಸಂತೋಷಿ ಕನ್ನಡದಲ್ಲಿ ಮಾತನಾಡಿದ್ದಾರೆ. ಅಧಿಕಾರಿಯೊಬ್ಬರು ಅದನ್ನು ಹಿಂದಿಗೆ ಅನುವಾದಿಸಿದ್ದಾರೆ.

ಪ್ರಧಾನಿ ಮೋದಿ ಅವರು ಮಾತನಾಡಿ, ನೀವು ಕನ್ನಡದಲ್ಲಿ ಮಾತನಾಡಿದರೂ ನಿಮ್ಮ ಮುಖದ ಭಾವನೆ ಸಂತಸದಲ್ಲಿರುವುದು ತೋರಿಸುತ್ತದೆ. ನಾನು ಪಕ್ಷದ ಕಾರ್ಯಕರ್ತನಾಗಿ ಕರ್ನಾಟಕದಲ್ಲಿದ್ದರೆ ನಿಮ್ಮ ಮನೆಗೆ ಬಂದು ಸಂತೋಷದಲ್ಲಿ ಭಾಗಿಯಾಗುತ್ತಿದ್ದೆ ಎಂದು ಪ್ರಧಾನಿ ಮೋದಿ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kote SeethaRamanjaneya Temple ವೈಭವದಿಂದ ನಡೆದ ಶ್ರೀಆಂಜನೇಯಸ್ವಾಮಿ ರಥೋತ್ಸವ

Kote SeethaRamanjaneya Temple ಪುರಾತನವಾದ ಶ್ರೀ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಪ್ರತಿವರ್ಷದಂತೆ...

Department of Kannada and Culture ಶ್ರೀಅಗ್ನಿಬನ್ನಿರಾಯಸ್ವಾಮಿಯವರ ಇತಿಹಾಸವನ್ನ ನಾವೆಲ್ಲಾ ತಿಳಿದುಕೊಳ್ಳಬೇಕು- ಆನಂದ್.

Department of Kannada and Culture ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು...

Rotary Club Shimoga ಚಿನ್ನ,ಬೆಳ್ಳಿ ಧಾರಣೆ ವ್ಯತ್ಯಾಸಕ್ಕೆ ಜಾಗತಿಕ ಸಮಸ್ಯೆಗಳೇ ಕಾರಣ- ಸೆಂಥಿಲ್ ವೆಲನ್.

Rotary Club Shimoga ಚಿನ್ನ ಮತ್ತು ಬೆಳ್ಳಿ ಕಷ್ಟಕಾಲದಲ್ಲಿ ಅಪತ್ಬಾಂದವ ರೀತಿಯಲ್ಲಿ ವರ್ತಿಸುತ್ತದೆ....

S. N. Channabasappa ಮಾದಕ ದ್ಯವ್ಯ ವ್ಯಸನ ವಿರೋಧಿ ಕ್ರಮಗಳಿಗೆ ವಿಶೇಷ ಕಾರ್ಯಪಡೆ ರಚನೆ ಮಾಡಿ- ಎಸ್.ಎನ್.ಚನ್ನಬಸಪ್ಪ.

S. N. Channabasappa ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧ ಕೃತ್ಯಗಳು ಮತ್ತು ಮಾದಕ...