ರಾಜ್ಯಸಭೆ ಚುನಾವಣೆಯಲ್ಲಿ ಹೊಸದೊಂದು ತಿರುವು ಸಿಕ್ಕಿದೆ. ಜೆಡಿಎಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ.
ಇಂದು ಸಿದ್ದರಾಮಯ್ಯ ಅವರ ಮನೆಗೆ ಭೇಟಿ ನೀಡಿದ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು, ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಗೆಲುವಿಗಾಗಿ ಕಾಂಗ್ರೆಸ್ ಬೆಂಬಲ ನೀಡುವ ಸಂಬಂಧ ಭೇಟಿಯಾಗಿ ಮನವಿ ಮಾಡಿಕೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
