Sunday, March 29, 2026
Sunday, March 29, 2026

ಕಾಂಗ್ರೆಸ್& ಜೆಡಿಎಸ್ ನಿಂದ ಹಣವಂತರಿಗೆ ಟಿಕೆಟ್- ಸದಾನಂದಗೌಡ

Date:

ಹಿಂದೆ ವಿಧಾನ ಪರಿಷತ್ ಗೆ ಹಣವಿದ್ದವರಿಗೆ ಮಾತ್ರ ಪ್ರವೇಶ ಸಿಗುತ್ತಿತ್ತು. ಆದರೆ, ಈಗ ಕಾಲ ಬದಲಾಗಿದೆ. ಪ್ರತಿಯೊಂದು ಕ್ಷೇತ್ರಗಳಿಂದ ಪ್ರಬುದ್ಧರನ್ನು ನೇಮಕ ಮಾಡಲಾಗುತ್ತಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದಲ್ಲಿ ಹಣವಿದ್ದವರಿಗೆ ಮಾತ್ರ ಮೇಲ್ಮನೆಗೆ ಟಿಕೆಟ್ ನೀಡಲಾಗುತ್ತಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ತಿಳಿಸಿದ್ದಾರೆ.

ಮೈಸೂರಿನಲ್ಲಿ ಮಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಗುಡ್ಡಗಾಡಿನಲ್ಲಿ ವಾಸ ಮಾಡುವವರ ಬಗ್ಗೆ ಯಾರು ಧ್ವನಿ ಎತ್ತುವುದಿಲ್ಲ.
ಅಂತವರನ್ನು ಬಿಜೆಪಿ ಗುರುತಿಸಿ ಟಿಕೆಟ್ ನೀಡಿದೆ. ಇದು ಪಕ್ಷದ ಸಂಪ್ರದಾಯ. ಬಿಜೆಪಿ ಅಭ್ಯರ್ಥಿ ಮೈ.ವಿ ರವಿಶಂಕರ್, ನಾಲ್ಕು ಜಿಲ್ಲೆಗಳ ಜವಾಬ್ದಾರಿ ತೆಗೆದುಕೊಂಡು ಕೆಲಸ ಮಾಡಿದ್ದಾರೆ. ಕಳೆದ ಬಾರಿ ಅಲ್ಪ‌ ಮತಗಳಿಂದ ಸೋಲಾಯಿತು.ಈ ಚುನಾವಣೆಯಲ್ಲಿ ನಮಗೆ ಯಾರು ಪ್ರತಿಸ್ಪರ್ಧಿಗಳೇ ಇಲ್ಲಾ ಎಂದು ಹೇಳಿದ್ದಾರೆ.

ಬಿಜೆಪಿಗೆ ಈ ಭಾರಿ ದೊಡ್ಡ ರೀತಿಯಲ್ಲಿ ಜನ ಬೆಂಬಲವಿದೆ. ಬಿಜೆಪಿ ಅಭ್ಯರ್ಥಿ ಪಕ್ಷದ ನಿಷ್ಟಾವಂತ ಕಾರ್ಯಕರ್ತನಾಗಿ ಕೆಲಸ ಮಾಡುತ್ತಾರೆ. ಮೈಸೂರಿನಲ್ಲಿ ಈ ಭಾರಿ ಸಂಘನಾತ್ಮಕ ಕೆಲಸ ಮಾಡುತ್ತಿದ್ದೇವೆ. ಈ ಬಾರಿ ಗೆದ್ದೆ ಗೆಲ್ಲುತ್ತೇವೆ ಎಂದು ಸದಾನಂದ ಗೌಡ ಅವರು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಘದ ಮೇಲೆ ಟ್ವೀಟ್ ಮಾಡಿ ಸುಸ್ತಾಗಿದೆ. ಇಂದಿನಿಂದ ಕುಮಾರಸ್ವಾಮಿ ಅವರ ವಿರುದ್ಧ ವಾರ್ ಶುರುವಾಗಿದೆ. ಕಾಂಗ್ರೆಸ್ ಅಳಿವಿನ ಅಂಚಿನಲ್ಲಿದೆ. ಅವರ ಟ್ವೀಟ್ ಗೆ ಉತ್ತರ ಕೊಡದೇ ಇರುವುದೇ ಲೇಸು. ಟ್ವೀಟ್ ಮಾಡುವುದೇ ಅವರಿಗೆ ಅಭ್ಯಾಸವಾಗಿದೆ ಎಂದು ಸದಾನಂದ ಗೌಡ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ 8000 ಹುದ್ದೆಗಳನ್ನ ಭರ್ತಿ ಮಾಡಲಾಗುವುದು,- ಸಿದ್ಧರಾಮಯ್ಯ.

CM Siddharamaih ಪೊಲೀಸ್ ಸೇವೆಯಲ್ಲಿ ಶಿಸ್ತು, ಸಂಯಮ, ಪ್ರಾಮಾಣಿಕತೆ, ಮಾನವೀಯತೆ ಬಹಳ ಮುಖ್ಯ....

Kuvempu University ಜೋನ್ ಲೀಲಾ ಮಾಡ್ತಾ ಅವರಿಗೆ ಪಿಎಚ್.ಡಿ. ಪದವಿ

Kuvempu University  ಎನ್.ಶಾಂತನಾಯ್ಕ ಮಾರ್ಗದರ್ಶನದಲ್ಲಿ ಜೋನ್ ಲೀಲಾ ಮಾಡ್ತಾ ಕಲಾ ಅಧ್ಯಯನ...

Shivamogga Police ಶಿವಮೊಗ್ಗ ಪೊಲೀಸ್ ಇಲಾಖೆಯ ಮೂವರಿಗೆ ಮುಖ್ಯಮಂತ್ರಿಗಳ ಪದಕ ಪುರಸ್ಕಾರ.

Shivamogga Police 2025ನೇ ಸಾಲಿನ ಮುಖ್ಯ ಮಂತ್ರಿಗಳ ಪದಕಕ್ಕೆ ಶಿವಮೊಗ್ಗ ಜಿಲ್ಲಾ ಪೊಲೀಸ್...