Wednesday, December 17, 2025
Wednesday, December 17, 2025

ಕಾಂಗ್ರೆಸ್& ಜೆಡಿಎಸ್ ನಿಂದ ಹಣವಂತರಿಗೆ ಟಿಕೆಟ್- ಸದಾನಂದಗೌಡ

Date:

ಹಿಂದೆ ವಿಧಾನ ಪರಿಷತ್ ಗೆ ಹಣವಿದ್ದವರಿಗೆ ಮಾತ್ರ ಪ್ರವೇಶ ಸಿಗುತ್ತಿತ್ತು. ಆದರೆ, ಈಗ ಕಾಲ ಬದಲಾಗಿದೆ. ಪ್ರತಿಯೊಂದು ಕ್ಷೇತ್ರಗಳಿಂದ ಪ್ರಬುದ್ಧರನ್ನು ನೇಮಕ ಮಾಡಲಾಗುತ್ತಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದಲ್ಲಿ ಹಣವಿದ್ದವರಿಗೆ ಮಾತ್ರ ಮೇಲ್ಮನೆಗೆ ಟಿಕೆಟ್ ನೀಡಲಾಗುತ್ತಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ತಿಳಿಸಿದ್ದಾರೆ.

ಮೈಸೂರಿನಲ್ಲಿ ಮಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಗುಡ್ಡಗಾಡಿನಲ್ಲಿ ವಾಸ ಮಾಡುವವರ ಬಗ್ಗೆ ಯಾರು ಧ್ವನಿ ಎತ್ತುವುದಿಲ್ಲ.
ಅಂತವರನ್ನು ಬಿಜೆಪಿ ಗುರುತಿಸಿ ಟಿಕೆಟ್ ನೀಡಿದೆ. ಇದು ಪಕ್ಷದ ಸಂಪ್ರದಾಯ. ಬಿಜೆಪಿ ಅಭ್ಯರ್ಥಿ ಮೈ.ವಿ ರವಿಶಂಕರ್, ನಾಲ್ಕು ಜಿಲ್ಲೆಗಳ ಜವಾಬ್ದಾರಿ ತೆಗೆದುಕೊಂಡು ಕೆಲಸ ಮಾಡಿದ್ದಾರೆ. ಕಳೆದ ಬಾರಿ ಅಲ್ಪ‌ ಮತಗಳಿಂದ ಸೋಲಾಯಿತು.ಈ ಚುನಾವಣೆಯಲ್ಲಿ ನಮಗೆ ಯಾರು ಪ್ರತಿಸ್ಪರ್ಧಿಗಳೇ ಇಲ್ಲಾ ಎಂದು ಹೇಳಿದ್ದಾರೆ.

ಬಿಜೆಪಿಗೆ ಈ ಭಾರಿ ದೊಡ್ಡ ರೀತಿಯಲ್ಲಿ ಜನ ಬೆಂಬಲವಿದೆ. ಬಿಜೆಪಿ ಅಭ್ಯರ್ಥಿ ಪಕ್ಷದ ನಿಷ್ಟಾವಂತ ಕಾರ್ಯಕರ್ತನಾಗಿ ಕೆಲಸ ಮಾಡುತ್ತಾರೆ. ಮೈಸೂರಿನಲ್ಲಿ ಈ ಭಾರಿ ಸಂಘನಾತ್ಮಕ ಕೆಲಸ ಮಾಡುತ್ತಿದ್ದೇವೆ. ಈ ಬಾರಿ ಗೆದ್ದೆ ಗೆಲ್ಲುತ್ತೇವೆ ಎಂದು ಸದಾನಂದ ಗೌಡ ಅವರು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಘದ ಮೇಲೆ ಟ್ವೀಟ್ ಮಾಡಿ ಸುಸ್ತಾಗಿದೆ. ಇಂದಿನಿಂದ ಕುಮಾರಸ್ವಾಮಿ ಅವರ ವಿರುದ್ಧ ವಾರ್ ಶುರುವಾಗಿದೆ. ಕಾಂಗ್ರೆಸ್ ಅಳಿವಿನ ಅಂಚಿನಲ್ಲಿದೆ. ಅವರ ಟ್ವೀಟ್ ಗೆ ಉತ್ತರ ಕೊಡದೇ ಇರುವುದೇ ಲೇಸು. ಟ್ವೀಟ್ ಮಾಡುವುದೇ ಅವರಿಗೆ ಅಭ್ಯಾಸವಾಗಿದೆ ಎಂದು ಸದಾನಂದ ಗೌಡ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 18. ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿ,...

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...