Monday, February 9, 2026
Monday, February 9, 2026

ಕಾಂಗ್ರೆಸ್& ಜೆಡಿಎಸ್ ನಿಂದ ಹಣವಂತರಿಗೆ ಟಿಕೆಟ್- ಸದಾನಂದಗೌಡ

Date:

ಹಿಂದೆ ವಿಧಾನ ಪರಿಷತ್ ಗೆ ಹಣವಿದ್ದವರಿಗೆ ಮಾತ್ರ ಪ್ರವೇಶ ಸಿಗುತ್ತಿತ್ತು. ಆದರೆ, ಈಗ ಕಾಲ ಬದಲಾಗಿದೆ. ಪ್ರತಿಯೊಂದು ಕ್ಷೇತ್ರಗಳಿಂದ ಪ್ರಬುದ್ಧರನ್ನು ನೇಮಕ ಮಾಡಲಾಗುತ್ತಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದಲ್ಲಿ ಹಣವಿದ್ದವರಿಗೆ ಮಾತ್ರ ಮೇಲ್ಮನೆಗೆ ಟಿಕೆಟ್ ನೀಡಲಾಗುತ್ತಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ತಿಳಿಸಿದ್ದಾರೆ.

ಮೈಸೂರಿನಲ್ಲಿ ಮಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಗುಡ್ಡಗಾಡಿನಲ್ಲಿ ವಾಸ ಮಾಡುವವರ ಬಗ್ಗೆ ಯಾರು ಧ್ವನಿ ಎತ್ತುವುದಿಲ್ಲ.
ಅಂತವರನ್ನು ಬಿಜೆಪಿ ಗುರುತಿಸಿ ಟಿಕೆಟ್ ನೀಡಿದೆ. ಇದು ಪಕ್ಷದ ಸಂಪ್ರದಾಯ. ಬಿಜೆಪಿ ಅಭ್ಯರ್ಥಿ ಮೈ.ವಿ ರವಿಶಂಕರ್, ನಾಲ್ಕು ಜಿಲ್ಲೆಗಳ ಜವಾಬ್ದಾರಿ ತೆಗೆದುಕೊಂಡು ಕೆಲಸ ಮಾಡಿದ್ದಾರೆ. ಕಳೆದ ಬಾರಿ ಅಲ್ಪ‌ ಮತಗಳಿಂದ ಸೋಲಾಯಿತು.ಈ ಚುನಾವಣೆಯಲ್ಲಿ ನಮಗೆ ಯಾರು ಪ್ರತಿಸ್ಪರ್ಧಿಗಳೇ ಇಲ್ಲಾ ಎಂದು ಹೇಳಿದ್ದಾರೆ.

ಬಿಜೆಪಿಗೆ ಈ ಭಾರಿ ದೊಡ್ಡ ರೀತಿಯಲ್ಲಿ ಜನ ಬೆಂಬಲವಿದೆ. ಬಿಜೆಪಿ ಅಭ್ಯರ್ಥಿ ಪಕ್ಷದ ನಿಷ್ಟಾವಂತ ಕಾರ್ಯಕರ್ತನಾಗಿ ಕೆಲಸ ಮಾಡುತ್ತಾರೆ. ಮೈಸೂರಿನಲ್ಲಿ ಈ ಭಾರಿ ಸಂಘನಾತ್ಮಕ ಕೆಲಸ ಮಾಡುತ್ತಿದ್ದೇವೆ. ಈ ಬಾರಿ ಗೆದ್ದೆ ಗೆಲ್ಲುತ್ತೇವೆ ಎಂದು ಸದಾನಂದ ಗೌಡ ಅವರು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಘದ ಮೇಲೆ ಟ್ವೀಟ್ ಮಾಡಿ ಸುಸ್ತಾಗಿದೆ. ಇಂದಿನಿಂದ ಕುಮಾರಸ್ವಾಮಿ ಅವರ ವಿರುದ್ಧ ವಾರ್ ಶುರುವಾಗಿದೆ. ಕಾಂಗ್ರೆಸ್ ಅಳಿವಿನ ಅಂಚಿನಲ್ಲಿದೆ. ಅವರ ಟ್ವೀಟ್ ಗೆ ಉತ್ತರ ಕೊಡದೇ ಇರುವುದೇ ಲೇಸು. ಟ್ವೀಟ್ ಮಾಡುವುದೇ ಅವರಿಗೆ ಅಭ್ಯಾಸವಾಗಿದೆ ಎಂದು ಸದಾನಂದ ಗೌಡ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ಜೈಲಿನಿಂದ ಬಿಡುಗಡೆಯಾದ ರೌಡಿ ಶೀಟರ್ ಕಾಲಿಗೆ ಗುಂಡು

Breaking News ಶಿವಮೊಗ್ಗಜಿಲ್ಲೆಯ ಭದ್ರಾವತಿ ತಾಲೂಕಿನ ಶಿವಾನಿ ಕ್ರಾಸ್ ಬಳಿ ರೌಡಿ...

Shimoga News ಯಶಸ್ವಿ ಅಂಡಮಾನ್ ಪ್ರವಾಸ ಪೂರೈಸಿದ ಪ್ರವಾಸಿಗರ ” ಸ್ನೇಹ ಮಿಲನ” ಕಾರ್ಯಕ್ರಮ

Shimoga News ಇತ್ತೀಚೆಗೆ ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ ,ಯೂತ್...

Siddaramaiah ಎಂಎಸ್ಐಎಲ್ ವತಿಯಿಂದ ಚಿಟ್ಸ್ ಮತ್ತು ಸಾಫ್ಟ್ ವೇರ್ ,ಮೊಬೈಲ್ ಆ್ಯಪ್ ಬಿಡುಗಡೆ.

Siddaramaiah ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ವತಿಯಿಂದ ವಿಧಾನಸೌಧದ ಬ್ಯಾಕ್ವಿಂಟ್...

Shimoga Bharat Scouts and Guides ಶಿಬಿರಗಳು ಮಕ್ಕಳ ನಡುವೆ ಉತ್ತಮ ಬಾಂಧವ್ಯ ರೂಪಿಸುತ್ತವೆ- ಶಕುಂತಲಾ ಚಂದ್ರಶೇಖರ್

Shimoga Bharat Scouts and Guides ಮಕ್ಕಳಲ್ಲಿನ ಸುಪ್ತ ಪ್ರತಿಭೆಗಳನ್ನು ಹೊರ...