ಶಿವಮೊಗ್ಗ ನಗರದಲ್ಲಿ ತಡರಾತ್ರಿ ಗುಡುಗು ಸಹಿತ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತ ಗೊಂಡಿತ್ತು. ಸ್ಮಾರ್ಟ್ ಸಿಟಿ ಕಾಮಗಾರಿಯಿಂದಾಗಿ ರಸ್ತೆಯ ಗುಂಡಿಗಳಲ್ಲಿ ನೀರು ತುಂಬಿದ ಕಾರಣ ವಾಹನ ಸವಾರರು ಹರಸಾಹಸ ಪಡುವಂತಾಗಿತ್ತು. ರಾಜ್ಯಾದ್ಯಂತ ಮುಂಗಾರು ಚುರುಕಾಗಿದ್ದು, ಹವಾಮಾನ ಇಲಾಖೆಯು ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರಿಯಲಿದ್ದು, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಇದರೊಂದಿಗೆ ಈ ಜಿಲ್ಲೆ ಗಳಲ್ಲಿ ಯಲ್ಲೊ ಅಲರ್ಟ್ ಎಚ್ಚರಿಕೆ ನೀಡಿದೆ.
ಗಾಳಿ , ಮಳೆಗೆ ತತ್ತರಿಸಿದ ಶಿವಮೊಗ್ಗ
Date: