Monday, July 27, 2026
Monday, July 27, 2026

ಹಿಜಾಬ್ ಧರಿಸಿ ಶಾಲೆಗೆ ಬಂದ ವಿದ್ಯಾರ್ಥಿನಿಯರ ಅಮಾನತು

Date:

ಶಾಲಾ-ಕಾಲೇಜು ಆವರಣದಲ್ಲಿ ವಸ್ತ್ರ ಸಂಹಿತೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿತ್ತು.

ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದು, ಶಾಲಾ-ಕಾಲೇಜು ಆವರಣದಲ್ಲಿ ಧಾರ್ಮಿಕ ಉಡುಪು ಧರಿಸಿ ಬರೋದಂತೆ ಖಡಕ್ ಆದೇಶದಲ್ಲಿ ಸೂಚಿಸಿತ್ತು.

ಆದರೆ, ಈ ನಿಯಮವನ್ನು ಪದೇ ಪದೇ ಮೀರಿ, ಹಿಜಾಬ್ ಧರಿಸಿಯೇ ಬಂದಂತ 6 ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತಗೊಳಿಸಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆಯ ಕಾಲೇಜಿಗೆ, ಕೋರ್ಟ್ ಆದೇಶವಿದೆ. ಹಿಜಾಬ್ ತೆಗೆದಿರಿಸಿ ಕಾಲೇಜು ತರಗತಿಗೆ ಹಾಜರಾಗುವಂತೆ ಪ್ರಾಂಶುಪಾಲರು, ಉಪನ್ಯಾಸಕರು ಸೂಚಿಸಿದ್ದರು.

ಆದರೆ ಆ 6 ವಿದ್ಯಾರ್ಥಿನಿಯರು ಮಾತ್ರ ಕೋರ್ಟ್ ಆದೇಶ, ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರ ಸೂಚನೆಗೆ ಡೋಂಟ್ ಕೇರ್ ಎಂಬುದಾಗಿ ಹಿಜಾಬ್ ಧರಿಸಿಯೇ ಕಾಲೇಜಿಗೆ ಆಗಮಿಸುತ್ತಿದ್ದರು.

ಈ ಹಿನ್ನಲೆಯಲ್ಲಿ ಪ್ರಾಂಶುಪಾಲರು, ಉಪನ್ಯಾಸಕರು ಸಭೆ ನಡೆಸಿ, ಕೋರ್ಟ್ ಆದೇಶ, ಶಿಕ್ಷಣ ಇಲಾಖೆಯ ಆದೇಶವನ್ನು ಧಿಕ್ಕರಿಸಿ, ತರಗತಿಗೆ ಹಿಜಾಬ್ ಧರಿಸಿಯೇ ಬರುತ್ತಿರುವಂತ ವಿದ್ಯಾರ್ಥನಿಯಗಳನ್ನು ಕಾಲೇಜಿನಿಂದ ಅಮಾನತುಗೊಳಿಸಿರುವ ತೀರ್ಮಾನವನ್ನು ಕೈಗೊಂಡಿದ್ದಾರೆ.

ಹೀಗಾಗಿ ಕೋರ್ಟ್ ಆದೇಶವನ್ನು ಧಿಕ್ಕರಿಸಿ, ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸುತ್ತಿದ್ದಂತ 6 ವಿದ್ಯಾರ್ಥಿನಿಯರನ್ನು ಉಪ್ಪನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಅಮಾನತುಗೊಳಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prahlad Joshi ಅತ್ಯಂತ ವಿನಮ್ರತೆ ಹಾಗೂ ನಿಷ್ಠೆಯಿಂದೀ ಕರ್ತವ್ಯ ಸ್ವೀಕರಿಸುತ್ತಿದ್ದೇನೆ- ಪ್ರಹ್ಲಾದ ಜೋಷಿ.

Prahlad Joshi ಇಂದು ಭಾರತ ಸರ್ಕಾರದ ಕೇಂದ್ರ ಶಿಕ್ಷಣ ಸಚಿವರಾಗಿ ಶ್ರೀ ಪ್ರಹ್ಲಾದ...

Samarth Ramdas”ಸಾತ್ವಿಕ ಹೃದಯಿ” ಸಮರ್ಥ ರಾಮದಾಸರು. ಲೇ; ಪ್ರಸಾದ್ ಶ್ರೀವತ್ಸ, ದಾವಣಗೆರೆ.

Samarth Ramdas ಜಾಂಬ ಎಂಬ ಪುಟ್ಟ ಹಳ್ಳಿ ಔರಂಗಾಬಾದ್‌ ಜಿಲ್ಲೆಯಲ್ಲಿದೆ. ಅಲ್ಲಿ...

K.S.Eshwarappa ಕನಕರ ಸ್ಥಳಮಾಹಿತಿ ಉತ್ಖನನ ಕಾರ್ಯ ಅರ್ಥಪೂರ್ಣ. ಇಂತಹ ಸಂಶೋಧನೆಗಳಿಗೆ ನನ್ನ ಬೆಂಬಲವಿದೆ – ಕೆ.ಎಸ್.ಈಶ್ವರಪ್ಪ.

K.S.Eshwarappa ಪ್ರಸ್ತುತ ಸಮಾಜದಲ್ಲಿ ಇತಿಹಾಸ ಪ್ರಜ್ಞೆ ಕೊರತೆಯಿದೆ. ಇಂತಹಸನ್ನಿವೇಶದಲ್ಲಿ ಇತಿಹಾಸ ಪ್ರಾಧ್ಯಾಪಕ,...

Dharmendra Pradhan ಧರ್ಮೇಂದ್ರ ಪ್ರಧಾನ್ ರಾಜಿನಾಮೆ,ಕೇವಲ ನೈತಿಕ ಜವಾಬ್ದಾರಿ ಎತ್ತಿ ಹಿಡಿದಿದೆ ಅಷ್ಟೆ- ವಸಂತಕುಮಾರ್.

Dharmendra Pradhan ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಕೇವಲ ನೈತಿಕತೆಯ ಜವಾಬ್ದಾರಿ ಎತ್ತಿ...