Thursday, December 11, 2025
Thursday, December 11, 2025

ಹಿಜಾಬ್ ಧರಿಸಿ ಶಾಲೆಗೆ ಬಂದ ವಿದ್ಯಾರ್ಥಿನಿಯರ ಅಮಾನತು

Date:

ಶಾಲಾ-ಕಾಲೇಜು ಆವರಣದಲ್ಲಿ ವಸ್ತ್ರ ಸಂಹಿತೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿತ್ತು.

ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದು, ಶಾಲಾ-ಕಾಲೇಜು ಆವರಣದಲ್ಲಿ ಧಾರ್ಮಿಕ ಉಡುಪು ಧರಿಸಿ ಬರೋದಂತೆ ಖಡಕ್ ಆದೇಶದಲ್ಲಿ ಸೂಚಿಸಿತ್ತು.

ಆದರೆ, ಈ ನಿಯಮವನ್ನು ಪದೇ ಪದೇ ಮೀರಿ, ಹಿಜಾಬ್ ಧರಿಸಿಯೇ ಬಂದಂತ 6 ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತಗೊಳಿಸಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆಯ ಕಾಲೇಜಿಗೆ, ಕೋರ್ಟ್ ಆದೇಶವಿದೆ. ಹಿಜಾಬ್ ತೆಗೆದಿರಿಸಿ ಕಾಲೇಜು ತರಗತಿಗೆ ಹಾಜರಾಗುವಂತೆ ಪ್ರಾಂಶುಪಾಲರು, ಉಪನ್ಯಾಸಕರು ಸೂಚಿಸಿದ್ದರು.

ಆದರೆ ಆ 6 ವಿದ್ಯಾರ್ಥಿನಿಯರು ಮಾತ್ರ ಕೋರ್ಟ್ ಆದೇಶ, ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರ ಸೂಚನೆಗೆ ಡೋಂಟ್ ಕೇರ್ ಎಂಬುದಾಗಿ ಹಿಜಾಬ್ ಧರಿಸಿಯೇ ಕಾಲೇಜಿಗೆ ಆಗಮಿಸುತ್ತಿದ್ದರು.

ಈ ಹಿನ್ನಲೆಯಲ್ಲಿ ಪ್ರಾಂಶುಪಾಲರು, ಉಪನ್ಯಾಸಕರು ಸಭೆ ನಡೆಸಿ, ಕೋರ್ಟ್ ಆದೇಶ, ಶಿಕ್ಷಣ ಇಲಾಖೆಯ ಆದೇಶವನ್ನು ಧಿಕ್ಕರಿಸಿ, ತರಗತಿಗೆ ಹಿಜಾಬ್ ಧರಿಸಿಯೇ ಬರುತ್ತಿರುವಂತ ವಿದ್ಯಾರ್ಥನಿಯಗಳನ್ನು ಕಾಲೇಜಿನಿಂದ ಅಮಾನತುಗೊಳಿಸಿರುವ ತೀರ್ಮಾನವನ್ನು ಕೈಗೊಂಡಿದ್ದಾರೆ.

ಹೀಗಾಗಿ ಕೋರ್ಟ್ ಆದೇಶವನ್ನು ಧಿಕ್ಕರಿಸಿ, ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸುತ್ತಿದ್ದಂತ 6 ವಿದ್ಯಾರ್ಥಿನಿಯರನ್ನು ಉಪ್ಪನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಅಮಾನತುಗೊಳಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sahyadri Narayana Hospital ವೈದ್ಯರ ಚಿಕಿತ್ಸೆಯಿಂದ ತಾಯಿಗೆ ದೃಷ್ಟಿ, ಅವಧಿಪೂರ್ವ ಮಗುವಿಗೆ ಜೀವದಾನ

Sahyadri Narayana Hospital 25 ವರ್ಷದ ಯುವತಿ ಗಂಡನ ಜೊತೆ ಸಂತೋಷವಾಗಿದ್ದಳು....

Akashavani Bhadravati ಆಕಾಶವಾಣಿಯಲ್ಲಿ ಹೆಲ್ತ್ ಹಿಂಟ್ಸ್ ಮತ್ತು ಬದುಕು ಜಟಕಾಬಂಡಿ ವಿಶೇಷ ಕಾರ್ಯಕ್ರಮಗಳ ಪ್ರಸಾರ

Akashavani Bhadravati ಡಿ 15 ರಿಂದ ಆಕಾಶವಾಣಿ ಭದ್ರಾವತಿ ಕೇಂದ್ರದಿಂದ ಪ್ರತಿದಿನ...

Sahyadri Narayana Multispeciality Hospital ವಿಐಎಸ್‌ಎಲ್‌ವತಿಯಿಂದ ಸಾಮಾಜಿಕ ಕಳಕಳಿಯ ಅಂಗವಾಗಿ ಉಚಿತ ವೈಧ್ಯಕೀಯ ಆರೋಗ್ಯ ಶಿಬಿರ

Sahyadri Narayana Multispeciality Hospital ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಾದ ಸಹ್ಯಾದ್ರಿ ನಾರಾಯಣ...

ಪ.ಜಾ. ಪತ್ರಿಕೋದ್ಯಮ ವಿದ್ಯಾರ್ಥಿಗಳಿಂದ ಅಪ್ರೆಂಟಿಸ್‌ಶಿಪ್ ತರಬೇತಿಗೆ ಅರ್ಜಿ ಆಹ್ವಾನ

Information and Public Relations Department ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ...