Monday, May 25, 2026
Monday, May 25, 2026

ಹಿಜಾಬ್ ಧರಿಸಿ ಶಾಲೆಗೆ ಬಂದ ವಿದ್ಯಾರ್ಥಿನಿಯರ ಅಮಾನತು

Date:

ಶಾಲಾ-ಕಾಲೇಜು ಆವರಣದಲ್ಲಿ ವಸ್ತ್ರ ಸಂಹಿತೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿತ್ತು.

ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದು, ಶಾಲಾ-ಕಾಲೇಜು ಆವರಣದಲ್ಲಿ ಧಾರ್ಮಿಕ ಉಡುಪು ಧರಿಸಿ ಬರೋದಂತೆ ಖಡಕ್ ಆದೇಶದಲ್ಲಿ ಸೂಚಿಸಿತ್ತು.

ಆದರೆ, ಈ ನಿಯಮವನ್ನು ಪದೇ ಪದೇ ಮೀರಿ, ಹಿಜಾಬ್ ಧರಿಸಿಯೇ ಬಂದಂತ 6 ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತಗೊಳಿಸಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆಯ ಕಾಲೇಜಿಗೆ, ಕೋರ್ಟ್ ಆದೇಶವಿದೆ. ಹಿಜಾಬ್ ತೆಗೆದಿರಿಸಿ ಕಾಲೇಜು ತರಗತಿಗೆ ಹಾಜರಾಗುವಂತೆ ಪ್ರಾಂಶುಪಾಲರು, ಉಪನ್ಯಾಸಕರು ಸೂಚಿಸಿದ್ದರು.

ಆದರೆ ಆ 6 ವಿದ್ಯಾರ್ಥಿನಿಯರು ಮಾತ್ರ ಕೋರ್ಟ್ ಆದೇಶ, ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರ ಸೂಚನೆಗೆ ಡೋಂಟ್ ಕೇರ್ ಎಂಬುದಾಗಿ ಹಿಜಾಬ್ ಧರಿಸಿಯೇ ಕಾಲೇಜಿಗೆ ಆಗಮಿಸುತ್ತಿದ್ದರು.

ಈ ಹಿನ್ನಲೆಯಲ್ಲಿ ಪ್ರಾಂಶುಪಾಲರು, ಉಪನ್ಯಾಸಕರು ಸಭೆ ನಡೆಸಿ, ಕೋರ್ಟ್ ಆದೇಶ, ಶಿಕ್ಷಣ ಇಲಾಖೆಯ ಆದೇಶವನ್ನು ಧಿಕ್ಕರಿಸಿ, ತರಗತಿಗೆ ಹಿಜಾಬ್ ಧರಿಸಿಯೇ ಬರುತ್ತಿರುವಂತ ವಿದ್ಯಾರ್ಥನಿಯಗಳನ್ನು ಕಾಲೇಜಿನಿಂದ ಅಮಾನತುಗೊಳಿಸಿರುವ ತೀರ್ಮಾನವನ್ನು ಕೈಗೊಂಡಿದ್ದಾರೆ.

ಹೀಗಾಗಿ ಕೋರ್ಟ್ ಆದೇಶವನ್ನು ಧಿಕ್ಕರಿಸಿ, ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸುತ್ತಿದ್ದಂತ 6 ವಿದ್ಯಾರ್ಥಿನಿಯರನ್ನು ಉಪ್ಪನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಅಮಾನತುಗೊಳಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಬದುಕಿನ ಪುಟದಲ್ಲೊಂದು ಘಟನೆ

ಪ್ರಸಾದ್ ಶ್ರೀವತ್ಸ ,ದಾವಣಗೆರೆ. Klive Special Article ಮನುಷ್ಯನೆಂದ ಮೇಲೆ ಹಲವಾರು ಸರಿ-ತಪ್ಪು...

Rotary Shivamogga ವೈವಿಧ್ಯಮಯ ಕಲಾಪ್ರಕಾರಗಳ ಕಲಿಕೆಯಿಂದ ಮಕ್ಕಳಲ್ಲಿ ಆತ್ಮವಿಶ್ವಾಸ ವೃದ್ಧಿ- ಡಿ.ಕಿಶೋರ್ ಕುಮಾರ್

Rotary Shivamogga ಬಾಲ್ಯದಿಂದಲೇ ಕಲೆ, ಸಾಹಿತ್ಯ, ನೃತ್ಯದ ಬಗ್ಗೆ ಮಕ್ಕಳಲ್ಲಿ ಆಸಕ್ತಿ...

Dinesh Gundu Rao ಎಬೊಲಾ ಸೋಂಕು ಬಾರದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ.- ದಿನೇಶ್ ಗುಂಡೂರಾವ್

Dinesh Gundu Rao ಎಬೋಲಾ ಸೋಂಕು ಬಾರದಂತೆ ತಡೆಯಲು ಆರೋಗ್ಯ ಇಲಾಖೆಯಿಂದ...