Friday, April 10, 2026
Friday, April 10, 2026

ಮೋಹನ್ ಭಾಗವತ್ ಹೇಳಿಕೆ ಬಗ್ಗೆ ರಜಾಕ್ ಪ್ರತಿಕ್ರಿಯೆ

Date:

ಮಸೀದಿಗಳಲ್ಲಿ ಶಿವಲಿಂಗ ಹುಡುಕುವುದು ಬೇಡ ಎಂಬ ಆರ್ಎಸ್ಎಸ್ ಮುಖ್ಯಸ್ಥರಾದ ಸರಸಂಘಚಾಲಕ ಮೋಹನ್ ಭಾಗವತ್ ಅವರ ಹೇಳಿಕೆಯನ್ನು ಮುಸ್ಲಿಮ್ ನಾಯಕ ಅಬ್ದುಲ್ ರಜಾಕ್ ಖಂಡಿಸಿದ್ದಾರೆ.

ಈ ವಿಷಯದ ಕುರಿತು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ವಿವಾದ ಆರಂಭಿಸುವುದೇ ಇವರು. ಈಗ ತಡೆಯೋಣ ಎನ್ನುವುದೂ ಇವರೇ. ಈಗ ಚರ್ಚೆಯಲ್ಲಿರುವ ವಿವಾದಗಳಲ್ಲಿ ಯಾವುದೇ ಸತ್ಯವಿಲ್ಲ ಎಂದು ಇವರಿಗೆ ಚೆನ್ನಾಗಿ ಗೊತ್ತು ಎಂದು ಅವರು ಹೇಳಿದ್ದಾರೆ.

ವಿಡಿಯೋ ಸರ್ವೇ ನಂತರ ಅದು ಲಿಂಗ ಎಂದು ಹೇಳುತ್ತಿದ್ದಾರೆ. ಸರ್ಕಾರಗಳು ಇಂಥ ವಿಚಾರಗಳನ್ನು ಕೈಬಿಟ್ಟು ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಗಮನಹರಿಸಬೇಕು. ಇಷ್ಟು ದಿನದಿಂದ ಮೋಹನ್ ಭಗವತ್ ಏನು ಮಾಡುತ್ತಿದ್ದರು? ಈಗ ಬಂದು ಶಿವಲಿಂಗ ಹುಡುಕುವುದು ಬೇಡ ಎಂದು ಹೇಳಿದ್ದಾರೆ. ಇಷ್ಟು ದಿನದ ನಮ್ಮ ನೆಮ್ಮದಿ ಹಾಳಾಗಿದೆ. ಜನರ ಭಾವನೆಗಳ ಜೊತೆಗೆ ಯಾರೂ ಆಟವಾಡಬಾರದು ಎಂದು ತಿಳಿಸಿದ್ದಾರೆ.

ತಡವಾದರೂ ಪರವಾಗಿಲ್ಲ, ಈಗಲಾದರೂ ಅವರು ಮಾತಾಡಿದ್ದಾರೆ. ರಾಜ್ಯದಲ್ಲಿ ಸೃಷ್ಟಿಯಾಗಿರುವ ವಿವಾದನಗಳಿಗೆ ಕಡಿವಾಣ ಹಾಕಲು ಏನಾದರೂ ಮಾಡಲಿ. ಮಂಡ್ಯ, ಮಂಗಳೂರು, ಚಾಮರಾಜಪೇಟೆ ವಿವಾದಗಳು ನಿಲ್ಲಲಿ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Krishnashastry ಶ್ವೇತವಸ್ತ್ರದ ಸಂತ, ಬೆಳಗೆರೆ ಕೃಷ್ಣಶಾಸ್ತ್ರಿಗಳು.

ಲೇ: ಪ್ರಸಾದ್ ಶ್ರೀವತ್ಸ.ದಾವಣಗೆರೆ. Krishnashastry ಅದು ನಾನು ಹತ್ತನೇ ತರಗತಿಯನ್ನು ಮುಗಿಸಿ, ಪಿಯುಸಿಯ...

JCI Shimoga ಜೇಸಿಸ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ ವತಿಯಿಂದ “ಬಾಕ್ಸ್ ಕ್ರಿಕೆಟ್ ಪಂದ್ಯಾವಳಿ” ಟ್ರೋಫಿ ಅನಾವರಣ.

JCI Shimoga ಜೇಸಿಸ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್, ಶಿವಮೊಗ್ಗ ವತಿಯಿಂದ ದಿನಾಂಕ...

Hulikal Ghat ಹುಲಿಕಲ್ ಘಾಟಿಯಲ್ಲಿ ಧರೆ ಕುಸಿತ. ಕಾಮಗಾರಿಯಲ್ಲಿದ್ದ ಮೂವರು ಕಾಣೆ. ಶೋಧಕಾರ್ಯ ಪ್ರಗತಿ.

Hulikal Ghat ಹುಲಿಕಲ್ ಘಾಟಿಯಲ್ಲಿ ರಸ್ತೆ ಕಾಮಗಾರಿ ವೇಳೆ ಅವಘಡ ಸಂಭವಿಸಿದೆ.ಕಾಮಗಾರಿ...