Monday, August 24, 2026
Monday, August 24, 2026

ಗಾಂಜಾ ಸಮಸ್ಯೆ : ಶಾಸಕರ ಪತ್ರ

Date:

ಶಿವಮೊಗ್ಗ ನಗರದಲ್ಲಿ ಇತ್ತೀಚೆಗೆ ಗಾಂಜಾ ಹಾವಳಿ ಹೆಚ್ಚಾಗಿದ್ದು, ಯುವ ಸಮೂಹ ಮಾದಕ ವ್ಯಸನಕ್ಕೆ ಬಲಿಯಾಗುತ್ತಿದೆ. ಇದರಲ್ಲಿ ಬಹುಪಾಲು ಶಾಲಾ-ಕಾಲೇಜು ವಿದ್ಯಾರ್ಥಿಗಳು ಮಾದಕ ವ್ಯಸನದಿಂದ ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ.
ಈ ಕುರಿತು ಸ್ಥಳೀಯರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಶಿವಮೊಗ್ಗ ನಗರದ ಎಲ್ಲಾ ಕಡೆಗಳಲ್ಲಿಯೂ ಗಾಂಜಾ ದೊರೆಯುತ್ತಿದೆ ಎಂಬ ಮಾತು ಕೇಳಿಬರುತ್ತಿದೆ. ಶಾಲೆಗಳು ಪ್ರಾರಂಭ ವಾಗದೇ ಇದ್ದುದ್ದರಿಂದ ಶಾಲಾ-ಕಾಲೇಜುಗಳ ಮೈದಾನದಲ್ಲಿ ಗುಂಪು-ಗುಂಪಾಗಿ ಗಾಂಜಾ ಸೇವನೆ ಮತ್ತು ಮಾರಾಟದ ಅವ್ಯಾವಹತವಾಗಿ ನಡೆಯುತ್ತಿದೆ ಎಂಬ ಬಗ್ಗೆ ಸಾರ್ವಜನಿಕರಿಂದ ದೂರು ದಾಖಲಾಗಿದೆ. ಅಲ್ಲದೆ ಇನ್ನೂ ಅಭಿವೃದ್ಧಿಯಾಗದೇ ಇರುವ ಬಡಾವಣೆಗಳ ಖಾಲಿ ನಿವೇಶನದಲ್ಲಿ ಸಹ ಇದೇ ವಾತಾವರಣ ಕಂಡುಬಂದಿದೆ ಎಂದು ಸ್ಥಳೀಯರು ಹೇಳಿದ್ದಾರೆ.


ನಗರದ ಕೃಷಿ ಕಾಲೇಜು ಹತ್ತಿರ ಇರುವ ಬಡಾವಣೆಗಳಲ್ಲಿ ಪರಸ್ಥಳದ ವಿದ್ಯಾರ್ಥಿಗಳು ಹಾಗೂ ಯುವಕರು ಬಹು ಸಂಖ್ಯೆಯಲ್ಲಿ ಮಾದಕ ವ್ಯಸನಿಗಳಾಗುತ್ತಿರುವುದು ಕಂಡುಬರುತ್ತಿದೆ.
ಗಾಂಜಾ ಸೇವನೆಯ ಮತ್ತಿನಲ್ಲಿ ಯುವಕರ ಗುಂಪು ದಾರಿಹೋಕರ ಮೇಲೆ ಹಲ್ಲೆಗೈಯುತ್ತಿದೆ. ಜನರ ಬಳಿ ಇರುವ ಬೆಲೆಬಾಳುವ ವಸ್ತುಗಳನ್ನು ದೋಚುತ್ತಾರೆ. ಪ್ರತಿಭಟಿಸಿದರೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡುತ್ತಾರೆ.ಇಂತಹ ಘಟನೆಗಳು ಪ್ರತಿದಿನ ಕೇಳಿಬರುತ್ತಿವೆ.
ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಈ ಎಲ್ಲಾ ಗಂಭೀರ ಸಂಗತಿಗಳನ್ನು ವಿಧಾನಪರಿಷತ್ತಿನ ಗೌರವಾನ್ವಿತ ಸದಸ್ಯರಾದ ಶ್ರೀ ಆಯನೂರು ಮಂಜುನಾಥ ಅವರು
ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರದ ಮೂಲಕ ಗಮನ ಸೆಳೆದಿದ್ದಾರೆ. ಶೀಘ್ರ ಕ್ರಮ ತೆಗೆದುಕೊಳ್ಳಲುವಂತೆ ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ರಕ್ಷಾಬಂಧನವು ಸಹೋದರ- ಸಹೋದರರಿಯರ ನಡುವಿನ ಬಾಂಧವ್ಯ ಗಟ್ಟಿಗೊಳಿಸುವ ಹಬ್ಬ: ರಾಜಯೋಗಿನಿ ಬಿ.ಕೆ.ಅನಸೂಯ ಅಕ್ಕ

ರಕ್ಷಾಬಂಧನವು ಕೇವಲ ಒಂದು ಹಬ್ಬವಲ್ಲ. ಅದು ಪ್ರೀತಿ, ವಿಶ್ವಾಸ, ಗೌರವ ಮತ್ತು...

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...