Wednesday, July 29, 2026
Wednesday, July 29, 2026

ಜಿಲ್ಲೆಯಲ್ಲಿ ಎನ್ಎಫ್ಎಸ್ ಎ & ಗರೀಬ್ ಕಲ್ಯಾಣ್ ಯೋಜನೆ ಪಡಿತರ ವಿತರಣೆ

Date:

ಶಿವಮೊಗ್ಗದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಎನ್.ಎಫ್.ಎಸ್.ಎ. ಮತ್ತು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಜೂನ್ 2022ರ ಮಾಹೆಗೆ ಬಿಡುಗಡೆಯಾದ ಪಡಿತರಧಾನ್ಯವನ್ನು ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡಿ ಬಿಡುಗಡೆ ಮಾಡಿದೆ.

ಅಂತ್ಯೋದಯ ಪಡಿತರ ಚೀಟಿದಾರರ ಕುಟುಂಬಕ್ಕೆ ಎನ್‍ಎಫ್‍ಎಸ್‍ಎ ಯೋಜನೆಯಡಿ ಪ್ರತಿ ಕುಟುಂಬಕ್ಕೆ 35 ಕೆ.ಜಿ. ಅಕ್ಕಿ ಹಾಗೂ ಕುಟುಂಬದ ಪ್ರತಿ ಸದಸ್ಯರಿಗೆ ಪಿಎಂಜಿಕೆಎವೈ ಯೋಜನೆಯಡಿ 5 ಕೆ.ಜಿ. ಅಕ್ಕಿ ಹಂಚಿಕೆ ನೀಡಲಾಗಿದೆ. ಆದ್ಯತಾ ಕುಟುಂಬ ಪಡಿತರ ಚೀಟಿಯಲ್ಲಿನ ಪ್ರತಿ ಸದಸ್ಯರಿಗೆ ಎನ್‍ಎಫ್‍ಎಸ್‍ಎ ಹಂಚಿಕೆ 5 ಕೆ.ಜಿ.ಅಕ್ಕಿ ಮತ್ತು ಪಿಎಂಜಿಕೆಎವೈ ಯೋಜನೆಯಡಿ ಕುಟುಂಬದ ಪ್ರತಿ ಸದಸ್ಯರಿಗೆ 5 ಕೆ.ಜಿ.ಅಕ್ಕಿ ಉಚಿತವಾಗಿ ನೀಡಲಾಗುತ್ತದೆ. ಆದ್ಯತೇತರ ಪಡಿತರ ಚೀಟಿದಾರರಿಗೆ ಏಕ ಸದಸ್ಯರಿಗೆ ರೂ. 15 ರೂ. ದರದಲ್ಲಿ ಏಕ ಸದಸ್ಯರಿಗೆ 5 ಕೆ.ಜಿ., 2 ಹಾಗೂ ಹೆಚ್ಚಿನ ಸದಸ್ಯರಿರುವ ಪಡಿತರ ಚೀಟಿಗೆ 10 ಕೆ.ಜಿ. ಅಕ್ಕಿಯನ್ನು ವಿತರಿಸಲಾಗುತ್ತದೆ.

ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರತಿ ಮಾಹೆಯ 1ನೇ ತಾರೀಖಿನಿಂದ ಬೆಳಗ್ಗೆ 7 ರಿಂದ ರಾತ್ರಿ 9 ಗಂಟೆವರೆಗೆ ಊಟದ ಸಮಯ ಹೊರತುಪಡಿಸಿ ತಿಂಗಳ ಅಂತ್ಯದವರೆಗೆ ಪಡಿತರ ವಿತರಿಸಲಾಗುತ್ತದೆ. ಪಡಿತರ ಚೀಟಿದಾರರು ಆಧಾರ್ ಆಧಾರಿತ ಬಯೋ ಮೆಟ್ರಿಕ್ ಅಥವಾ ಓಟಿಪಿ ನೀಡಿ ಪಡಿತರ ಪಡೆಯುವುದು. ಅಂತ್ಯೋದಯ/ಬಿಪಿಎಲ್ ಪಡಿತರ ಚೀಟಿಗಳಿಗೆ ಆಹಾರ ಧಾನ್ಯ ಸಂಪೂರ್ಣ ಉಚಿತವಾಗಿದೆ. ಬಯೋ ಪಡೆಯಲು ಯಾವುದೇ ಶುಲ್ಕ ಇರುವುದಿಲ್ಲ ಎಂದು ಹೇಳಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಜ್ಯದ ಯುವಜನತೆಯ ಕೌಶಲ್ಯಾಭಿವೃದ್ಧಿಗೆ ಪ್ರಮುಖ ಯೋಜನೆಗಳ ವಿಸ್ತರಣೆ ಮಾಡಿ- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ಕೇಂದ್ರ ಸರ್ಕಾರದ 'ರಾಷ್ಟ್ರೀಯ ಅಪ್ರೆಂಟಿಸ್‌ಷಿಪ್ ಪ್ರೋತ್ಸಾಹಕ ಯೋಜನೆ-2' (NAPS-2)...

D.K. Shivakumar ರಾಜ್ಯದ ಹಿತಕ್ಕಾಗಿ ಪಕ್ಷಾತೀತವಾಗಿ ಒಂದಾಗೋಣ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆ

D.K. Shivakumar ರಾಜ್ಯದ ಹಿತಾಸಕ್ತಿ ಮತ್ತು ಜನರ ಕಲ್ಯಾಣವೇ ಎಲ್ಲರ ಆದ್ಯತೆಯಾಗಬೇಕು....