Wednesday, July 29, 2026
Wednesday, July 29, 2026

ಕೊರೋನ ಸೋಂಕು:ಮಾರ್ಗಸೂಚಿ ಅನುಸರಿಸಲು ರಾಜ್ಯಕ್ಕೆ ಕೇಂದ್ರದಿಂದ ಪತ್ರ

Date:

ಕಳೆದ ಒಂದು ವಾರದಿಂದ ಕೊರೋನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.ಕೊರೋನಾ ಸೋಂಕು ಹರಡದಂತೆ ತೀವ್ರ ನಿಗಾ ವಹಿಸಲು ಕರ್ನಾಟಕ, ತಮಿಳುನಾಡು, ತೆಲಂಗಾಣ, ಮಹಾರಾಷ್ಟ್ರ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಎಚ್ಚರಿಕೆಯನ್ನು ನೀಡಿದೆ.

ಸೋಂಕು ಹರಡದಂತೆ ಸಂಬಂಧಪಟ್ಟ ರಾಜ್ಯಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಮುಂಬೈ ಉಪನಗರ ಸೇರಿದಂತೆ ಮಹಾರಾಷ್ಟ್ರದ 6 ಜಿಲ್ಲೆಗಳಲ್ಲಿ ಸೋಂಕು ಗಣನೀಯವಾಗಿ ಏರಿಕೆಯಾಗಿದೆ. ಮೇ 27ರಿಂದ ಜೂನ್‌ 2ರ ಅವಧಿಯಲ್ಲಿ 2,330 ಹೊಸ ಪ್ರಕರಣಗಳು ವರದಿಯಾಗಿದೆ.

ಮುಂಬೈ, ಠಾಣೆ, ರಾಯಗಡದಲ್ಲಿ ಕಳೆದ ವಾರಕ್ಕೆ ಹೋಲಿಸಿದರೆ ಪ್ರಕರಣಗಳ ಸಂಖ್ಯೆ ದುಪ್ಪಟ್ಟು ಏರಿಕೆಯಾಗಿದೆ.

ಬೆಂಗಳೂರು ನಗರದಲ್ಲಿ ವಾರದಲ್ಲಿ 1,063 ಪ್ರಕರಣಗಳು ವರದಿಯಾಗಿದೆ. ಪಾಸಿಟಿವಿಟಿ ದರ ಶೇ 1.84ರಷ್ಟಿದೆ. ಚೆನ್ನೈ, ಚೆಂಗಲ್ಪಟ್ಟು ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಶೇ 3ರಷ್ಟಿದೆ. ಕೇರಳದಲ್ಲೂ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ವಾರದಲ್ಲಿ 6,556 ಪ್ರಕರಣ ವರದಿಯಾಗಿದೆ.

ಕೊರೋನಾ ಪರೀಕ್ಷೆ, ಲಸಿಕೆ ಸೇರಿದಂತೆ ಸಚಿವಾಲಯ ಹೊರಡಿಸಿರುವ ಮಾರ್ಗಸೂಚಿ ಅನುಸರಿಬೇಕು ಎಂದು ಆರೋಗ್ಯ ಸಚಿವಾಲಯ ಸೂಚನೆ ನೀಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಜ್ಯದ ಯುವಜನತೆಯ ಕೌಶಲ್ಯಾಭಿವೃದ್ಧಿಗೆ ಪ್ರಮುಖ ಯೋಜನೆಗಳ ವಿಸ್ತರಣೆ ಮಾಡಿ- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ಕೇಂದ್ರ ಸರ್ಕಾರದ 'ರಾಷ್ಟ್ರೀಯ ಅಪ್ರೆಂಟಿಸ್‌ಷಿಪ್ ಪ್ರೋತ್ಸಾಹಕ ಯೋಜನೆ-2' (NAPS-2)...

D.K. Shivakumar ರಾಜ್ಯದ ಹಿತಕ್ಕಾಗಿ ಪಕ್ಷಾತೀತವಾಗಿ ಒಂದಾಗೋಣ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆ

D.K. Shivakumar ರಾಜ್ಯದ ಹಿತಾಸಕ್ತಿ ಮತ್ತು ಜನರ ಕಲ್ಯಾಣವೇ ಎಲ್ಲರ ಆದ್ಯತೆಯಾಗಬೇಕು....