Friday, February 6, 2026
Friday, February 6, 2026

ಶ್ರೀರಾಘವೇಶ್ವರ ಶ್ರೀಗಳು ಗೋರಕ್ಷಣೆಯನ್ನ ತಪಸ್ಸಿನ ರೀತಿ ಮಾಡಿದ್ದಾರೆ ಸಂಸದ ರಾಘವೇಂದ್ರ

Date:

ಹೊಸನಗರ, ರಾಘವೇಶ್ವರ ಭಾರತೀ ಮಹಾ ಸ್ವಾಮೀಜಿಯವರ ನೇತೃತ್ವದಲ್ಲಿ ಗೋ ಸೇವೆ, ಜಾಗೃತಿ ಹಾಗೂ ಗೋ ಸಂರಕ್ಷಣೆಯನ್ನು ತಪಸ್ಸಿನ ರೀತಿಯಲ್ಲಿ ಮಾಡಿದ್ದಾರೆ.
ನಮ್ಮ ರಾಜ್ಯ ಸರ್ಕಾರವೂ ಸಹ ಗೋವಿನ ರಕ್ಷಣೆಗೆ ಬದ್ದವಾಗಿದೆ, ಮತ್ತು ಈ ಗೋವಿನ ಹತ್ಯೆ ಮಾಡುವವರ ವಿರುದ್ಧ ಕಠಿಣ ಕಾನೂನಿನ ಕ್ರಮವನ್ನು ಜರುಗಿಸುತ್ತಿದೆ ಎಂದು ಸಂಸದರಾದ ಬಿ. ವೈ ರಾಘವೇಂದ್ರ ಅವರು ತಿಳಿಸಿದ್ದಾರೆ.

ಈ ಪುಣ್ಯ ಕ್ಷೇತ್ರದಲ್ಲಿ ಅತ್ಯಂತ ಸುಂದರವಾಗಿ ವಾಸ್ತು ಶಿಲ್ಪದ ಮೂಲಕ ನಿರ್ಮಾಣವಾಗಿರುವ ಶ್ರೀ ಚಂದ್ರಮೌಳೀಶ್ವರ ದೇವರ ಭವ್ಯ ದೇವಾಲಯ ನಿರ್ಮಾಣವಾಗಿ ಇಂದು ಧ್ವಜ ಸ್ತoಭದ ಪ್ರತೀಷ್ಠಾಪನ ಕಾರ್ಯವಾಗಿದೆ. ಮುಂದಿನ ದಿನದಲ್ಲಿ ಸುಕ್ಷೇತ್ರವಾಗಿ ಹೊರಹೊಮ್ಮಲಿದೆ. ಇಲ್ಲಿ ಸೇವೆ ಸಲ್ಲಿಸುವ ಅವಕಾಶ ನನಗೆ ಕಲ್ಪಿಸಿದ ಇಲ್ಲಿನ ಜನರಿಗೆ ಮತ್ತು ಶ್ರೀಗಳಿಗೆ ನನ್ನ ನಮನಗಳು ಹೊಸನಗರ ತಾಲೂಕಿನ ಶ್ರೀ ರಾಮಚಂದ್ರಾ ಪುರಮಠದ ಶ್ರೀ ಚಂದ್ರಮೌಳೀಶ್ವರ ದೇವಾಲಯದ ಶ್ರೀದೇವರ ಧ್ವಜ ಸ್ತoಭ ಪ್ರತೀಷ್ಠಾ ಕಾರ್ಯಕ್ರಮದಲ್ಲಿ ಸಂಸದರಾದ ಬಿ. ವೈ. ರಾಘವೇಂದ್ರ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಹೊರನಾಡು ಕ್ಷೇತ್ರದ ಧರ್ಮದರ್ಶಿಗಳಾದ ಡಾ.ಭೀಮೇಶ್ವರ ಜೋಶಿ ಅವರು, ಶಾಸಕರಾದ ಹರತಾಳು ಹಾಲಪ್ಪ ,ಸಿಗಂದೂರು ಪ್ರಧಾನ ಅರ್ಚಕರಾದ ಶೇಷಗಿರಿ ಭಟ್, ಹಟ್ಟಿಅಂಗಡಿಯ ಪ್ರಧಾನ ಅರ್ಚಕರಾದ ಬಾಲಚಂದ್ರ ಭಟ್ ,ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಗುರುಮೂರ್ತಿ, ಆರ್. ಎಸ್ ಹೆಗಡೆ, ಪ್ರಭಾಕರ್ ವಿಷ್ಣು ,ಕುಚುಕಾಡು ಮತ್ತಿತರರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...