Thursday, August 13, 2026
Thursday, August 13, 2026

ಶೂನ್ಯ ಬಡ್ಡಿದರದಲ್ಲಿ 31 ಲಕ್ಷ ರೈತರಿಗೆ ಸಾಲ ನೀಡಿಕೆ- ಬೊಮ್ಮಾಯಿ

Date:

ರೈತ ಸಹಕಾರಿ ಸಂಘಗಳ ಮೂಲಕ ಕಳೆದ ವರ್ಷ 21 ಲಕ್ಷ ರೈತರಿಗೆ ಸಾಲ ನೀಡಲಾಗಿತ್ತು. ಈ ಸಲ 31 ಲಕ್ಷ ರೈತರಿಗೆ ಶೂನ್ಯ ಬಡ್ಡಿಯಲ್ಲಿ ಸಾಲ‌ ನೀಡಲಾಗುತ್ತದೆ ಎಂದು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಹೊಸದುರ್ಗ ತಾಲ್ಲೂಕಿನ ಇಂಡೇದೇವರಹಟ್ಟಿಯಲ್ಲಿ ಆಯೋಜಿಸಲಾಗಿತ್ತು. ತಾಲ್ಲೂಕಿನ ವಾಣಿವಿಲಾಸ ಸಾಗರದ ಹಿನ್ನೀರಿನಲ್ಲಿ ಬೇವಿನಹಳ್ಳಿ ಗ್ರಾಮದಿಂದ ಹುಣಸೇಕಟ್ಟೆ ಗ್ರಾಮದವರೆಗೆ ಸೇತುವೆ ರಸ್ತೆ ನಿರ್ಮಾಣ ಕಾಮಗಾರಿ ಹಾಗೂ ಭದ್ರಾ ಮೇಲ್ದಂಡೆ ಯೋಜನೆಯ ಚಿತ್ರದುರ್ಗ ಶಾಖಾ ಕಾಲುವೆ ಹಾಗೂ ತುಮಕೂರು ಶಾಖಾ ಕಾಲುವೆಯ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ಬರುವ ತಾಲ್ಲೂಕಿನ ಕಸಬಾ, ಮಾಡದ ಕೆರೆ ಮತ್ತು ಶ್ರೀರಾಂಪುರ ಹೋಬಳಿಗಳ ವ್ಯಾಪ್ತಿಯಲ್ಲಿನ 36,916 ಹೆ ಪ್ರದೇಶಕ್ಕೆ ಹನಿ ನೀರಾವರಿ ಒದಗಿಸುವುದು. 85 ಕೆರೆಗಳನ್ನು ತುಂಬಿಸುವ ಕಾಮಗಾರಿ. ಹಾಗೂ ತಾಲ್ಲೂಕಿನ ವಿವಿಧ ಇಲಾಖೆಯ ಕಾಮಗಾರಿಗಳ ಉದ್ಘಾಟನೆ ಶಂಕುಸ್ಥಾಪನೆ ಮತ್ತು ಸವಲತ್ತು ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ, ಸರ್ಕಾರ ರೈತ ಮಕ್ಕಳಿಗೆ ಅನುಕೂಲವಾಗಲಿ ಎಂದು ವಿದ್ಯಾನಿಧಿ ಯೋಜನೆ ಜಾರಿಗೆ ತಂದಿದೆ. 14 ಲಕ್ಷ ರೈತ ಮಕ್ಕಳಿಗೆ ವಿದ್ಯಾನಿಧಿ ಉಪಯೋಗ ದೊರಕಲಿದೆ. ಈ ಯೋಜನೆಗಾಗಿ ವಿದ್ಯಾರ್ಥಿಗಳು ಯಾವುದೇ ಅರ್ಜಿ ಹಾಕುವಂತಿಲ್ಲ. ನೇರ ಅವರ ಖಾತೆಗೆ ಹಣ ಜಮಾ ಆಗಲಿದೆ‌. ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ಮನವಿಯಂತೆ ರೈತರು ಬಳಸುವ ಯಂತ್ರೋಪಕರಣಗಳಿಗೆ ಡೀಸಲ್ ಸಬ್ಸಿಡಿ ನೀಡಲು ಯೋಜನೆ ರೂಪಿಸಲಾಗಿದೆ. ಈ ಯೋಜನೆ ಅಂಗವಾಗಿ ವಾರ್ಷಿಕವಾಗಿ 1,250 ರೂಪಾಯಿಗಳನ್ನು ರೈತರ ಖಾತೆಗೆ ಜಮೆ ಮಾಡಲಾಗುತ್ತದೆ. ಇದಕ್ಕಾಗಿ 600 ಕೋಟಿ ರೂಪಾಯ ಮಂಜೂರು ಮಾಡಲಾಗಿದೆ. ಸದಾ ರೈತರ ಬಗ್ಗೆ ಕಾಳಜಿ ಇರುವ ಸರ್ಕಾರ ನಮ್ಮದು. ಹಲವಾರು ಯೋಜನೆಗಳನ್ನು ರೈತರಿಗೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...