Saturday, March 14, 2026
Saturday, March 14, 2026

ಭಾರತ ಸರ್ಕಾರವು ಎಲ್ಲಾ ಧರ್ಮಗಳನ್ನೂ ಗೌರವಿಸುತ್ತದೆ-ಅರಿಂದಮ್ ಬಾಗ್ಚಿ

Date:

ಪ್ರವಾದಿ ಮೊಹಮ್ಮದರ ಬಗೆಗಿನ ಬಿಜೆಪಿ ನಾಯಕರ ಅವಹೇಳನಕಾರಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಇಸ್ಲಾಮಿಕ್ ರಾಷ್ಟ್ರಗಳ ಸಹಕಾರ ಒಕ್ಕೂಟದ ಟೀಕೆಗಳಿಗೆ ಕೇಂದ್ರ ಸರ್ಕಾರ ಸೋಮವಾರ ತಿರುಗೇಟು ನೀಡಿದೆ.

ಪ್ರವಾದಿ ಮೊಹಮ್ಮದರ ವಿರುದ್ಧ ಬಿಜೆಪಿ ನಾಯಕಿ ನೂಪುರ್‌ ಶರ್ಮಾ ನೀಡಿದ್ದಾರೆ ಎನ್ನಲಾದ ಅವಹೇಳನಕಾರಿ ಹೇಳಿಕೆಯನ್ನು ಇಸ್ಲಾಮಿಕ್ ಸಹಕಾರ ಸಂಘಟನೆ ಖಂಡಿಸಿತ್ತು.

ಇದು, ಭಾರತದಲ್ಲಿ ಇಸ್ಲಾಂ ಧರ್ಮದ ವಿರುದ್ಧ ದ್ವೇಷ ಮತ್ತು ನಿಂದನೆಯನ್ನು ತೀವ್ರಗೊಳಿಸುವ, ಮುಸ್ಲಿಮರ ಆಚರಣೆಗಳ ವಿರುದ್ಧದ ವ್ಯವಸ್ಥಿತ ಕಾರ್ಯತಂತ್ರ’ ಎಂದು ಒಐಸಿ ಹೇಳಿತ್ತು.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಭಾರತೀಯ ವಿದೇಶಾಂಗ ಇಲಾಖೆ ವಕ್ತಾರ ಅರಿಂದಮ್‌ ಬಾಗ್ಚಿ ಅವರು ‘ಇಸ್ಲಾಮಿಕ್ ಸಹಕಾರ ಸಂಘಟನೆಯ (ಒಐಸಿ) ಇತ್ತೀಚಿನ ಹೇಳಿಕೆಗೆ ಸಂಬಂಧಿಸಿದ ಮಾಧ್ಯಮದ ವರದಿಗಳನ್ನು ಗಮನಿಸಲಾಗಿದೆ. ಒಐಸಿಯ ಅನಗತ್ಯ ಮತ್ತು ಸಂಕುಚಿತ ಮನೋಭಾವದ ಹೇಳಿಕೆಗಳನ್ನು ಭಾರತ ಸರ್ಕಾರವು ಸ್ಪಷ್ಟವಾಗಿ ತಿರಸ್ಕರಿಸುತ್ತದೆ’ ಎಂದು ಹೇಳಿದ್ದಾರೆ.

ಭಾರತ ಸರ್ಕಾರವು ಎಲ್ಲಾ ಧರ್ಮಗಳ ವಿಚಾರದಲ್ಲಿ ಅಪಾರವಾದ ಗೌರವ ಹೊಂದಿದೆ. ‘ಧಾರ್ಮಿಕ ಮುಖಂಡರನ್ನು ನಿಂದಿಸುವಂಥ ಆಕ್ಷೇಪಾರ್ಹ ಟ್ವೀಟ್‌ಗಳು ಮತ್ತು ಹೇಳಿಕೆಗಳನ್ನು ಕೆಲ ವ್ಯಕ್ತಿಗಳು ನೀಡಿದ್ದಾರೆ. ಅವು ಯಾವುದೇ ರೀತಿಯಲ್ಲೂ ಭಾರತ ಸರ್ಕಾರದ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಸಂಬಂಧಪಟ್ಟ ಸಂಸ್ಥೆ ಅವರ ವಿರುದ್ಧ ಈಗಾಗಲೇ ಕಠಿಣ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S. Kumar Bangarappa ರಾಜ್ಯದಲ್ಲಿ ಬ್ಯಾಡ್ಮಿಂಟನ್ ಕ್ಷೇತ್ರ ಇನ್ನಷ್ಟು ಎತ್ತರಕ್ಕೇರಲಿ : ಎಸ್. ಕುಮಾರ್ ಬಂಗಾರಪ್ಪ

S. Kumar Bangarappa ಗ್ರಾಮೀಣ ಪ್ರದೇಶಗಳಲ್ಲಿ ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟ...

DC Shivamogga ಮಾ.18 ರಿಂದ ಎಸ್‌ಎಸ್‌ಎಲ್ ಪರೀಕ್ಷೆ-ಸಕಲ ಸಿದ್ದತೆಗೆ ಸೂಚನೆ : ಪ್ರಭುಲಿಂಗ ಕವಳಿಕಟ್ಟಿ

DC Shivamogga ವಿದ್ಯಾರ್ಥಿಗಳ ಜೀವನದ ದಿಸೆಯನ್ನು ನಿರ್ಧರಿಸುವ ಮುಖ್ಯ ಘಟ್ಟವಾದ ಎಸ್‌ಎಸ್‌ಎಲ್‌ಸಿ...

ಶಿವಮೊಗ್ಗದ ರಾಯಲ್ ಆರ್ಕಿಡ್ ನಲ್ಲಿ ಅವಿರ ಉಡುಪು ಸಂಸ್ಥೆಯ ಯುಗಾದಿ ಸೀರೆ ಹಬ್ಬ

ಶಿವಮೊಗ್ಗದ ರಾಯಲ್ ಆರ್ಕಿಡ್ ನಲ್ಲಿ ಚಿತ್ರನಟಿ ಕಾರುಣ್ಯ ಗೌಡರ ಅವಿರ ಉಡುಪು...

“ನೈಸರ್ಗಿಕ ಮತ್ತು ಸಾವಯವ ಕೃಷಿ” ಕುರಿತಾದ ಪ್ರಾದೇಶಿಕ ವಿಚಾರಸಂಕಿರಣ’ಯಶಸ್ವಿ

Regional Organic and Natural Farming Center ಪ್ರಾದೇಶಿಕ ಸಾವಯವ ಮತ್ತು...