Saturday, March 7, 2026
Saturday, March 7, 2026

ಪ್ರವಾದಿ ನಿಂದನೆ ಸೌದಿ ಸ್ಟೋರ್ಸ್ ಗಳಲ್ಲಿ ಭಾರತೀಯ ಉತ್ಪನ್ನಗಳ ಎತ್ತಂಗಡಿ

Date:

ಪ್ರವಾದಿ ಮೊಹಮ್ಮದ್ ನಿಂದನೆ ಮಾಡಲಾಗಿದೆ ಎನ್ನುವ ಆರೋಪದ ಮೇಲೆ ಕಾನ್ಪುರದಲ್ಲಿ ಭಾರಿ ಹಿಂಸಾಚಾರವೇ ನಡೆದು ಹೋಗಿದೆ. ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಪ್ರವಾದಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಗಲಭೆ ನಡೆದಿದೆ.

ನೂಪುರ್ ಶರ್ಮಾ ಖಾಸಗಿ ವಾಹಿನಿ ಕಾರ್ಯಕ್ರಮದಲ್ಲಿ ಪ್ರವಾದಿ ಮೊಹಮ್ಮದ್‌ಗೆ ಅವಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇದರ ಪರಿಣಾಮ ಕಾನ್ಪುರದಲ್ಲಿ ಭಾರಿ ಗಲಭೆ ಸೃಷ್ಟಿಯಾಗಿತ್ತು. ಇದರ ಬಿಸಿ ಅರಬ್ ರಾಷ್ಟ್ರಕ್ಕೂ ತಟ್ಟಿದೆ.

ಸೌದಿ ಅರೇಬಿಯಾ, ಬಹ್ರೇನ್ ಹಾಗು ಕುವೈಟ್ ಸೂಪರ್‌ಸ್ಟೋರ್ಸ್‌ಗಳಿಂದ ಭಾರತ ಉತ್ಪನ್ನವನ್ನು ತೆಗೆದು ಹಾಕಲಾಗಿದೆ ಎಂದು ತಿಳಿದುಬಂದಿದೆ.

ಪ್ರವಾದಿ ನಿಂದನೆ ಕಾರಣದಿಂದ ಸೌದಿ ಸ್ಟೋರ್‌ಗಳಲ್ಲಿ ಭಾರತ ಉತ್ಪನ್ನವನ್ನು ತೆಗೆದು ಹಾಕಲಾಗಿದೆ. ಇದರ ಬೆನ್ನಲ್ಲೇ ಭಾರತ ರಾಯಭಾರಿ ಅಧಿಕಾರಿಗಳು ಸಭೆ ನಡೆಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಹೀಗಾಗಿ ಸೌದಿಯಲ್ಲಿನ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳು ಸೌದಿ ವಿದೇಶಾಂಗ ಸಚಿವಾಲಯ ಕಚೇರಿಯಲ್ಲಿ ಸಭೆ ಸೇರಿ ಭಾರತದ ನಿಲುವು ಸ್ಪಷ್ಟಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Sanga ಮಾರ್ಚ್ 09 ಕರ್ನಾಟಕ ಸಂಘದಲ್ಲಿ ಸಾಹಿತಿ ರಂಜನಿ ರಾಘವನ್ ತಿಂಗಳ ಅತಿಥಿ

Karnataka Sanga ದಿನಾಂಕ 09ನೇ ಮಾರ್ಚ್ 2026ರ ಸೋಮವಾರ, ಸಂಜೆ 5:30ಕ್ಕೆ...

CM Siddharamaiah ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ

CM Siddharamaiah ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ...

Klive Special Article ನಿಮ್ಮೂರು ನಮ್ಮ ಮಾಹಿತಿ ಸ್ಥಳ: ಸುಣ್ಣದಹಳ್ಳಿ ಲೇ: ದಿಲೀಪ್ ನಾಡಿಗ್

Klive Special Article ಸುವರ್ಣ ಹಳ್ಳಿ ಕಾಲಕ್ರಮೇಣ ಸುಣ್ಣದ ಹಳ್ಳಿಯಾಯಿತು. ಇಲ್ಲಿದ್ದಾನೆ...

Department of Tourism ಪ್ರವಾಸೋದ್ಯಮ ಇಲಾಖೆಯಿಂದ ಮೊಬೈಲ್ ಕ್ಯಾಂಟೀನ್ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

Department of Tourism ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2025-26ನೇ ಸಾಲಿನಲ್ಲಿ ರಾಜ್ಯದ...