Monday, August 3, 2026
Monday, August 3, 2026

ರಾಣಿ ಚೆನ್ನಮ್ಮ ಸ್ಮರಣೀಯ ಮಹಿಳೆ : ಸಿ.ಎಂ. ಬೊಮ್ಮಾಯಿ

Date:

ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮ ಜಯಂತೋತ್ಸವ ಪ್ರಯುಕ್ತ ಮಾನ್ಯ ಮುಖ್ಯಮಂತ್ರಿ ಬೊಮ್ಮಾಯಿ ಅವರು ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.

‘ನಮ್ಮ ನಾಡಿನ ಶ್ರೇಷ್ಠ ಮಹಿಳೆಯಾದ ಕಿತ್ತೂರು ರಾಣಿ ಚೆನ್ನಮ್ಮನ ತ್ಯಾಗ ಬಲಿದಾನವನ್ನು ನಾವು ಸದಾ ಸ್ಮರಿಸಲೇಬೇಕು. ಇವರ ಸ್ಮರಣಾರ್ಥ ಬೆಳಗಾವಿಯಿಂದ ಬೆಂಗಳೂರುವರೆಗೆ ಚೆನ್ನಮ್ಮ ಜ್ಯೋತಿ ಬೆಳಗಿಸಿದ್ದು ನನ್ನ ಸೌಭಾಗ್ಯ. ಪ್ರಸ್ತುತ ಚೆನ್ನಮ್ಮನ ಪುತ್ಥಳಿಯನ್ನು ಸ್ಥಾಪಿಸುವ ಹಿನ್ನೆಲೆಯಲ್ಲಿ ತಮ್ಮ ತಂದೆಯವರಾದ ಮಾಜಿ ಮುಖ್ಯಮಂತ್ರಿ ಎಸ್.ಆರ್ ಬೊಮ್ಮಾಯಿ ಅವರ ದೀರ್ಘ ಪ್ರಯತ್ನವನ್ನು ನೆನಪಿಗೆ ತಂದುಕೊಂಡರು. ಈಗ ತಮ್ಮ ಪಾಲಿಗೆ ರಾಣಿ ಚೆನ್ನಮ್ಮ ಜಯಂತಿ ಉತ್ಸವ ಮಹತ್ತರ ಕಾರ್ಯ ನನ್ನ ಪಾಲಿಗೆ ಬಂದಿದೆ ಎಂದರು.
ಕಿತ್ತೂರು ಪ್ರಾಧಿಕಾರಕ್ಕೆ ಈ ಹಿಂದೆ 8 ಕೋಟಿ ರೂ. ನೀಡಿ ಕೆಲಸ ಪ್ರಾರಂಭಿಸಲಾಗಿತ್ತು. ಈ ವರ್ಷ 50 ಕೋಟಿ ರೂಪಾಯಿಗಳ ಕ್ರಿಯಾಯೋಜನೆ ಅನುಮೋದನೆ ನೀಡಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಬೃಹತ್ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಶಾಸಕ ರಾಜುಗೌಡ, ಪಾಲಿಕೆ ಸದಸ್ಯ ರಾಜಣ್ಣ ಕೊರವಿ ಮತ್ತು ಶಿವಾನಂದ ಮುತ್ತಣ್ಣನವರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...