Wednesday, December 17, 2025
Wednesday, December 17, 2025

ರಾಣಿ ಚೆನ್ನಮ್ಮ ಸ್ಮರಣೀಯ ಮಹಿಳೆ : ಸಿ.ಎಂ. ಬೊಮ್ಮಾಯಿ

Date:

ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮ ಜಯಂತೋತ್ಸವ ಪ್ರಯುಕ್ತ ಮಾನ್ಯ ಮುಖ್ಯಮಂತ್ರಿ ಬೊಮ್ಮಾಯಿ ಅವರು ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.

‘ನಮ್ಮ ನಾಡಿನ ಶ್ರೇಷ್ಠ ಮಹಿಳೆಯಾದ ಕಿತ್ತೂರು ರಾಣಿ ಚೆನ್ನಮ್ಮನ ತ್ಯಾಗ ಬಲಿದಾನವನ್ನು ನಾವು ಸದಾ ಸ್ಮರಿಸಲೇಬೇಕು. ಇವರ ಸ್ಮರಣಾರ್ಥ ಬೆಳಗಾವಿಯಿಂದ ಬೆಂಗಳೂರುವರೆಗೆ ಚೆನ್ನಮ್ಮ ಜ್ಯೋತಿ ಬೆಳಗಿಸಿದ್ದು ನನ್ನ ಸೌಭಾಗ್ಯ. ಪ್ರಸ್ತುತ ಚೆನ್ನಮ್ಮನ ಪುತ್ಥಳಿಯನ್ನು ಸ್ಥಾಪಿಸುವ ಹಿನ್ನೆಲೆಯಲ್ಲಿ ತಮ್ಮ ತಂದೆಯವರಾದ ಮಾಜಿ ಮುಖ್ಯಮಂತ್ರಿ ಎಸ್.ಆರ್ ಬೊಮ್ಮಾಯಿ ಅವರ ದೀರ್ಘ ಪ್ರಯತ್ನವನ್ನು ನೆನಪಿಗೆ ತಂದುಕೊಂಡರು. ಈಗ ತಮ್ಮ ಪಾಲಿಗೆ ರಾಣಿ ಚೆನ್ನಮ್ಮ ಜಯಂತಿ ಉತ್ಸವ ಮಹತ್ತರ ಕಾರ್ಯ ನನ್ನ ಪಾಲಿಗೆ ಬಂದಿದೆ ಎಂದರು.
ಕಿತ್ತೂರು ಪ್ರಾಧಿಕಾರಕ್ಕೆ ಈ ಹಿಂದೆ 8 ಕೋಟಿ ರೂ. ನೀಡಿ ಕೆಲಸ ಪ್ರಾರಂಭಿಸಲಾಗಿತ್ತು. ಈ ವರ್ಷ 50 ಕೋಟಿ ರೂಪಾಯಿಗಳ ಕ್ರಿಯಾಯೋಜನೆ ಅನುಮೋದನೆ ನೀಡಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಬೃಹತ್ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಶಾಸಕ ರಾಜುಗೌಡ, ಪಾಲಿಕೆ ಸದಸ್ಯ ರಾಜಣ್ಣ ಕೊರವಿ ಮತ್ತು ಶಿವಾನಂದ ಮುತ್ತಣ್ಣನವರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...

Klive Special Article ಗೀತ ನೃತ್ಯಗಳ ಮೂಲಕ ಮನಸೆಳೆದ ಶ್ರೀಶಾರದಾ ಸಂಗೀತ- ನೃತ್ಯ ವಿದ್ಯಾಲಯದ ರಂಗ ಪ್ರಸ್ತುತಿ

Klive Special Article ವಿಜಯವಾಣಿ ಪತ್ರಿಕೆಯ ರವಿಕಾಂತ್ ಕುಂದಾಪುರ ವಾಟ್ಸಾಪ್ ಡೀಪಿಯಲ್ಲಿ...

Rotary Shimoga ಕಾಯಿಲೆ ಬಾರದಂತೆ ತಡೆಗಟ್ಟಲು ಮನೆಮದ್ದು ಉಪಕಾರಿ – ಡಾ.ಸುರೇಂದ್ರ

Rotary Shimoga ನಮ್ಮ ಪೂರ್ವಜರು ಎಲ್ಲಾ ಅನಾರೋಗ್ಯಕ್ಕೆ ಐದುಸಾವಿರ ವರ್ಷದಹಿಂದೆಯೆ ಆಯೂರ್...