Thursday, April 9, 2026
Thursday, April 9, 2026

ಪಿಯು ಪಠ್ಯ ಪರಿಷ್ಕರಣೆ ಮಾಡಿಸುವುದಿಲ್ಲ-ಸಚಿವ ನಾಗೇಶ್

Date:

ಶಾಲಾ ಪಠ್ಯಪುಸ್ತಕರ ಪರಿಷ್ಕರಣೆ ವಿವಾದದ ಬಳಿಕ, ಇದೀಗ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ.

ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ ಇಲ್ಲ. ಈ ಹಿಂದಿನ ಪಠ್ಯಪುಸ್ತಕವೇ ಯಥಾವತ್ತಾಗಿ ಇರಲಿದೆ ಎಂಬುದಾಗಿ ಸಚಿವ ಬಿ.ಸಿ ನಾಗೇಶ್ ಸ್ಪಷ್ಟ ಪಡಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು,
ದ್ವಿತೀಯ ಪಿಯುಸಿ ಅಧ್ಯಾಯ 4.2 ಹೊಸ ಧರ್ಮಗಳ ಉದಯದಲ್ಲಿ ಕೆಲ ಅಂಶಗಳ ಬಗ್ಗೆ ಆಕ್ಷೇಪಗಳಿದ್ದವು ಆ ಅಧ್ಯಾಯವನ್ನು ಪರಿಷ್ಕರಿಸುವ ಹೊಣೆಯನ್ನು ರೋಹಿತ್ ಚಕ್ರತೀರ್ಥಗೆ ನೀಡಲಾಗಿತ್ತು. ಆದರೆ ಸಮಿತಿ ಈಗಾಗಲೇ ವಿಸರ್ಜಿಸಲಾಗಿದೆ. ಹೀಗಾಗಿ ಪಿಯು ಪರಿಷ್ಕರಣಾ ಸಮಿತಿಯನ್ನೂ ವಿಸರ್ಜಿಸಿದಂತಾಗಿದೆ. ಅದರ ವರದಿಯನ್ನು ಪಡೆಯುತ್ತಿಲ್ಲ ಎಂದು ತಿಳಿಸಿದ್ದಾರೆ.

ಪಿಯು ಪಠ್ಯಪುಸ್ತಕ ಯಥಾವತ್ತಾಗಿ ಇರಲಿದೆ. ಪರಿಷ್ಕರಣೆ ಮಾಡಲ್ಲ. ಈಗ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ವಿಸರ್ಜನೆ ಮಾಡಲಾಗಿದೆ. ಅದ್ದರಿಂದ ಈ ಸಮಿತಿಯಿಂದ ಪರಿಷ್ಕರಣೆ ಮಾಡಿಸುವುದಿಲ್ಲ ಎಂದರು.

ಶಾಲಾ ಪಠ್ಯಪುಸ್ತಕ ಕುರಿತಂತೆ ಬರಗೂರು ಸಮಿತಿ ನೀಡಿದ್ದ ಬಸವಣ್ಣ ಪಠ್ಯವನ್ನು ಶಾಲಾ ಪಠ್ಯಗಳಲ್ಲಿ ಮುಂದುವರೆಸಲಾಗುತ್ತದೆ. ಅಂಬೇಡ್ಕರ್ ಪಠ್ಯ ಸೇರಿದಂತೆ ಇತರೆ ಲೋಪಗಳನ್ನು ಸರಿ ಪಡಿಸಲಾಗುತ್ತದೆ ಎಂಬುದಾಗಿ ಸ್ಪಷ್ಟ ಪಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಐಪಿಎಲ್ ಕ್ರಿಕೆಟ್ ಪಾಸ್ ನನಗೆ ಬೇಡ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಾಸಕರಿಗೆ ನೀಡಲಾಗುವ ನನ್ನ ಹೆಸರಿನ ಐಪಿಎಲ್ ಕ್ರಿಕೆಟ್...

Sri Kala Skill Development Centre ಸಮಾಜದ ವಿವಿಧ ಕ್ಷೇತ್ರಗಳ ಸಾಧಕರಿಗೆ ಕಾ. ಎಂ.ಲಿಂಗಪ್ಪ ಸ್ಮಾರಕ ಪ್ರಶಸ್ತಿ ಘೋಷಣೆ

Sri Kala Skill Development Centre ಶಿವಮೊಗ್ಗ ನಗರದಲ್ಲಿ ಪತ್ರಕರ್ತರಾಗಿ, ಸಮಾಜಮುಖಿ...

B.Y. Raghavendra ಹೊಸನಗರಕ್ಕೆ ಮೊದಲಿನ ರಾಜಕೀಯ ಅಸ್ಮಿತೆ ಮರಳಿ ಸಿಗಬೇಕು- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ರಿಪ್ಪನ್‌ಪೇಟೆಯಲ್ಲಿ ಆಯೋಜಿಸಲಾಗಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ವಿವಿಧ ಮಠಾಧೀಶರು,...

ಶಾಲಾ ಮಕ್ಕಳಿಗೆಂದೇ “ಟಿ-5 ಚುಟುಕು ಕ್ರಿಕೆಟ್” ಪಂದ್ಯಾವಳಿ ಏರ್ಪಡಿಸಿ ಪ್ರೋತ್ಸಾಹಿಸಿ- ಡಾ.ಸುಧೀಂದ್ರ

DCA ಸಂಸ್ಥೆಯ 2026ರ ಸಾಲಿನ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರವನ್ನು ದಿನಾಂಕ...