Thursday, February 5, 2026
Thursday, February 5, 2026

ಪಿಯು ಪಠ್ಯ ಪರಿಷ್ಕರಣೆ ಮಾಡಿಸುವುದಿಲ್ಲ-ಸಚಿವ ನಾಗೇಶ್

Date:

ಶಾಲಾ ಪಠ್ಯಪುಸ್ತಕರ ಪರಿಷ್ಕರಣೆ ವಿವಾದದ ಬಳಿಕ, ಇದೀಗ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ.

ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ ಇಲ್ಲ. ಈ ಹಿಂದಿನ ಪಠ್ಯಪುಸ್ತಕವೇ ಯಥಾವತ್ತಾಗಿ ಇರಲಿದೆ ಎಂಬುದಾಗಿ ಸಚಿವ ಬಿ.ಸಿ ನಾಗೇಶ್ ಸ್ಪಷ್ಟ ಪಡಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು,
ದ್ವಿತೀಯ ಪಿಯುಸಿ ಅಧ್ಯಾಯ 4.2 ಹೊಸ ಧರ್ಮಗಳ ಉದಯದಲ್ಲಿ ಕೆಲ ಅಂಶಗಳ ಬಗ್ಗೆ ಆಕ್ಷೇಪಗಳಿದ್ದವು ಆ ಅಧ್ಯಾಯವನ್ನು ಪರಿಷ್ಕರಿಸುವ ಹೊಣೆಯನ್ನು ರೋಹಿತ್ ಚಕ್ರತೀರ್ಥಗೆ ನೀಡಲಾಗಿತ್ತು. ಆದರೆ ಸಮಿತಿ ಈಗಾಗಲೇ ವಿಸರ್ಜಿಸಲಾಗಿದೆ. ಹೀಗಾಗಿ ಪಿಯು ಪರಿಷ್ಕರಣಾ ಸಮಿತಿಯನ್ನೂ ವಿಸರ್ಜಿಸಿದಂತಾಗಿದೆ. ಅದರ ವರದಿಯನ್ನು ಪಡೆಯುತ್ತಿಲ್ಲ ಎಂದು ತಿಳಿಸಿದ್ದಾರೆ.

ಪಿಯು ಪಠ್ಯಪುಸ್ತಕ ಯಥಾವತ್ತಾಗಿ ಇರಲಿದೆ. ಪರಿಷ್ಕರಣೆ ಮಾಡಲ್ಲ. ಈಗ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ವಿಸರ್ಜನೆ ಮಾಡಲಾಗಿದೆ. ಅದ್ದರಿಂದ ಈ ಸಮಿತಿಯಿಂದ ಪರಿಷ್ಕರಣೆ ಮಾಡಿಸುವುದಿಲ್ಲ ಎಂದರು.

ಶಾಲಾ ಪಠ್ಯಪುಸ್ತಕ ಕುರಿತಂತೆ ಬರಗೂರು ಸಮಿತಿ ನೀಡಿದ್ದ ಬಸವಣ್ಣ ಪಠ್ಯವನ್ನು ಶಾಲಾ ಪಠ್ಯಗಳಲ್ಲಿ ಮುಂದುವರೆಸಲಾಗುತ್ತದೆ. ಅಂಬೇಡ್ಕರ್ ಪಠ್ಯ ಸೇರಿದಂತೆ ಇತರೆ ಲೋಪಗಳನ್ನು ಸರಿ ಪಡಿಸಲಾಗುತ್ತದೆ ಎಂಬುದಾಗಿ ಸ್ಪಷ್ಟ ಪಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...