Thursday, July 9, 2026
Thursday, July 9, 2026

ಜೂನ್ 9 ರಿಂದ 11ರವರೆಗೆ ರಾಜ್ಯದ ಕರಾವಳಿಯಲ್ಲಿ ಭಾರಿ ಮಳೆ-ಯೆಲ್ಲೋ ಅಲರ್ಟ್ ಘೋಷಣೆ

Date:

ಪಶ್ಚಿಮ ಮಾರುತಗಳ ಪರಿಣಾಮದಿಂದಾಗಿ ದಕ್ಷಿಣ ಭಾರತದಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಅದರಲ್ಲೂ ಜೂನ್ 11 ರವರೆಗೆ ಕರ್ನಾಟಕ ಗಡಿ ಮತ್ತು ಕೇರಳದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ತಮಿಳುನಾಡು, ಆಂಧ್ರಪ್ರದೇಶದಲ್ಲಿ ಚದುರಿದ ತುಂತುರು ಮಳೆ ಸುರಿಯಲಿದೆ. ಆದರೆ ತೆಲಂಗಾಣದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಜೂನ್ 9 ರಿಂದ 11ರ ವರೆಗೆ ಕರ್ನಾಟಕ ಕರಾವಳಿ ಭಾಗದಲ್ಲಿ ಭಾರೀ ಮಳೆ ಸುರಿಯುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ತಗ್ಗು ಪ್ರದೇಶದಲ್ಲಿನ ಜನರು ಎಚ್ಚರದಿಂದ ಇರುವಂತೆಯೂ ಸೂಚಿಸಲಾಗಿದೆ. ಮುಂಗಾರು ಆರಂಭದಲ್ಲಿ ಸಾಮಾನ್ಯವಾಗಿ ಹಲವು ಭಾಗಗಳಲ್ಲಿ ಸರಾಸರಿ 6 ರಿಂದ 8 ಸೆಂ.ಮೀ ಮಳೆಯಾಗುತ್ತದೆ. ಆದರೆ ಈ ಬಾರಿ ಕಳೆದ ಶುಕ್ರವಾರದಂದು ಅಲಪ್ಪುಳ ಜಿಲ್ಲೆಯ ಮಾನ್‌ಕೊಂಪುನಲ್ಲಿ ಗರಿಷ್ಠ 5 ಸೆಂ.ಮೀ ಮಳೆಯಾಗಿದೆ ಎಂದು ವರದಿಯಾಗಿದೆ.

ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ಕೆಲವು ರಾಜ್ಯಗಳಲ್ಲಿ ಮಳೆ ಕೆಲವು ದಿನಗಳಿಂದಲೂ ಬಿಡುವು ಪಡೆದಿದೆ. ಆದರೆ ಕರ್ನಾಟಕದ ಕರಾವಳಿ ಭಾಗದಲ್ಲಿ ಇಂದು ಉತ್ತಮ ಮಳೆ ಸುರಿದಿದೆ. ಇದೀಗ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಕೇರಳ ಹಾಗೂ ಕರ್ನಾಟಕಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಜೂನ್ 2022 ರ ಮೊದಲ ಆರು ದಿನಗಳಲ್ಲಿ, ಕೇರಳವು ಅದರ ಆರಂಭಿಕ ವಾರದ ಸರಾಸರಿ 120.6 ಮಿಮೀಗೆ ಹೋಲಿಸಿದರೆ 62.8 ಮಿಮೀ ಮಳೆಯನ್ನು 48% ಮಳೆ ಕೊರತೆ ದಾಖಲಾಗಿದೆ. ತಮಿಳುನಾಡು (17.9 ಮಿಮೀ) 21% ‘ಹೆಚ್ಚುವರಿ’ ಮಳೆ ಸುರಿದಿದೆ. ಆದರೆ ಕರ್ನಾಟಕ (34.6 ಮಿಮೀ) ಮತ್ತು ಆಂಧ್ರ (19.2 ಮಿಮೀ) ಇದುವರೆಗೆ ಮಳೆ ದಾಖಲಾಗಿದೆ. ಆದರೆ ಈ ಬಾರಿ ಮಳೆಯ ಪ್ರಮಾಣ ಹೆಚ್ಚಳವಾಗುವ ಸಾಧ್ಯತೆಯಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club of Shivamogga ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆಗೆ ನೂತನ ಪದಾಧಿಕಾರಿಗಳ ಆಯ್ಕೆ

Rotary Club of Shivamogga ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆ...

Friends Center Organization ಸಮಾಜಮುಖಿ ಸೇವಾ ಚಟುವಟಿಕೆಗಳಲ್ಲಿ ಫ್ರೆಂಡ್ಸ್ ಸೆಂಟರ್ ಸಂಸ್ಥೆ ಪ್ರಸಿದ್ಧಿ ಪಡೆದಿದೆ- ಎಸ್.ಎನ್.ಚನ್ನಬಸಪ್ಪ

Friends Center Organization ಸಮಾಜಮುಖಿ, ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸಿ ಹಲವಾರು ಕಾರ್ಯಕ್ರಗಳನ್ನು...

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....