Sunday, May 24, 2026
Sunday, May 24, 2026

ಆಗಸ್ಟ್ ಮೊದಲ ವಾರದಲ್ಲಿ ಭಾರತ್ ಗೌರವ್ ರೈಲು ಸಂಚಾರ

Date:

ಆಗಸ್ಟ್‌ ತಿಂಗಳ ಮೊದಲ ವಾರದಲ್ಲಿ ರಾಜ್ಯದ ಮೊದಲ ಭಾರತ್‌ ಗೌರವ್‌ ರೈಲು ಬೆಂಗಳೂರು, ಕಾಶಿ ನಡುವೆ ರೈಲು ಸಂಚಾರ ಆರಂಭವಾಗಲಿದೆ.

ಧಾರ್ಮಿಕ ದತ್ತಿ ಇಲಾಖೆ ಮಾಲಿಕತ್ವದಲ್ಲಿ ಸಂಚರಿಸಲಿದೆ. ಯಾತ್ರಾರ್ಥಿಗಳು ಕಡಿಮೆ ಖರ್ಚಿನಲ್ಲಿ ಕಾಶಿಯಾತ್ರೆ ಕೈಗೊಳ್ಳಬಹುದಾಗಿದೆ. ವಿಶೇಷ ಎಂದರೆ ಈ ಯಾತ್ರೆಗೆ ರಾಜ್ಯ ಸರಕಾರ ಯಾತ್ರಾರ್ಥಿಗಳಿಗೆ ಬಜೆಟ್‌ನಲ್ಲಿ ತಲಾ .5 ಸಾವಿರ ಸಹಾಯಧನ ನೀಡುವ ಯೋಜನೆಯನ್ನು ಘೋಷಿಸಿದೆ.

ಕೇಂದ್ರ ಸರ್ಕಾರದ ಭಾರತ್‌ ಗೌರವ್‌ ರೈಲು ಯೋಜನೆಯನ್ನು ಬಳಸಿಕೊಂಡು ಧಾರ್ಮಿಕ ದತ್ತಿ ಇಲಾಖೆ ಕಾಶಿಯಾತ್ರೆ ಯೋಜನೆ ಅನುಷ್ಠಾನಕ್ಕೆ ನಿರ್ಧರಿಸಿದೆ. ಇದಕ್ಕಾಗಿ ಕಳೆದ ವಾರ ನೈಋುತ್ಯ ರೈಲ್ವೆಯಲ್ಲಿ ನೋಂದಣಿ ಮಾಡಿಕೊಂಡಿತ್ತು. ಸದ್ಯ 2 ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆ ನಡೆಸಿ ರೈಲು ಬೋಗಿಗಳು, ಆಂತರಿಕ ಸೌಲಭ್ಯಗಳು, ವೇಳಾಪಟ್ಟಿ, ಮಾರ್ಗ, ಓಡಾಟ ವೆಚ್ಚದ ಕುರಿತು ಚರ್ಚಿಸಿದ್ದು ಯೋಜನೆ ಮೊದಲ ಪ್ರವಾಸವನ್ನು ಆಗಸ್ಟ್‌ ಮೊದಲ ವಾರ ಕೈಗೊಳ್ಳಲು ನಿರ್ಧರಿಸಲಾಗಿದೆ.

7 ದಿನಗಳ ಪ್ರವಾಸ ಇದಾಗಿದೆ. ಕಾಶಿ, ಅಯೋಧ್ಯೆ ಮತ್ತು ಪ್ರಯಾಗ ಧಾರ್ಮಿಕ ಸ್ಥಳಗಳ ದರ್ಶನ ಒಳಗೊಂಡಿದೆ. ರೈಲ್ವೆ ನಿಲ್ದಾಣ ನಂತರ ಯಾತ್ರಿ ಸ್ಥಳಗಳಲ್ಲಿ ಆಹಾರ, ವಸತಿ ಮತ್ತು ಸ್ಥಳೀಯ ಸಾರಿಗೆ ಅಗತ್ಯಗಳನ್ನು ಐಆರ್‌ಸಿಟಿಸಿ ನೋಡಿಕೊಳ್ಳಲಿದೆ. ಕಾಶಿಯಾತ್ರೆ ಯೋಜನೆ ಅರ್ಹ ಫಲಾನುಭವಿಗಳು ಹಾಗೂ ಇತರೆ ಯಾತ್ರಿಗಳ ನೋಂದಣಿ ಪ್ರಕ್ರಿಯೆ ಧಾರ್ಮಿಕ ದತ್ತಿ ಇಲಾಖೆ ಶೀಘ್ರದಲ್ಲಿಯೇ ಆರಂಭಿಸುವ ಸಾಧ್ಯತೆಗಳಿವೆ. ದೇಗುಲ ಪ್ರವಾಸೋದ್ಯಮವನ್ನು ಉತ್ತೇಜಿಸಲು ಮತ್ತು ಪ್ರಧಾನಿ ಮೋದಿಯವರ ದಿವ್ಯ ಕಾಶಿ, ಭವ್ಯ ಕಾಶಿ ಅಭಿಯಾನವನ್ನು ಉತ್ತೇಜಿಸಲು ಕರ್ನಾಟಕದ ಜನರಿಗೆ ಈ ವಿಶೇಷ ರೈಲು ಸೇವೆಯನ್ನು ಪ್ರಾರಂಭಿಸಲಾಗುತ್ತಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಶಿವಮೊಗ್ಗಕ್ಕೆ ಜೂನ್ 1 ರಂದು ಸೀಎಮನ ಭೇಟಿ: ಮಧು ಬಂಗಾರಪ್ಪ ಅವರಿಂದ ಪೂರ್ವಸಿದ್ಧತೆ ಪರಿಶೀಲನೆ

Madhu Bangarappa ಜೂನ್ 01 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ನೆರವೇರಿಸಲಿರುವ...

Madhu Bangarappa ಜಿಲ್ಲಾ ಪ್ರಗತಿ ಪರಿಶಿಲನಾ ಸಭೆ. ವಿವಿಧ ಸಮಸ್ಯೆಗಳ ಬಗ್ಗೆ ಪಕ್ಷಾತೀತ ನಿರ್ಣಯ- ಮಧು ಬಂಗಾರಪ್ಪ.

Madhu Bangarappa ಇಂದು ಶಿವಮೊಗ್ಗದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ...

CM Siddharamaiah ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ- ಸಿದ್ಧರಾಮಯ್ಯ

CM Siddharamaiah ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ,...

DC Shivamogga ಶಾಂತಿ ಸೌಹಾರ್ದತೆಯಿಂದ ಬಕ್ರೀದ್ ಹಬ್ಬ ಆಚರಿಸೋಣ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಮುಂಬರುವ ಬಕ್ರೀದ್ ಹಬ್ಬವನ್ನು ಜಿಲ್ಲೆಯಾದ್ಯಂತ ಅತ್ಯಂತ ಶಾಂತಿ, ಸೌಹಾರ್ದತೆ ಮತ್ತು...