Wednesday, April 8, 2026
Wednesday, April 8, 2026

ರಿಷಭ್ ಪಂತ್ ದ.ಆಫ್ರಿಕಾ ವಿರುದ್ಧ ಟಿ20 ಟೀಮ್ ಇಂಡಿಯಾ ನಾಯಕ

Date:

ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಟಿ20 ಪಂದ್ಯ ಆರಂಭಕ್ಕೆ 24 ಗಂಟೆ ಬಾಕಿ ಇದೆ. ಟೀಂ ಇಂಡಿಯಾದಿಂದ ಹೊರಬಿದ್ದ ನಾಯಕ ಕೆ.ಎಲ್ ರಾಹುಲ್ ಬದಲಿಗೆ ರಿಷಭ್ ಪಂತ್ ನಾಯಕನಾಗಿ ಆಯ್ಕೆಯಾಗಿದ್ದಾರೆ.

ಆದರೆ, ನಿನ್ನೆ ಬುಧವಾರ ಸಂಜೆ ಟೀಂ ಇಂಡಿಯಾ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಇನ್ನು ಕೆಲವೇ ನಿಮಿಷಗಳು ಬಾಕಿ ಇರುವಂತೆ ಪಂತ್ ನಾಯಕನಾಗಿ ಆಯ್ಕೆಯಾಗಿದ್ದರ ಕುರಿತು ಆಘಾತಗೊಂಡ ರಿಷಭ್, ಅದರಿಂದ ಹೊರಬರಲು ಸ್ವಲ್ಪ ಸಮಯವೇ ಆಗಿತೆಂದು ನಾಯಕಾಗಿ ಆಯ್ಕೆಯಾಗಿ ತನ್ನ ಮೊದಲ ಪ್ರತಿಕ್ರಿಯೆಯಲ್ಲಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ನಾನು ಟೀಮ್ ಇಂಡಿಯಾವನ್ನು ಮುನ್ನಡೆಸುತ್ತೇವೆ ಎಂಬ ಅಂಶವನ್ನು ಜೀರ್ಣಿಸಿಕೊಳ್ಳಲು ಇನ್ನೂ ಸಾಧ್ಯವಾಗಿಲ್ಲ ಎಂದು ರಿಷಬ್ ಪಂತ್ ಅವರು ಹೇಳಿಕೊಂಡಿದ್ದಾರೆ.

ನನಗೆ ಅದನ್ನು ಇನ್ನೂ ಅರಗಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಒಂದು ಗಂಟೆಯ ಹಿಂದೆ ನನಗೆ ಗೊತ್ತಾಯಿತು ಎಂದು ರಿಷಬ್ ಅವರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಇದು ತುಂಬಾ ಒಳ್ಳೆಯ ಭಾವನೆ, ಆದರೆ, ತುಂಬಾ ಒಳ್ಳೆಯ ಸಂದರ್ಭಗಳಲ್ಲಿ ಬಂದಿಲ್ಲ. ಆದರೂ, ಕೂಡ ಅದೇ ಸಮಯದಲ್ಲಿ ನನಗೆ ಸಂತೋಷವಾಗಿದೆ. ಭಾರತ ತಂಡವನ್ನು ಮುನ್ನಡೆಸಲು ನನಗೆ ಈ ಅವಕಾಶವನ್ನು ನೀಡಿದ್ದಕ್ಕಾಗಿ ನಾನು ಬಿಸಿಸಿಐಗೆ ಧನ್ಯವಾದ ಹೇಳಲು ಬಯಸುತ್ತೇನೆ. ನನ್ನ ಕ್ರಿಕೆಟ್ ವೃತ್ತಿಜೀವನದ ಏರಿಳಿತದ ನನ್ನ ಪ್ರಯಾಣದಲ್ಲಿ ನನ್ನನ್ನು ಬೆಂಬಲಿಸಿದ್ದಕ್ಕಾಗಿ ಎಲ್ಲಾ ಹಿತೈಷಿಗಳಿಗೆ ಧನ್ಯವಾದಗಳು ಎಂದು ರಿಷಭ್ ಪಂತ್ ಅವರು ಹೇಳಿದ್ದಾರೆ.

ನಾಯಕನಾಗಿ, ಇದು ನನಗೆ ಬಹಳಷ್ಟು ಸಹಾಯ ಮಾಡುತ್ತದೆ. ಏಕೆಂದರೆ ನೀವು ಮತ್ತೆ ಮತ್ತೆ ಅದೇ ಕೆಲಸವನ್ನು ಮಾಡುತ್ತಿರುವಾಗ ನೀವು ಸುಧಾರಿಸುತ್ತೀರಿ. ನಾನು ತಪ್ಪುಗಳಿಂದ ಕಲಿಯುತ್ತಲೇ ಇರುವ ವ್ಯಕ್ತಿ ಮತ್ತು ಮುಂದಿನ ದಿನಗಳಲ್ಲಿ ಅದು ನನಗೆ ಸಹಾಯಕ ಎಂದು ನಾನು ಭಾವಿಸುತ್ತೇನೆ ಅಂತ ತಮ್ಮ ಸಂತೋಷದ ವಿಚಾರವನ್ನು ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಹೊಸನಗರಕ್ಕೆ ಮೊದಲಿನ ರಾಜಕೀಯ ಅಸ್ಮಿತೆ ಮರಳಿ ಸಿಗಬೇಕು- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ರಿಪ್ಪನ್‌ಪೇಟೆಯಲ್ಲಿ ಆಯೋಜಿಸಲಾಗಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ವಿವಿಧ ಮಠಾಧೀಶರು,...

ಶಾಲಾ ಮಕ್ಕಳಿಗೆಂದೇ “ಟಿ-5 ಚುಟುಕು ಕ್ರಿಕೆಟ್” ಪಂದ್ಯಾವಳಿ ಏರ್ಪಡಿಸಿ ಪ್ರೋತ್ಸಾಹಿಸಿ- ಡಾ.ಸುಧೀಂದ್ರ

DCA ಸಂಸ್ಥೆಯ 2026ರ ಸಾಲಿನ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರವನ್ನು ದಿನಾಂಕ...

Acharya Tulsi National College of Commerce ಮೇ1. ಎಟಿ ಎನ್ ಸಿಸಿ ಕಾಲೇಜಿನ ವಿದ್ಯಾರ್ಥಿಗಳ ಸಮಾಗಮ

ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಮೇ 1ರಂದು ಬೆಳಗ್ಗೆ 10.30ಕ್ಕೆ...

Department of Agriculture ಶಿವಮೊಗ್ಗ ಜಿಲ್ಲೆಯ ರೈತರು ಯೂರಿಯ ರಸಗೊಬ್ಬರ ಖರೀದಿಸಲು ಎಫ್ ಐ ಡಿ ಸಂಖ್ಯೆ ಕಡ್ಡಾಯ

ಶಿವಮೊಗ್ಗ ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರವನ್ನು ಖರೀದಿಸಲು ಇನ್ನು ಮುಂದೆ ಫಾರ್ಮರ್...