Sunday, May 24, 2026
Sunday, May 24, 2026

ದಲಿತ ನಾಯಕ ಕೃಷ್ಣಪ್ಪನವರ ಚಿಂತನೆ ಮನನ ಈಗ ಮುಖ್ಯ- ಗುರುಮೂರ್ತಿ

Date:

ಕರ್ನಾಟಕ ದಲಿತ ಸಂಘರ್ಷ ಸಮಿತಿ ಮತ್ತು ಕರ್ನಾಟಕ ದಲಿತ ನೌಕರರ ಒಕ್ಕೂಟ ಶಿವಮೊಗ್ಗ ಇವರ ವತಿಯಿಂದ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಪ್ರೋ.ಬಿ. ಕೃಷ್ಣಪ್ಪನವರ 85ನೇ ಜನ್ಮದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಕರ್ನಾಟಕ ದಲಿತ ಸಂಘರ್ಷದ ರಾಜ್ಯ ಸಂಚಾಲಕರಾದ ಶ್ರೀ ಸಿ.ಎಂ. ಗುರುಮೂರ್ತಿಯವರು ಮಾತನಾಡಿ, ಶ್ರೀ ಕೃಷ್ಣಪ್ಪನವರ ಜನ್ಮದಿನಾಚರಣೆಯನ್ನು ನಾವು ಆಚರಣೆ ಮಾಡುತ್ತಾ ಬಂದಿದ್ದೇವೆ. ಈ ನೆನಪು ನಮಗೆ ಅಗತ್ಯವಾಗಿದೆ. ಕೃಷ್ಣಪ್ಪನವರ ಚಿಂತನೆಗಳು, ಬದುಕು ಈಗಿನ ವರ್ತಮಾನಕ್ಕೆ, ಹಾಗೂ ಮುಂದಿನ ಭವಿಷ್ಯಕ್ಕೆ ಮಾರ್ಗ ಸೂಚಿಯಾಗಿವೆ ಎಂದರು.

ಇಂಥವರ ಹುಟ್ಟುಹಬ್ಬವನ್ನು ಕೇವಲ ಪುಷ್ಪನಮನ ಮಾಡುವ ಮೂಲಕ ಆಚರಿಸಿದೆ ಅವರ ಚಿಂತನೆಗಳನ್ನು ವಿಮರ್ಶಾತ್ಮಕವಾಗಿ ಮನನ ಮಾಡಿಕೊಳ್ಳುವುದು ಅತ್ಯಮೂಲ್ಯ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಹೊಸತು ಪತ್ರಿಕೆಯ ಸಂಪಾದಕರಾದ ಸಿದ್ದನಗೌಡ ಪಾಟೀಲ್ , ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷರಾದ ಕೆ.ಟಿ. ಗಂಗಾಧರ, ಖ್ಯಾತ ಸಾಹಿತಿ ಶ್ರೀ.ಬಿ. ಚಂದ್ರೇಗೌಡ, ಪ್ರೊ. ಎಂ.ಜಿ. ನಂಜುಂಡಸ್ವಾಮಿ, ಶಿವಮೊಗ್ಗದ ವಕೀಲರಾದ ಶ್ರೀಪಾಲ್, ಶಿವಮೊಗ್ಗದ ಅಪರ ಜಿಲ್ಲಾಧಿಕಾರಿಗಳಾದ ನಾಗೇಂದ್ರ ಎಸ್. ಹೊನ್ನಾಳಿ, ಪ್ರಜಾವಾಣಿ ಪತ್ರಿಕೆಯ ಹಿರಿಯ ಪತ್ರಕರ್ತರಾದ ಚಂದ್ರಹಾಸ ಮತ್ತು ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ತಾತ್ಕಾಲಿಕ ನೇರ ನೇಮಕಾತಿ ಮೂಲಕಖಾಯಂ ಶಿಕ್ಷಕರ ನೇಮಕಾತಿವರೆಗೆ ಅತಿಥಿ ಶಿಕ್ಷಕರ ನೇಮಕ

Shimoga News 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು...

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...