Saturday, October 5, 2024
Saturday, October 5, 2024

ದಲಿತ ನಾಯಕ ಕೃಷ್ಣಪ್ಪನವರ ಚಿಂತನೆ ಮನನ ಈಗ ಮುಖ್ಯ- ಗುರುಮೂರ್ತಿ

Date:

ಕರ್ನಾಟಕ ದಲಿತ ಸಂಘರ್ಷ ಸಮಿತಿ ಮತ್ತು ಕರ್ನಾಟಕ ದಲಿತ ನೌಕರರ ಒಕ್ಕೂಟ ಶಿವಮೊಗ್ಗ ಇವರ ವತಿಯಿಂದ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಪ್ರೋ.ಬಿ. ಕೃಷ್ಣಪ್ಪನವರ 85ನೇ ಜನ್ಮದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಕರ್ನಾಟಕ ದಲಿತ ಸಂಘರ್ಷದ ರಾಜ್ಯ ಸಂಚಾಲಕರಾದ ಶ್ರೀ ಸಿ.ಎಂ. ಗುರುಮೂರ್ತಿಯವರು ಮಾತನಾಡಿ, ಶ್ರೀ ಕೃಷ್ಣಪ್ಪನವರ ಜನ್ಮದಿನಾಚರಣೆಯನ್ನು ನಾವು ಆಚರಣೆ ಮಾಡುತ್ತಾ ಬಂದಿದ್ದೇವೆ. ಈ ನೆನಪು ನಮಗೆ ಅಗತ್ಯವಾಗಿದೆ. ಕೃಷ್ಣಪ್ಪನವರ ಚಿಂತನೆಗಳು, ಬದುಕು ಈಗಿನ ವರ್ತಮಾನಕ್ಕೆ, ಹಾಗೂ ಮುಂದಿನ ಭವಿಷ್ಯಕ್ಕೆ ಮಾರ್ಗ ಸೂಚಿಯಾಗಿವೆ ಎಂದರು.

ಇಂಥವರ ಹುಟ್ಟುಹಬ್ಬವನ್ನು ಕೇವಲ ಪುಷ್ಪನಮನ ಮಾಡುವ ಮೂಲಕ ಆಚರಿಸಿದೆ ಅವರ ಚಿಂತನೆಗಳನ್ನು ವಿಮರ್ಶಾತ್ಮಕವಾಗಿ ಮನನ ಮಾಡಿಕೊಳ್ಳುವುದು ಅತ್ಯಮೂಲ್ಯ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಹೊಸತು ಪತ್ರಿಕೆಯ ಸಂಪಾದಕರಾದ ಸಿದ್ದನಗೌಡ ಪಾಟೀಲ್ , ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷರಾದ ಕೆ.ಟಿ. ಗಂಗಾಧರ, ಖ್ಯಾತ ಸಾಹಿತಿ ಶ್ರೀ.ಬಿ. ಚಂದ್ರೇಗೌಡ, ಪ್ರೊ. ಎಂ.ಜಿ. ನಂಜುಂಡಸ್ವಾಮಿ, ಶಿವಮೊಗ್ಗದ ವಕೀಲರಾದ ಶ್ರೀಪಾಲ್, ಶಿವಮೊಗ್ಗದ ಅಪರ ಜಿಲ್ಲಾಧಿಕಾರಿಗಳಾದ ನಾಗೇಂದ್ರ ಎಸ್. ಹೊನ್ನಾಳಿ, ಪ್ರಜಾವಾಣಿ ಪತ್ರಿಕೆಯ ಹಿರಿಯ ಪತ್ರಕರ್ತರಾದ ಚಂದ್ರಹಾಸ ಮತ್ತು ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಅಕ್ಟೋಬರ್ 7 ರಂದು ಆಲ್ಕೊಳ‌ ಸುತ್ತಮುತ್ತ ವಿದ್ಯುತ್ ಸರಬರಾಜು ಇರುವುದಿಲ್ಲ

MESCOM ಶಿವಮೊಗ್ಗ ಅಕ್ಟೋಬರ್ 05 (ಕರ್ನಾಟಕ ವಾರ್ತೆ): ಶಿವಮೊಗ್ಗ...

Nehru Stadium Shimoga ಪ್ರಾಥಮಿಕ ಶಾಲಾಮಕ್ಕಳ ಕ್ರೀಡಾಕೂಟ ಉದ್ಘಾಟನೆ

Nehru Stadium Shimoga ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪನಿರ್ದೇಶಕರ...

Shimoga Dasara 2024 ಶಿವಮೊಗ್ಗ ರಂಗದಸರಾದಲ್ಲಿ ಅ.5 ರಿಂದ ನಾಟಕ ಪ್ರದರ್ಶನಗಳ ಸುಗ್ಗಿ

Shimoga Dasara 2024 ಈ ಬಾರಿ ಶಿವಮೊಗ್ಗ ಮಹಾನಗರ ಪಾಲಿಕೆಯು ಆಯೋಜನೆ...

Shivamogga News ಕೆರೆ,ಕಟ್ಟೆ,ಹಳ್ಳ ಜಮೀನು ಇತರೆ ಸರ್ಕಾರದ ಸ್ವತ್ತು ಒತ್ತುವರಿ ಗಮನಕ್ಕೆ ಬಂದಾಕ್ಷಣ ಕ್ರಮ ಕೈಗೊಳ್ಳಿ-ನ್ಯಾ.ಬಿ.ಎ.ಪಾಟೀಲ್

Shivamogga News ಸರ್ಕಾರದ ಸ್ವತ್ತಿನ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು...