Wednesday, December 17, 2025
Wednesday, December 17, 2025

ವಿಯಟ್ನಾಂ ಗೆ ಅತಿವೇಗದ ರಕ್ಷಣಾ ಹಡಗುಗಳ ಹಸ್ತಾಂತರ

Date:

ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಗ ₹770 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿರುವ 12 ಅತಿ ವೇಗದ ರಕ್ಷಣಾ ಹಡಗುಗಳನ್ನು ವಿಯೆಟ್ನಾಂಗೆ ಹಸ್ತಾಂತರ ಮಾಡಿದರು.

ದಕ್ಷಿಣ ಚೀನಾ ಸಮುದ್ರದ ಪ್ರಾಂತ್ಯದಲ್ಲಿ ಹೆಚ್ಚುತ್ತಿರುವ ಚೀನಾದ ಪ್ರಾಬಲ್ಯವನ್ನು ಎದುರಿಸುವ ನಿಟ್ಟಿನಲ್ಲಿ ಭಾರತ ಮತ್ತು ವಿಯೆಟ್ನಾಂ ದೇಶಗಳ ಭದ್ರತಾ ಸಹಕಾರದ ನಡುವೆ ನಡೆದ ಈ ಬೆಳವಣಿಗೆ ಮಹತ್ವ ಪಡೆದಿದೆ.

ಜೂನ್ 8 ರಿಂದ ವಿಯೆಟ್ನಾಂ ಪ್ರವಾಸ ಕೈಗೊಂಡಿರುವ ರಾಜನಾಥ್ ಸಿಂಗ್ ಅವರು, ಹಾಂಗ್ ಹಾ ಶಿಪ್‌ಯಾರ್ಡ್‌ನಲ್ಲಿ ಈ ಹಡಗುಗಳನ್ನು ಸಾಲದ ರೂಪದ ಯೋಜನೆಯಡಿ ವಿಯೆಟ್ನಾಂಗೆ ಹಸ್ತಾಂತರಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,
ಈ ಯೋಜನೆಯು ವಿಶ್ವಕ್ಕಾಗಿ ಭಾರತದಲ್ಲಿ ನಿರ್ಮಿಸಿ (ಮೇಕ್ ಇನ್ ಇಂಡಿಯಾ- ಮೇಕ್ ಫಾರ್ ದಿ ವರ್ಲ್ಡ್ ಮಿಷನ್) ಎಂಬುದಕ್ಕೆ ಉದಾಹರಣೆಯಾಗಿದೆ ಎಂದರು.

ಭಾರತ ನೀಡಿದ ಸಾಲದ ಯೋಜನೆಯಡಿ 12 ಅತಿವೇಗದ ರಕ್ಷಣಾ ಹಡಗುಗಳ ನಿರ್ಮಾಣ ಯೋಜನೆ ಪೂರ್ಣಗೊಳಿಸಲಾಗಿದೆ. ಮೊದಲ 5 ಹಡಗುಗಳನ್ನು ಭಾರತದಲ್ಲಿ ಎಲ್‌ಅಂಡ್‌ಟಿ ಶಿಪ್‌ಯಾರ್ಡ್‌ನಲ್ಲಿ ನಿರ್ಮಿಸಲಾಗಿತ್ತು.

ಇದೀಗ ಉಳಿದ 7 ಹಡುಗಗಳನ್ನು ಹಾಂಗ್ ಹಾ ಶಿಪ್ ಯಾರ್ಡ್‌ನಲ್ಲಿ ನಿರ್ಮಿಸಲಾಗಿದೆ. ಈ ಯೋಜನೆಯು ಉಭಯ ದೇಶಗಳ ನಡುವೆ ಹೆಚ್ಚಿನ ಭದ್ರತಾ ಸಹಕಾರ ಯೋಜನೆಗಳಿಗೆ ಪೂರಕವಾಗಲಿದೆ ಎಂಬ ಭರವಸೆಯಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...