Friday, February 6, 2026
Friday, February 6, 2026

ವಿಯಟ್ನಾಂ ಗೆ ಅತಿವೇಗದ ರಕ್ಷಣಾ ಹಡಗುಗಳ ಹಸ್ತಾಂತರ

Date:

ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಗ ₹770 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿರುವ 12 ಅತಿ ವೇಗದ ರಕ್ಷಣಾ ಹಡಗುಗಳನ್ನು ವಿಯೆಟ್ನಾಂಗೆ ಹಸ್ತಾಂತರ ಮಾಡಿದರು.

ದಕ್ಷಿಣ ಚೀನಾ ಸಮುದ್ರದ ಪ್ರಾಂತ್ಯದಲ್ಲಿ ಹೆಚ್ಚುತ್ತಿರುವ ಚೀನಾದ ಪ್ರಾಬಲ್ಯವನ್ನು ಎದುರಿಸುವ ನಿಟ್ಟಿನಲ್ಲಿ ಭಾರತ ಮತ್ತು ವಿಯೆಟ್ನಾಂ ದೇಶಗಳ ಭದ್ರತಾ ಸಹಕಾರದ ನಡುವೆ ನಡೆದ ಈ ಬೆಳವಣಿಗೆ ಮಹತ್ವ ಪಡೆದಿದೆ.

ಜೂನ್ 8 ರಿಂದ ವಿಯೆಟ್ನಾಂ ಪ್ರವಾಸ ಕೈಗೊಂಡಿರುವ ರಾಜನಾಥ್ ಸಿಂಗ್ ಅವರು, ಹಾಂಗ್ ಹಾ ಶಿಪ್‌ಯಾರ್ಡ್‌ನಲ್ಲಿ ಈ ಹಡಗುಗಳನ್ನು ಸಾಲದ ರೂಪದ ಯೋಜನೆಯಡಿ ವಿಯೆಟ್ನಾಂಗೆ ಹಸ್ತಾಂತರಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,
ಈ ಯೋಜನೆಯು ವಿಶ್ವಕ್ಕಾಗಿ ಭಾರತದಲ್ಲಿ ನಿರ್ಮಿಸಿ (ಮೇಕ್ ಇನ್ ಇಂಡಿಯಾ- ಮೇಕ್ ಫಾರ್ ದಿ ವರ್ಲ್ಡ್ ಮಿಷನ್) ಎಂಬುದಕ್ಕೆ ಉದಾಹರಣೆಯಾಗಿದೆ ಎಂದರು.

ಭಾರತ ನೀಡಿದ ಸಾಲದ ಯೋಜನೆಯಡಿ 12 ಅತಿವೇಗದ ರಕ್ಷಣಾ ಹಡಗುಗಳ ನಿರ್ಮಾಣ ಯೋಜನೆ ಪೂರ್ಣಗೊಳಿಸಲಾಗಿದೆ. ಮೊದಲ 5 ಹಡಗುಗಳನ್ನು ಭಾರತದಲ್ಲಿ ಎಲ್‌ಅಂಡ್‌ಟಿ ಶಿಪ್‌ಯಾರ್ಡ್‌ನಲ್ಲಿ ನಿರ್ಮಿಸಲಾಗಿತ್ತು.

ಇದೀಗ ಉಳಿದ 7 ಹಡುಗಗಳನ್ನು ಹಾಂಗ್ ಹಾ ಶಿಪ್ ಯಾರ್ಡ್‌ನಲ್ಲಿ ನಿರ್ಮಿಸಲಾಗಿದೆ. ಈ ಯೋಜನೆಯು ಉಭಯ ದೇಶಗಳ ನಡುವೆ ಹೆಚ್ಚಿನ ಭದ್ರತಾ ಸಹಕಾರ ಯೋಜನೆಗಳಿಗೆ ಪೂರಕವಾಗಲಿದೆ ಎಂಬ ಭರವಸೆಯಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...