ಮಂಗಳೂರಿನ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ವಿವಾದ ತಣ್ಣಗಾಗುವ ಲಕ್ಷಣಗಳು ಕಾಣುತ್ತಿದೆ. ತಮ್ಮ ಪಟ್ಟು ಸಡಿಲಿಸಿ ಕಾಲೇಜಿನ ಸುಮಾರು 46 ವಿದ್ಯಾರ್ಥಿನಿಯರು ಹಿಜಾಬ್ ಕಳಚಿಟ್ಟು ತರಗತಿಗಳಿಗೆ ಹಾಜರಾಗಿದ್ದಾರೆ ಎಂದು ತಿಳಿದುಬಂದಿದೆ.
ಒಟ್ಟು 101 ಮುಸ್ಲಿಂ ವಿದ್ಯಾರ್ಥಿನಿಯರು ಇರುವ ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜು ಇದಾಗಿದ್ದು, ಕಳೆದ ಒಂದು ವಾರದಿಂದ ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಸುದ್ದಿಯಾಗಿತ್ತು.
ಈ ವಿವಾದ ರಾಜ್ಯಮಟ್ಟದಲ್ಲಿ ಸುದ್ದಿಯಾಗುತ್ತಿದ್ದಂತೆ ಉಪ್ಪಿನಂಗಡಿಯ ಪ್ರಥಮ ದರ್ಜೆ ಕಾಲೇಜಿನ ಆರು ಮಂದಿ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ನಮಗೆ ಹಿಜಾಬ್ ಬೇಕು ಎಂದು ಹಠ ಹಿಡಿದರು. ಕೊನೆಗೆ ಕಾಲೇಜಿ ಮಂಡಳಿ ಈ ಆರು ವಿದ್ಯಾರ್ಥಿನಿಯರನ್ನು 6 ದಿನಗಳ ಕಾಲ ಅಮಾನತು ಮಾಡಿತ್ತು.
ರಾಜ್ಯದಲ್ಲಿ ಹಿಜಾಬ್ ವಿವಾದ ತಣ್ಣಗಾಗಿದ್ದ ಸಂದರ್ಭದಲ್ಲಿ ಮಂಗಳೂರಿನ ಶ್ವವಿದ್ಯಾಲಯ ಕಾಲೇಜಿನ ಕೆಲವು ವಿದ್ಯಾರ್ಥಿನಿಯರು ಮತ್ತೆ ಹಿಜಾಬ್ ತೊಡುತ್ತೇವೆ. ವಿಶ್ವವಿದ್ಯಾಲಯದಲ್ಲಿ ನಿಯಮದಲ್ಲಿ ಹಿಜಾಬ್ ತೊಡಲು ಅವಕಾಶ ಇದೆ ಎಂದು ಹೇಳಿ ಮೊದಲು ಹಿಜಾಬ್ ವಿವಾದ ಪುನಾರಂಭ ಮಾಡಿದ್ದರು.
ಇದೀಗ ಆರೂ ವಿದ್ಯಾರ್ಥಿನಿಯರು ಕಾಲೇಜಿನ ಸಮವಸ್ತ್ರ ನಿಯಮಾಳಿಗಳನ್ನು ಉಲ್ಲಂಘಿಸುವುದಿಲ್ಲ ಎಂದು ಮುಚ್ಚಳಿಕೆ ಬರೆದು ಕೊಟ್ಟು ಗುರುವಾರದಿಂದ ಕಾಲೇಜಿಗೆ ಹಾಜರಾಗಿದ್ದಾರೆ.