Friday, December 12, 2025
Friday, December 12, 2025

ರಾಜ್ಯದಲ್ಲಿ ಕೋವಿಡ್ ಹೊಸ ಮಾರ್ಗಸೂಚಿ

Date:

ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದೆ.

ಈ ಕಾರಣದಿಂದಾಗಿ ನಿಯಂತ್ರಣ ಕ್ರಮವಾಗಿ ಹೊಸ ಮಾರ್ಗಸೂಚಿ ಕ್ರಮಗಳನ್ನು ರಾಜ್ಯ ಆರೋಗ್ಯ ಇಲಾಖೆ ಪ್ರಕಟಿಸಿದೆ.

ಈ ಸಂಬಂಧ ಸುತ್ತೋಲೆ ಹೊರಡಿಸಿರುವಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಿ.ರಂದೀಪ್ ಅವರು, ರಾಜ್ಯದಲ್ಲಿ ಕಳೆದ 10 ದಿನಗಳಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ನಿಧಾನಗತಿಯಲ್ಲಿ ಏರಿಕೆಯಾಗುತ್ತಿವೆ. ಹೀಗಾಗಿ ಈ ಕೆಳಗಿನ ಮಾರ್ಗಸೂಚಿ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದ್ದಾರೆ.

ಈ ಹೊಸ ಮಾರ್ಗಸೂಚಿಯಂತೆ ರಾಜ್ಯಾದ್ಯಂತ ಮತ್ತೆ ಮಾಸ್ಕ್ ಕಡ್ಡಾಯಗೊಳಿಸಿ ಆದೇಶಿಸಿದೆ. ಜೊತೆಗೆ ಕಡ್ಡಾಯವಾಗಿ ಪಾಲಿಸುವಂತೆ ಖಡಕ್ ಆದೇಶದಲ್ಲಿ ತಿಳಿಸಿದೆ.

ಈ ಹೊಸ ಮಾರ್ಗಸೂಚಿಯಂತೆ ರಾಜ್ಯಾದ್ಯಂತ ಮತ್ತೆ ಮಾಸ್ಕ್ ಕಡ್ಡಾಯಗೊಳಿಸಿ ಆದೇಶಿಸಿದೆ. ಜೊತೆಗೆ ಕಡ್ಡಾಯವಾಗಿ ಪಾಲಿಸುವಂತೆ ಖಡಕ್ ಆದೇಶದಲ್ಲಿ ತಿಳಿಸಿದೆ.

ಕೋವಿಡ್ ನಿಯಂತ್ರಣದ ಹೊಸ ಮಾರ್ಗಸೂಚಿ ಕ್ರಮಗಳು ಇಂತಿವೆ.

ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ
ಮಾಸ್ಕ್ ಧರಿಸದೇ ಇದ್ದರೇ ಮಾರ್ಷಲ್, ಪೊಲೀಸ್ ಸಿಬ್ಬಂದಿಗಳು ದಂಡ ವಿಧಿಸಲು ಸೂಚನೆ
ಮುಚ್ಚಿದ ಕಫೆ ಟೀರಿಯಾ, ಹೋಟೆಲ್, ಶೈಕ್ಷಣಿಕ ಸಂಸ್ಥೆಗಳು, ಮಾಲ್ ಗಳು, ರೆಸ್ಟೋರೆಂಟ್ ಗಳು, ಪಬ್ ಗಳು, ಕಚೇರಿಗಳು, ಕಾರ್ಖಾನೆಗಳಲ್ಲಿ ಜನರು, ಸಿಬ್ಬಂದಿಗಳು ಮಾಸ್ಕ್ ಧರಿಸುವುದು ಕಡ್ಡಾಯ.

ಮಾಸ್ಕ್ ಧರಿಸಿದ ಜನರಿಗೆ ಮಾತ್ರವೇ ಮುಚ್ಚಿದ ಸ್ಥಳಗಳಲ್ಲಿನ ಪ್ರದೇಶಗಳಿಗೆ ಅನುಮತಿ
ಸ್ವಂತ ವಾಹನಗಳು ಹಾಗು ಸಾರ್ವಜನಿಕ ಸಾರಿಗೆಗಳಲ್ಲಿ ( ಬಸ್ ಮತ್ತು ರೈಲು ) ಪ್ರಯಾಣಿಸುವ ಸಂದರ್ಭದಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸುವುದು ಕಡ್ಡಾಯ
ಐಎಲ್‌ಐ ಮತ್ತು ಸಾರಿ ಲಕ್ಷಣಗಳನ್ನು ಹೊಂದಿರುವವರು, ಹೈರಿಸ್ಕ್ ಗುಂಪಿನವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರೋರು ಆದ್ಯತೆ ಮೇರೆಗೆ ಪರೀಕ್ಷೆ ಒಳಪಡಲು ಸೂಚನೆ
ಅರ್ಹ ಜನರೆಲ್ಲರೂ ಪ್ರಿಕಾಷನರಿ ಡೋಸ್ ಸೇರಿದಂತೆ, ಕೋವಿಡ್ ಲಸಿಕೆ ಪಡೆಯಲು ಸೂಚನೆ
ಈ ಮೇಲ್ಕಂಡ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸುವಂತೆ ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.

ತಪ್ಪಿದಲ್ಲಿ ಕೋವಿಡ್ ನಿಯಂತ್ರಣ ಮಾರ್ಗಸೂಚಿ ಕ್ರಮಗಳಂತೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Human Rights Commission ಹಕ್ಕು-ಕರ್ತವ್ಯ ಪಾಲನೆಯೊಂದಿಗೆ ಇತರರ ಹಕ್ಕುಗಳನ್ನು ಗೌರವಿಸಿ : ಹೇಮಂತ್ ಎನ್

Human Rights Commission ಎಲ್ಲರನ್ನು ಸಮಾನವಾಗಿ ಕಾಣುವುದು ಕೂಡ ಮಾನವ ಹಕ್ಕಾಗಿದ್ದು,...

ಅಬಕಾರಿ ದಾಳಿ: 51.75 ಲೀ ಗೋವಾ ಮದ್ಯ ಪತ್ತೆ

ಶಿವಮೊಗ್ಗ ತಾಲೂಕು ಗೋವಿಂದಪುರ ಗ್ರಾಮದ ಶಿವಕುಮಾರ್ ಬಿನ್ ವರದರಾಜ್ ಇವರಿಗೆ ಸೇರಿದ...

Sahyadri Narayana Hospital ವೈದ್ಯರ ಚಿಕಿತ್ಸೆಯಿಂದ ತಾಯಿಗೆ ದೃಷ್ಟಿ, ಅವಧಿಪೂರ್ವ ಮಗುವಿಗೆ ಜೀವದಾನ

Sahyadri Narayana Hospital 25 ವರ್ಷದ ಯುವತಿ ಗಂಡನ ಜೊತೆ ಸಂತೋಷವಾಗಿದ್ದಳು....

Akashavani Bhadravati ಆಕಾಶವಾಣಿಯಲ್ಲಿ ಹೆಲ್ತ್ ಹಿಂಟ್ಸ್ ಮತ್ತು ಬದುಕು ಜಟಕಾಬಂಡಿ ವಿಶೇಷ ಕಾರ್ಯಕ್ರಮಗಳ ಪ್ರಸಾರ

Akashavani Bhadravati ಡಿ 15 ರಿಂದ ಆಕಾಶವಾಣಿ ಭದ್ರಾವತಿ ಕೇಂದ್ರದಿಂದ ಪ್ರತಿದಿನ...