Wednesday, December 10, 2025
Wednesday, December 10, 2025

ತಿರುಪತಿ ತಿಮ್ಮಪ್ಪನ ಆಶೀರ್ವಾದ ಪಡೆದ ನಯನ-ವಿಘ್ನೇಶ್ ಜೋಡಿ

Date:

ನಿನ್ನೆಯಷ್ಟೇ ಅದ್ಧೂರಿಯಾಗಿ ನಿರ್ದೇಶಕ ವಿಘ್ನೇಶ್ ಶಿವನ್ ಜೊತೆ ಲೇಡಿ ಸೂಪರ್ ಸ್ಟಾರ್ ನಯನತಾರಾ ಸಪ್ತಪದಿ ತುಳಿದಿದ್ದಾರೆ.

ಮದುವೆಯ ನಂತರ ತಾವು ಆರಾಧಿಸುವ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗಿದ್ದರು. ಅಲ್ಲಿ ನಯನತಾರಾ ಎಡವಟ್ಟು ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಹೀಗಾಗಿ ಸೋಷಿಯಲ್ ಮೀಡಿಯಾದಲ್ಲಿ ನಯನತಾರಾ ಅವರ ಬಗ್ಗೆ ಭಾರೀ ವಿರೋಧ ವ್ಯಕ್ತವಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ತಿರುಪತಿ ತಿರುಮಲ ಅಧಿಕಾರಿಗಳ ಮಧ್ಯಪ್ರವೇಶ ಕೂಡ ಆಗಿದೆ.

ಈ ಜೋಡಿ ಸಾಂಪ್ರದಾಯಿಕ ಉಡುಪಿನಲ್ಲೇ ದೇವಸ್ಥಾನ ಆವರಣಕ್ಕೆ ಪ್ರವೇಶ ಮಾಡಿದರು. ಹಳದಿ ಬಣ್ಣದ ಸೀರೆಯಲ್ಲಿ ನಯನತಾರಾ ಕಂಗೊಳಿಸುತ್ತಿದ್ದರೆ, ಬಿಳಿ ಬಣ್ಣದ ಅಂಗಿ ಮತ್ತು ಪಂಚೆ ತೊಟ್ಟಿದ್ದರು ವಿಘ್ನೇಶ್. ಆದರೆ, ನಯನತಾರಾ ದೇವಸ್ಥಾನದ ಆವರಣದ ಒಳಗೆ ಚಪ್ಪಲಿ ಧರಿಸಿದ್ದರು ಎನ್ನುವುದೇ ಇದೀಗ ಆಕ್ರೋಶಕ್ಕೆ ಕಾರಣವಾಗಿದೆ.

ಪತಿ ವಿಘ್ನೇಶ್ ಬರಿಗಾಲಲ್ಲಿ ನಡೆದುಕೊಂಡು ಬಂದರೆ, ನಯನತಾರಾ ಚಪ್ಪಲಿ ಧರಿಸಿದ್ದರಂತೆ. ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆಯೇ ನಯನತಾರಾ ವಿರುದ್ಧ ಭಕ್ತರು ಮುಗಿಬಿದ್ದಿದ್ದರು. ವಿವಾದ ಸೃಷ್ಟಿ ಆಗುತ್ತಿದ್ದಂತೆಯೇ ತಿರುಮಲ ಅಧಿಕಾರಿಗಳು ಮಧ್ಯೆ ಪ್ರವೇಶಿಸಿ, ನಯನತಾರಾ ಚಪ್ಪಲಿ ಧರಿಸಿ ಓಡಾಡಿದ ಸ್ಥಳದಲ್ಲಿ ಭಕ್ತರಿಗೆ ಪಾದರಕ್ಷೆಗಳನ್ನು ತೊಡಲು ಅವಕಾಶವಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಡಿಸೆಂಬರ್ 12 & 13, ಶಿವಮೊಗ್ಗದಲ್ಲಿ ಕಂದಾಯ ಇಲಾಖಾ ನೌಕರರಿಂದ ” ಕಂದಾಯೋತ್ಸವ”- ವಿ.ಅಭಿಷೇಕ್

DC Shivamogga ಒತ್ತಡದಲ್ಲಿ ಕಾರ್ಯನಿರ್ವಹಿಸುವ ಕಂದಾಯ ಇಲಾಖೆಯ ಅಧಿಕಾರಿ-ಸಿಬ್ಬಂಧಿಗಳು ತಮ್ಮ...

MESCOM ಡಿಸೆಂಬರ್ 11 & 12 ಶಿವಮೊಗ್ಗ ನಗರಕ್ಕೆ ಕುಡಿಯುವ ನೀರಿಲ್ಲ, ಒಳ ಮಂಡಳಿ ಪ್ರಕಟಣೆ

MESCOM ಶಿವಮೊಗ್ಗ ನಗರದ ಮಂಡ್ಲಿ ಭಾಗದಲ್ಲಿ ಮೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ...

Department of School Education ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲೆಗೆ ಸಮಗ್ರ ಚಾಂಪಿಯನ್ ಪಟ್ಟ

Department of School Education ಬೆಂಗಳೂರಿನಲ್ಲಿ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ...

Good Luck Care Center ದಾನದಿಂದ ತೃಪ್ತಿ ಸಿಗುತ್ತದೆ- ಹೇಮಾ ಬಿ.ಜಿ.ಗೋಣೂರು

ನಾವು ಮಾಡಿದ ಸೇವೆ ದಾನ ಧರ್ಮ ನಮಗೆ ಒಂದಲ್ಲ ಒಂದು ರೀತಿಯಿಂದ...