Sunday, May 24, 2026
Sunday, May 24, 2026

ರಾಷ್ಟ್ರಪತಿ ಚುನಾವಣೆ ಹಿನ್ನೆಲೆ: ಬಿಜೆಪಿಯೇತರ ಪಕ್ಷಗಳ ಸಭೆ ಕರೆದ ದೀದಿ

Date:

ರಾಷ್ಟ್ರಪತಿ ಚುನಾವಣೆ ಘೋಷಣೆಯಾಗಿರುವ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ನಾಯಕಿ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 22 ಬಿಜೆಪಿಯೇತರ ಪಕ್ಷಗಳ ಸಭೆ ಕರೆದಿದ್ದಾರೆ.

ಕಾಂಗ್ರೆಸ್‌ ಸೇರಿದಂತೆ ಎನ್‌ಡಿಎ ಮಿತ್ರಕೂಟದಿಂದ ಹೊರಗಿರುವ ಪಕ್ಷಗಳ ಸಭೆಯನ್ನು ಜೂ.15ರಂದು ದೆಹಲಿಯಲ್ಲಿ ಕರೆಯಲಾಗಿದೆ.
ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಬಿಜೆಪಿ ಆಡಳಿತವಿಲ್ಲದ ಎಲ್ಲಾ 8 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

ಈ ಹಿನ್ನೆಲೆಯಲ್ಲಿ ಜೂ.15ರಂದು ನವದೆಹಲಿಯ ಕಾನ್ಸ್ಟಿಟ್ಯೂಶನ್ ಕ್ಲಬ್‌ನಲ್ಲಿ ನಾವೆಲ್ಲರೂ ಒಟ್ಟಾಗಿ ಸೇರೋಣವೆಂದು ನಿಮ್ಮಲ್ಲಿ ಕೋರಿಕೊಳ್ಳುತ್ತೇನೆ ಎಂದು ತಮ್ಮ ಪತ್ರದಲ್ಲಿ ದೀದಿ ಉಲ್ಲೇಖಿಸಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ, ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಮತ್ತು ಪಂಜಾಬ್ ಸಿಎಂ ಭಗವಂತ್ ಮಾನ್ ಸೇರಿದಂತೆ ಬಿಜೆಪಿಯೇತರ ರಾಜಕೀಯ ಪಕ್ಷಗಳಿಗೆ ಮಮತಾ ಬ್ಯಾನರ್ಜಿ ಈ ಸಂದೇಶ ಕಳುಹಿಸಿದ್ದಾರೆಂದು ಮೂಲಗಳು ವರದಿ ಮಾಡಿವೆ.

ರಾಷ್ಟ್ರಪತಿ ಚುನಾವಣೆಯು ಘೋಷಣೆಯಾಗಿದೆ. ಇದು ಒಗ್ಗೂಡಲು ಪ್ರಶಸ್ತವಾದ ಸಮಯ. ಈ ಅವಕಾಶದ ಲಾಭ ಪಡೆದು ಎಲ್ಲಾ ಪ್ರಗತಿಪರ ವಿರೋಧ ಪಕ್ಷಗಳು ಒಟ್ಟಾಗಿ ಭಾರತದ ರಾಜಕೀಯದಲ್ಲಿ ಹೊಸ ಭವಿಷ್ಯ ಬರೆಯಲು ಸಜ್ಜಾಗಬೇಕಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ತಾತ್ಕಾಲಿಕ ನೇರ ನೇಮಕಾತಿ ಮೂಲಕಖಾಯಂ ಶಿಕ್ಷಕರ ನೇಮಕಾತಿವರೆಗೆ ಅತಿಥಿ ಶಿಕ್ಷಕರ ನೇಮಕ

Shimoga News 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು...

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...