Wednesday, March 25, 2026
Wednesday, March 25, 2026

ಗಡಿರೇಖೆಯಲ್ಲಿ ಉದ್ವಿಗ್ನತೆ: ಭಾರತದ ಮೇಲೆ ಗೂಬೆ ಕೂರಿಸಿದ ಚೀನಾ

Date:

ಭಾರತ ಮತ್ತು ಚೀನ ನಡುವಿನ ನೈಜ ಗಡಿ ರೇಖೆಯಲ್ಲಿ ಗಡಿಯಲ್ಲಿ ಆಗಾಗ ಉಂಟಾಗುತ್ತಿರುವ ಶಾಂತಿ ಭಂಗದ ಪ್ರಕರಣಗಳಿಗೆ, ಅಲ್ಲಿ ಎದ್ದಿರುವ ಉದ್ವಿಗ್ನತೆಗೆ ಭಾರತವೇ ಕಾರಣ ಎಂದು ಚೀನದ ವಿದೇಶಾಂಗ ಸಚಿವ ವೀ ಫೆಂಘೆ ಆರೋಪಿಸಿದ್ದಾರೆ.

ಸಿಂಗಾಪುರದಲ್ಲಿ ನಡೆದ ಶಾಂಗ್ರಿ ಲಾ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,

ಘರ್ಷಣೆಗೆ ಪ್ರಚೋದನೆ ನೀಡಿದ್ದೇ ಭಾರತ ಎಂಬುದು ನಮಗೆ ತಿಳಿದುಬಂದಿದೆ. ಗಡಿಯಲ್ಲಿ ಭಾರತ ಹೆಚ್ಚೆಚ್ಚು ಶಸ್ತ್ರಾಸ್ತ್ರಗಳನ್ನು ಜಮಾವಣೆ ಮಾಡಿದ್ದಲ್ಲದೆ, ಹೆಚ್ಚುವರಿ ಯೋಧರನ್ನು ಚೀನ ಗಡಿಯ ಕಡೆಗೆ ರವಾನಿಸಿದೆ. ಇಂಥ ಘಟನೆಗಳು ಘರ್ಷಣೆಗೆ ಪ್ರೇರಣೆ ನೀಡುತ್ತವೆ” ಎಂದಿದ್ದಾರೆ.
ಎಲ್‌ಎಸಿಯಲ್ಲಿ ಚೀನ ಸೈನಿಕರಿಂದ ಶಾಂತಿ ಭಂಗವಾಗುವ ನಿಟ್ಟಿನಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಗೆ ಭಾರತವೇ ನೇರ ಹೊಣೆ.
ಆಗಾಗ ಅಲ್ಲಿ ಆಗಿರುವ ಗಲಭೆಗಳಿಗೆ ಭಾರತವೇ ಕಾರಣ ಎಂದರು.

ಸಂವಾದದಲ್ಲಿ ಹಾಜರಿದ್ದ ಅಮೆರಿಕದ ಚಿಂತಕರ ಚಾವಡಿಯ ಸದಸ್ಯರಾದ ಡಾ. ತನ್ವಿ ಮದನ್‌, “ಎಲ್‌ಎಸಿಯಲ್ಲಿ 2 ವರ್ಷಗಳ ಹಿಂದೆ ಚೀನ ಸೈನಿಕರು ಶಾಂತಿ ಉಲ್ಲಂಘಿಸಿದ್ದರು. ಈಗಲೂ ಗಡಿಯಲ್ಲಿ ಅನಗತ್ಯವಾಗಿ ಚೀನ ತನ್ನ ಸೈನಿಕರನ್ನು ಹೆಚ್ಚುವರಿ ಸಂಖ್ಯೆಯಲ್ಲಿ ಜಮಾಯಿಸಿದೆ.

ಇದಕ್ಕೆ ಪ್ರತಿಯಾಗಿ ಭಾರತವೂ ತನ್ನ ಸೇನೆಯನ್ನು ಜಮಾವಣೆ ಮಾಡುವಂತಾಗಿದೆ. ಈ ಸಮಸ್ಯೆಯನ್ನು ಇತ್ಯರ್ಥಗೊಳಿಸುವಲ್ಲಿ ಚೀನ ಯಾವ ಕ್ರಮ ಕೈಗೊಂಡಿದೆ ಎಂಬ ಪ್ರಶ್ನೆಯನ್ನು ಕೇಳಿದಾಗ, ವೆಯ್‌ ಮೇಲಿನಂತೆ ಉತ್ತರಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...